ಸಿಇಟಿ ಅಭ್ಯರ್ಥಿಗಳಿಗೆ ಆರ್‌ ಡಿ ಸಂಖ್ಯೆ ಸರಿಪಡಿಸಿಕೊಳ್ಳಿ ಎಂದ ಕೆಇಎ

Date:

  • ಜೂನ್‌ 6ರಿಂದ 12ರವರೆಗೆ ಆರ್ ಡಿ ನಂಬರ್ ತಿದ್ದುಪಡಿ ಮಾಡಿ ಎಂದ ಕೆಇಎ
  • ಅಭ್ಯರ್ಥಿಗಳು ನೀಡಿರುವ ಪ್ರಮಾಣ ಪತ್ರಗಳ ಆರ್‌ ಡಿ ಸಂಖ್ಯೆ ಸರಿಪಡಿಸಿಕೊಳ್ಳಿ

ಯುಜಿಸಿಇಟಿ 2023ರ ಪ್ರವೇಶ ಪರೀಕ್ಷೆ ಬರೆದಿರುವ 2.6 ಲಕ್ಷ ಅಭ್ಯರ್ಥಿಗಳ ಪೈಕಿ 80 ಸಾವಿರಕ್ಕೂ ಹೆಚ್ಚು ಮಂದಿ ಆರ್.ಡಿ ಸಂಖ್ಯೆಯನ್ನು ತಪ್ಪಾಗಿ ಅರ್ಜಿಯಲ್ಲಿ ನಮೂದಿಸಿದ್ದು, ಜೂನ್ 7ರಿಂದ 12ರವರೆಗೆ ತಿದ್ದುಪಡಿಗೆ ಕೊನೆಯ ಅವಕಾಶ ನೀಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸುವಾಗ ನಮೂದಿಸಿದ್ದ ಆರ್.ಡಿ ಸಂಖ್ಯೆಯನ್ನು ನೋಡಿ ತಿದ್ದುಪಡಿ ಮಾಡಿ ಎಂದು ಅಭ್ಯರ್ಥಿಗಳಿಗೆ ಸೂಚನೆ ನೀಡಿದೆ.

ಪರಿಶೀಲನೆಯ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳ ಹೆಸರು ಅಥವಾ ನಮೂದಿಸಿರುವ ಜಾತಿ ತಾಳೆಯಾಗದಿರುವುದು, ಪ್ರಮಾಣ ಪತ್ರವು ಚಾಲ್ತಿಯಲ್ಲಿ ಇಲ್ಲದೇ ಇರುವುದು, ಅಭ್ಯರ್ಥಿಗಳ ಹೆಸರಿನಲ್ಲಿ ಪ್ರಮಾಣ ಪತ್ರಗಳು ಇಲ್ಲದೇ ಇರುವುದು ಅಥವಾ ನಿಗದಿತ ನಮೂನೆಗಳಲ್ಲಿ ಪಡೆಯದೇ ಇರುವುದು, ಇನ್ನಿತರ ವಿವಿಧ ಕಾರಣಗಳಿಂದ ಆರ್‌ಡಿ ಸಂಖ್ಯೆಗಳು ತಾಳೆ ಹೊಂದದೇ ತಿರಸ್ಕೃತಗೊಂಡಿರುವ ಅಭ್ಯರ್ಥಿಗಳ ಪಟ್ಟಿ ಮಾಡಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆರ್‌ ಡಿ ನಂಬರ್‌ ತಿದ್ದುಪಡಿ ಮಾಡಲು ಪಟ್ಟಿಯಲ್ಲಿ ಹೆಸರು ಇರುವಂತಹ ಅಭ್ಯರ್ಥಿಗಳು ಮಾತ್ರ ಜೂನ್‌ 6ರಿಂದ 12ರವರೆಗೆ ಪ್ರಾಧಿಕಾರದ ಪೋರ್ಟಲ್‌ನಲ್ಲಿ ಅಭ್ಯರ್ಥಿಗಳ ಲಾಗಿನ್ ಮತ್ತು ಪಾಸ್‌ವರ್ಡ್ ನಮೂದಿಸಿ ಸರಿಯಾದ ಆರ್‌ಡಿ ಸಂಖ್ಯೆಯನ್ನು ದಾಖಲಿಸಿ ಹಾಗೂ ಇತರೆ ಮಾಹಿತಿಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಎಂದು ಹೇಳಿದೆ.

“ಕಳೆದ ಕೆಲವು ದಿನಗಳ ಹಿಂದೆ ವೃತ್ತಿಪರ ಕೋರ್ಸ್‌ಗಳಿಗಾಗಿ ಪ್ರವೇಶಾತಿ ಬಯಸಿ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಅಭ್ಯರ್ಥಿಗಳು ನೀಡಿರುವ ಪ್ರಮಾಣ ಪತ್ರಗಳ ಆರ್‌ ಡಿ ಸಂಖ್ಯೆಯನ್ನು ಸರಿಪಡಿಸಿಕೊಳ್ಳಿ ಇಲ್ಲದಿದ್ದರೇ, ಮೀಸಲಾತಿ ಸೌಲಭ್ಯಗಳು ರದ್ದಾಗಲಿವೆ” ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಲಿತರ ನ್ಯಾಯಯುತ ಬೇಡಿಕೆಗಳ ಅನುಷ್ಠಾನಕ್ಕೆ ‍ಸರ್ಕಾರ ಬದ್ಧ, ನಿಮ್ಮ ಋಣ ತೀರಿಸುತ್ತೇವೆ: ಡಿಕೆ ಶಿವಕುಮಾರ್

“ಅಭ್ಯರ್ಥಿಗಳು ಜಾತಿ/ಆದಾಯ/ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳ ಆರ್.ಡಿ ಸಂಖ್ಯೆಯನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳಿ ಇಲ್ಲದಿದ್ದರೆ, ಮೀಸಲಾತಿ ಸೌಲಭ್ಯ ರದ್ದಾಗಿ ಜನರಲ್ ಮೆರಿಟ್ ಕೋಟಾದಡಿ ಬರಬೇಕಾಗುತ್ತದ. ಹಾಗಾಗಿ, ಕೂಡಲೇ ಕಂದಾಯ ಇಲಾಖೆಯ ಆರ್‌ ಡಿ ಸಂಖ್ಯೆ ಜತೆ ತಾಳೆಯಾಗುವಂತೆ ಸರಿಪಡಿಸಿಕೊಳ್ಳಿ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವಿಪರೀತ ಸುಡುವ ಬಿಸಿಲು; ಸಾಂಕ್ರಾಮಿಕ ರೋಗಗಳ ಬಗ್ಗೆ ವೈದ್ಯರ ಎಚ್ಚರಿಕೆ

ವಿಪರೀತ ಸುಡುವ ಬಿಸಿಲಿನ ಹಿನ್ನಲೆಯಲ್ಲಿ ಸುಮಾರು 13 ಮಂದಿಗೆ ವಾಂತಿ ಬೇಧಿ...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...