ಪ್ರಮಾಣವಚನ ಹಿನ್ನೆಲೆ | ಸಿಇಟಿ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ

Date:

ಸಿಇಟಿ ಇರುವ ದಿನವೇ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಇರುವುದರಿಂದ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಸಂಚಾರ ದಟ್ಟಣೆಯಲ್ಲಿ ಸಿಲುಕದಿರಲು ಬೆಂಗಳೂರು ಸಂಚಾರ ಪೊಲೀಸ್ ವಿಭಾಗದ ವಿಶೇಷ ಆಯುಕ್ತ ಡಾ.ಎಂ ಎ ಸಲೀಂ ಸೂಚನೆ ಹೊರಡಿಸಿದ್ದಾರೆ.

- Advertisement -

ಪರೀಕ್ಷಾ ಕೇಂದ್ರಗಳಿಗೆ ತೆರಳುವವರು ಕಂಠೀರವ ಸ್ಟೇಡಿಯಂ ಸಮೀಪವಿರುವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಬೆಳಗ್ಗೆ 8.30ರ ಒಳಗಾಗಿ ಕೇಂದ್ರಗಳಿಗೆ ತಲುಪುವಂತೆ ಸೂಚನೆ ನೀಡಲಾಗಿದೆ. ಪ್ರತ್ಯೇಕವಾಗಿ ಬಿಷಪ್ ಕಾಟನ್ ಮಹಿಳಾ ಪದವಿಪೂರ್ವ ಕಾಲೇಜು, ಗುಡ್ ವಿಲ್ ಬಾಲಕಿಯರ ಪದವಿಪೂರ್ವ ಕಾಲೇಜು, ಸೆಂಟ್ ಜೋಸೆಫ್ಸ್ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಬರೆಯುವವರು ಬೆಳಗ್ಗೆ 8.30ಕ್ಕೆ ಬರಲು ಸೂಚನೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪರೀಕ್ಷಾ ಕೇಂದ್ರಕ್ಕೆ ತಲುಪುವಲ್ಲಿ ಸಂಕಷ್ಟ ಎದುರಿಸುತ್ತಿರುವ ಯಾವುದೇ ವಿದ್ಯಾರ್ಥಿಗೆ ಸಂಚಾರ ಸಂಬಂಧಿತ ಸಹಾಯ ಬೇಕಿದ್ದಲ್ಲಿ, ರಸ್ತೆಯಲ್ಲಿ ಕರ್ತವ್ಯನಿರತ ಸಂಚಾರ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.

ಮಧ್ಯಾಹ್ನದ ಸಿಇಟಿ ಪರೀಕ್ಷೆಗೆ ಸೆಂಟ್ ಜೋಸೆಫ್ ಪಿಯು ಇಂಡಿಯನ್ ಕಾಲೇಜು, ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳು ಸೆಂಟ್ ಮಾರ್ಕ್ಸ್ ರಸ್ತೆ, ವಿಠಲ್ ಮಲ್ಯ ರಸ್ತೆ ಮೂಲಕ ಬಂದು ಯೂಬಿ ಸಿಟಿಯ ಮುಂಭಾಗದ ಗೇಟ್‌ನಿಂದ ಕಾಲೇಜಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಸೆಂಟ್ ಜೋಸೆಫ್ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಅಗತ್ಯ ಊಟೋಪಚಾರ ಏರ್ಪಡಿಸಲಾಗುತ್ತದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಸೆಂಟ್ ಜೋಸೆಫ್ ಪಿಯು ಕಾಲೇಜಿನ ಅಧಿಕಾರಿಗಳು ಹೇಳಿದ್ದಾರೆ.

ನಗರದ ಯಾವುದಾದರೂ ರಸ್ತೆಯಲ್ಲಿ ವಾಹನ ಕೆಟ್ಟು ನಿಂತಲ್ಲಿ ಅಥವಾ ಅಪಘಾತ ಸಂಭವಿಸಿದಲ್ಲಿ ಗಮನಿಸಿದ ಕೂಡಲೇ ಸಂಚಾರ ನಿಯಂತ್ರಣ ಕೋಣೆ ದೂರವಾಣಿ ಸಂಖ್ಯೆ-080-22943131 ಅಥವಾ 080-22943030 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎನ್ನಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಮೇ 20 ಮತ್ತು 21ರಂದು ಎರಡು ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯುವ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಿ ಎಂದು ಡಾ.ಎಂ ಎ ಸಲೀಂ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿರುವಂತೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು ಸಹ ತೆರೆಯುವಂತೆ ಇಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...