ಪರೀಕ್ಷೆ ಬರೆಯಲಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕಿವಿಮಾತು

Date:

Advertisements

ಇಂದಿನಿಂದ (ಮಾರ್ಚ್‌ 21) ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಆರಂಭಗೊಳ್ಳುತ್ತಿವೆ. ಇದು ನಿಮ್ಮ ಬದುಕಿನ ಮೊದಲ ಅಥವಾ ಕೊನೆಯ ಪರೀಕ್ಷೆಯಲ್ಲ. ನರ್ಸರಿ/ಅಂಗನವಾಡಿಯಿಂದ ಆರಂಭಗೊಂಡು ಇಲ್ಲಿಯ ತನಕ ಸುಮಾರು 12 ವರ್ಷಗಳ ಕಾಲ ಅನೇಕ ಪರೀಕ್ಷೆಗಳನ್ನು ಎದುರಿಸಿ, ತೇರ್ಗಡೆಗೊಂಡು ಈ ಹಂತಕ್ಕೆ ತಲಪಿದ್ದೀರಿ.

ತಿಳಿದಿರಲಿ, ಶಾಲಾ ಕಾಲೇಜುಗಳ ಪರೀಕ್ಷೆಗಳಲ್ಲಿ ಪಾಸಾಗುವುದಕ್ಕಿಂತ ಬದುಕಿನ ಪರೀಕ್ಷೆಯಲ್ಲಿ ಪಾಸಾಗುವುದು ಬಹಳ ಮುಖ್ಯ. ಭಯಪಡಬೇಡಿ. ಒತ್ತಡಗಳಿಗೆ ಒಳಗಾಗಬೇಡಿ. ನಿಮಗೆ ತಿಳಿದಿರುವ, ಗೊತ್ತಿರುವ, ಓದಿರುವ ವಿಷಯಗಳನ್ನು ಚೆನ್ನಾಗಿ ಬರೆಯಿರಿ. ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿರಿ.

ಪ್ರತಿಯೊಂದು ಪರೀಕ್ಷೆಗೂ ಮುನ್ನಾ ದಿನ ರಾತ್ರಿ ಪ್ರವೇಶ ಪತ್ರ ಒಳಗೊಂಡಂತೆ, ಪರೀಕ್ಷೆಗೆ ಬೇಕಾದ ಎಲ್ಲ ಸಾಮಗ್ರಿಗಳನ್ನು ಸಿದ್ಧಪಡಿಸಿಟ್ಟುಕೊಂಡು, ಬೇಗ ನಿದ್ದೆ ಮಾಡಿರಿ. ಬೆಳಿಗ್ಗೆ ಬೇಗನೇ ಎದ್ದು ಸ್ನಾನ ಮಾಡಿ, ತಿಂಡಿ ತಿಂದು, ಒಂದು ಲೀಟರ್ ಶುದ್ದವಾದ ಕುಡಿಯುವ ನೀರನ್ನು ತೆಗೆದುಕೊಂಡು ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ನಿಮ್ಕ ಪರೀಕ್ಷಾ ಕೇಂದ್ರ ತಲಪಿರಿ.

Advertisements

ಪರೀಕ್ಷೆ ಬರೆಯುವಾಗ ಸಮಯ ಪಾಲನೆ ಮಾಡುವುದು ಮುಖ್ಯ ಎಂಬುದು ತಮಗೆ ಗೊತ್ತು. ಪ್ರಶ್ನೆ ಪತ್ರಿಕೆ ಕೈಸೇರಿದಾಗ ಎಲ್ಲ ಪ್ರಶ್ನೆಗಳನ್ನು ಒಮ್ಮೆ ಓದಿರಿ. ಮೊದಲಿಗೆ ತಮಗೆ ಗೊತ್ತಿರುವ, ಸುಲಭದ ಪ್ರಶ್ನೆಗಳಿಗೆ ಉತ್ತರ ಬರೆಯಲು ಆರಂಭಿಸಿರಿ. ಉತ್ತರ ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರ ನೆನಪಿಸಿಕೊಳ್ಳುತ್ತಾ ಕಾಲ ಹರಣ ಮಾಡಬೇಡಿ. ಗೊಂದಲಗಳಿರುವ ಅಥವಾ ಕಠಿಣ ಎನಿಸುವ ಪ್ರಶ್ನೆಗಳಿಗೆ ನಂತರ ಉತ್ತರ ಬರೆಯಿರಿ.

ಪ್ರತಿಯೊಂದು ಪರೀಕ್ಷೆ ಮುಗಿದು, ಪರೀಕ್ಷಾ ಕೇಂದ್ರದಿಂದ ಹೊರಗಡೆ ಬಂದ ನಂತರ, ಬರೆದಿರುವ ಉತ್ತರಗಳ ಸರಿ/ತಪ್ಪುಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಮುಂದಿನ ಪರೀಕ್ಷೆಗೆ ಓದಿ, ತಯಾರಿ ನಡೆಸುತ್ತಿರಿ. ಬದುಕಿನಲ್ಲಿ ಸೋಲು, ಗೆಲುವು ಇದ್ದಿದ್ದೇ. ಎಲ್ಲ ರೀತಿಯ ಸವಾಲುಗಳನ್ನು ಎದುರಿಸುವ ಎದೆಗಾರಿಕೆ ನಿಮಗಿರಲಿ.

ಎಲ್ಲ ಪರೀಕ್ಷೆಗಳು ನಿಮಗೆ ಸುಲಭವಾಗಲಿ. ಗೆದ್ದು ಬನ್ನಿ, ಆಲ್‌ ದಿ ಬೆಸ್ಟ್.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

ದಾವಣಗೆರೆ | ಸರ್ಕಾರಿ ಶಾಲೆಗಳ ಸಬಲೀಕರಣ ವರದಿಯ 21ಅಂಶಗಳ ಜಾರಿಗೆ ಹೋರಾಟ ಸಮಿತಿ ಮನವಿ

ಶಿಕ್ಷಣ ಮೂಲಭೂತ ಹಕ್ಕು ಎಂಬ ಸಾಂವಿಧಾನಿಕ ಆಶಯವನ್ನು ರಾಜ್ಯ ಸರ್ಕಾರ ಎತ್ತಿ...

Download Eedina App Android / iOS

X