ಐಐಟಿ ಜೆಇಇ ಪರೀಕ್ಷೆ: ಒಸಿಐ ಮತ್ತು ಪಿಐಒಗಳು ವಿದೇಶಿಗರಲ್ಲ

Date:

Advertisements
  • ಒಸಿಐ ಮತ್ತು ಪಿಐಒಗಳಿಗೆ ಶೇ.10 ಮೀಸಲಾತಿ ಪರಿಗಣನೆ ಇಲ್ಲ
  • ಜೆಇಇ ಪರೀಕ್ಷೆ ಎದುಸಲಿರುವ 2.3 ಲಕ್ಷ ಭಾರತೀಯ ವಿದ್ಯಾರ್ಥಿಗಳು

ಭಾರತೀಯ ತಂತ್ರಜ್ಞಾನ ಸಂಸ್ಥೆಗೆ(ಐಐಟಿ) ಪ್ರವೇಶಾತಿ ಪಡೆಯಲು ಜೆಇಇ ಪರೀಕ್ಷೆ ಎದುರಿಸುವ ಸಾಗರೋತ್ತರ ಭಾರತೀಯ ನಾಗರಿಕರು (ಒಸಿಐ) ಮತ್ತು ಭಾರತೀಯ ಮೂಲದ ವ್ಯಕ್ತಿ (ಪಿಐಒ)ಗಳಿಗೆ ಸಂಬಂಧಿಸಿದಂತೆ ಕೆಲ ನಿಯಮ ಜಾರಿ ಮಾಡಲಾಗಿದೆ. ಈ ಹಿಂದೆ ಒಸಿಐ ಮತ್ತು ಪಿಐಒ ಶೇ.10 ಮೀಸಲಾತಿ ಇತ್ತು ಈಗ ಇದನ್ನು ಹಿಂಪಡೆದಿದ್ದು, ಮಂದಿನ ದಿನಗಳಿಂದ ಅವರನ್ನು ಭಾರತೀಯರು ಎಂದು ಪರಿಗಣಿಸಲಾಗುತ್ತದೆ ಎನ್ನಲಾಗಿದೆ.

ಐಐಟಿ ಪ್ರವೇಶಾತಿಗೆ ಜಿಇಇ ಮುಖ್ಯ ಪರೀಕ್ಷೆ ಎದುರಿಸುವುದು ಕಡ್ಡಾಯವಾಗಿರುತ್ತದೆ. ಆದರೆ, ಸಾಗರೋತ್ತರ ಒಸಿಐ ಮತ್ತು ಪಿಐಒ ಸಮುದಾಯಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳು ಪ್ರಸಕ್ತ ವರ್ಷ ಮಾತ್ರ ಜಿಇಇ (ಮೇನ್) ಪರೀಕ್ಷೆ ಬರೆಯುವ ಅಗತ್ಯವಿಲ್ಲ ಎಂದು  2023 ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಆ ಆದೇಶದ ಆಧಾರದ ಮೇಲೆ, ಐಐಟಿ ಗುವಾಹಟಿ ಪತ್ರಿಕಾ ಹೇಳಿಕೆ ಹೊರಡಿಸಿದೆ. ಒಸಿಐ ಮತ್ತು ಪಿಐಒಗಳನ್ನು ಭಾರತೀಯರು ಎಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?: ಎನ್‌ಸಿಇಆರ್‌ಟಿ ಯಡವಟ್ಟು | 12ನೇ ತರಗತಿಯ ಪಠ್ಯದಿಂದ ಗಾಂಧಿ ಕುರಿತ ಕೆಲ ಉಲ್ಲೇಖಗಳೇ ಮಾಯ!

Advertisements

 ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಇಇ ಸಂಘಟನಾ ಅಧ್ಯಕ್ಷ ಬಿಷ್ಣುಪಾದ ಮಂಡಲ್, “ಪ್ರಸಕ್ತ ವರ್ಷ ಮಾತ್ರ ಪಿಐಒ ಮತ್ತು ಒಸಿಐ ಮೂಲದ ವಿದ್ಯಾರ್ಥಿಗಳು ಜೆಇಇ (ಮೇನ್) ಎದುರಿಸುವ ಅವಶ್ಯಕತೆ ಇಲ್ಲ. ಮುಂಬರುವ ವರ್ಷದ ಬಗ್ಗೆ ಜಂಟಿ ಪ್ರವೇಶ ಮಂಡಳಿ (ಜೆಎಬಿ) ನಿರ್ಧರಿಸುತ್ತದೆ. ಈ ವರ್ಷ ಶೇ.10 ಮೀಸಲಾತಿ ಸಹ ಪರಿಗಣನೆಯಲ್ಲಿ ಇರುವುದಿಲ್ಲ” ಎಂದು ಹೇಳಿದ್ದಾರೆ.

2.3 ಲಕ್ಷ ಭಾರತೀಯ ವಿದ್ಯಾರ್ಥಿಗಳು ಐಐಟಿ ಪರೀಕ್ಷೆ ಎದುರಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

ದಾವಣಗೆರೆ | ಸರ್ಕಾರಿ ಶಾಲೆಗಳ ಸಬಲೀಕರಣ ವರದಿಯ 21ಅಂಶಗಳ ಜಾರಿಗೆ ಹೋರಾಟ ಸಮಿತಿ ಮನವಿ

ಶಿಕ್ಷಣ ಮೂಲಭೂತ ಹಕ್ಕು ಎಂಬ ಸಾಂವಿಧಾನಿಕ ಆಶಯವನ್ನು ರಾಜ್ಯ ಸರ್ಕಾರ ಎತ್ತಿ...

Download Eedina App Android / iOS

X