ಸಿಬಿಎಸ್‌ಇ ಫಲಿತಾಂಶ: ಎರಡನೇ ಸ್ಥಾನ ಪಡೆದ ಸಿಲಿಕಾನ್ ಸಿಟಿ

Date:

ಕೇಂದ್ರಿಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ)ಯ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಬಿಡುಗಡೆಯಾಗಿದ್ದು, ಬೆಂಗಳೂರು ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ.   

ಸಿಬಿಎಸ್‌ಇ ಪರೀಕ್ಷೆಯಲ್ಲಿ ಹೆಚ್ಚಿನ ಫಲಿತಾಂಶ ಪಡೆದ 16 ನಗರಗಳ ಪೈಕಿ ಕೇರಳದ ತಿರುವನಂತಪುರಂ ಮೊದಲ ಸ್ಥಾನದಲ್ಲಿದೆ. ಕರ್ನಾಟಕದ ಬೆಂಗಳೂರು ನಂತರದ ಸ್ಥಾನದಲ್ಲಿದೆ.

ಸಿಬಿಎಸ್‌ಸಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಶೇ.93.12ರಷ್ಟು ಹಾಗೂ ದ್ವಿತಿಯ ಪಿಯುಸಿಯಲ್ಲಿ ಶೇ.87.33ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಶೇ.99.18 ಬಂದಿದ್ದು, ದ್ವಿತೀಯ ಪಿಯುಸಿ ಫಲಿತಾಂಶ ಶೇ.98.64 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹತ್ತನೇ ತರಗತಿಯ ರಾಜ್ಯವಾರು ಸಾಧನೆಯಲ್ಲಿ ಕರ್ನಾಟಕ ಆರನೇ ಸ್ಥಾನ ಪಡೆದುಕೊಂಡಿದೆ. ಈ ಪರೀಕ್ಷೆಗೆ ರಾಜ್ಯದ ಹಾಜರಾದ 74,842 ವಿದ್ಯಾರ್ಥಿಗಳಲ್ಲಿ 74,230 ಮಂದಿ ಪಾಸಾಗಿದ್ದಾರೆ. ಹತ್ತನೇ ತರಗತಿ ಫಲಿತಾಂಶದಲ್ಲಿ ರಾಜ್ಯ ಮೂರನೇ ಸ್ಥಾನ ಪಡೆದಿದೆ. 10 ನೇ ತರಗತಿಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ 19,468 ವಿದ್ಯಾರ್ಥಿಗಳಲ್ಲಿ 19,203 ಮಂದಿ ಉತ್ತೀರ್ಣರಾಗಿದ್ದಾರೆ. ಶೇ. 94.2 ರಷ್ಟು ಉತ್ತೀರ್ಣರಾಗಿದ್ದಾರೆ. ಬಾಲಕಿಯರು ಶೇ 92.2ರಷ್ಟಿದೆ ಉತ್ತೀರ್ಣರಾಗಿದ್ದಾರೆ. ಈ ವರ್ಷ ದೇಶಾದ್ಯಂತ ಒಟ್ಟಾರೆ ಉತ್ತೀರ್ಣ ಶೇಕಡಾವಾರು 87.3 ಆಗಿದೆ.

“ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ ಉಲ್ಬಣಗೊಂಡಿದ್ದ ಕಾರಣ ಪ್ರಸಕ್ತ ವರ್ಷ ದ್ವಿತೀಯ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿರಲಿಲ್ಲ. ಹೀಗಾಗಿ, ಕಳೆದ ವರ್ಷಕ್ಕೆ ಹೋಲಿಸಿಕೊಂಡರೆ ಈ ಬಾರಿಯ ಫಲಿತಾಂಶ ಕೆಳಗಾಗಿದೆ. ಆದರೂ. ಶೇ.80 ಕ್ಕೂ ಹೆಚ್ಚು ಫಲಿತಾಂಶ ಗಳಿಸಿರುವುದು ಉತ್ತಮ ಪ್ರದರ್ಶನ ಎಂದು ಸಿಬಿಎಸ್‌ಸಿಯಿಂದ ಮಾನ್ಯತೆ ಪಡೆದಿರುವ ಶಾಲೆಗಳ ಪ್ರಾಂಶುಪಾಲರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...