ಸಿಇಟಿ, ಸಿಯುಇಟಿ ಒಂದೇ ದಿನ ನಿಗದಿ

Date:

Advertisements

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮತ್ತು ಕೇಂದ್ರಿಯ ವಿಶ್ವವಿದ್ಯಾನಿಲಯದ ಪದವಿ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪರೀಕ್ಷೆ (ಸಿಯುಇಟಿ) ಒಂದೇ ದಿನ ನಿಗದಿಯಾಗಿದೆ. ಇದರಿಂದಾಗಿ, ರಾಜ್ಯದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ ಎಂದು ತಿಳಿದುಬಂದಿದೆ.

ಎರಡನೇ ಆವೃತ್ತಿಯ ಸಿಯುಇಟಿ–ಯುಜಿ ಪರೀಕ್ಷೆಯು ಇದೇ 21 ರಿಂದ 31ರವರೆಗೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ಟಿಎ) ಹೇಳಿದೆ. ಅದೇ ದಿನ ಕರ್ನಾಟಕದಲ್ಲಿ ಸಿಇಟಿ ಇರುವ ಕಾರಣ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂದು ಪೋಷಕರು ದೂರಿದ್ದಾರೆ.

ಇಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ಕೃಷಿ ವಿಜ್ಞಾನ, ಫಾರ್ಮಸಿ ಮತ್ತು ಶುಶ್ರೂಷೆಯಂತಹ ವಿವಿಧ ಕಾರ್ಯಕ್ರಮಗಳ ಪ್ರವೇಶಕ್ಕೆ ಪ್ರಮುಖವಾದ ಸಿಇಟಿ ಮೇ 20 ಮತ್ತು 21ರಂದು ನಿಗದಿಪಡಿಸಲಾಗಿದೆ. ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪತ್ರಿಕೆಗಳು ಭಾನುವಾರದಂದು ನಡೆಯಲಿವೆ. ಅದೇ ದಿನ ದೆಹಲಿ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಸೇರಿದಂತೆ ಹಲವಾರು ವಿಶ್ವವಿದ್ಯಾಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಆಯೋಜಿಸಿರುವ ಸಿಯುಇಟಿ-ಯುಜಿ ಪರೀಕ್ಷೆ ನಡೆಸಲಾಗುತ್ತಿದೆ.

Advertisements

ಕೆಲವೆಡೆ ನೋಂದಾಯಿತ ಅಭ್ಯರ್ಥಿಗಳ ಸಂಖ್ಯೆ ಅಧಿಕವಾಗಿದೆ. ಇಂತಹ ನಗರಗಳಲ್ಲಿ ಜೂನ್‌ 1, 2 ಮತ್ತು ಜೂನ್‌ 5, 6ರಂದೂ ಪರೀಕ್ಷೆ ನಡೆಸಲಾಗುತ್ತದೆ. ಜೊತೆಗೆ ಮೀಸಲು ಜೂನ್‌ 7 ಮತ್ತು 8 ದಿನಗಳೂ ಇರಲಿವೆ ಎಂದು ಎನ್‌ಟಿಎ ಹಿರಿಯ ನಿರ್ದೇಶಕಿ (ಪರೀಕ್ಷೆ) ಸಾಧನಾ ಪರಶಾರ್‌ ಹೇಳಿದ್ದಾರೆ.

“ನಾವು ಸಿಇಟಿ ಆರಂಭವಾಗುವ ವೇಳಾ ಪಟ್ಟಿಯನ್ನು ಒಂದು ತಿಂಗಳ ಹಿಂದೆಯೇ ನಿಗದಿ ಪಡಿಸಿದ್ದೆವು. ಆದರೆ, ಈ ಬಗ್ಗೆ ಎನ್‌ಟಿಎ ಕಾಳಜಿ ವಹಿಸಿ ಪರಿಷ್ಕೃತ ವೇಳಾಪಟ್ಟಿ ಸಿದ್ದಪಡಿಸಬೇಕಿತ್ತು. ಕರ್ನಾಟಕದ ವಿದ್ಯಾರ್ಥಿಗಳು ಸಿಯುಇಟಿ-ಯುಜಿ ಪರೀಕ್ಷೆ ಎದುರಿಸುವುದಿಲ್ಲ. ಎರಡೂ ಪರೀಕ್ಷೆ ಬರೆಯುತ್ತಿರುವ ಆಕಾಂಕ್ಷಿಗಳು ಯಾರ್‍ಯಾರು ಇದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ” ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X