ಖಾಸಗಿ ಶಾಲೆಗಳು ಶುಲ್ಕದ ವಿವರ ಪ್ರಕಟಿಸುವುದು ಕಡ್ಡಾಯ

Date:

Advertisements

ಖಾಸಗಿ ಶಾಲೆಗಳು ಹೆಚ್ಚು ಶಾಲಾ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪಗಳ ಕೇಳಿಬರುತ್ತಿರುವ ಹಿನ್ನೆಲೆ, ಖಾಸಗಿ ಶಾಲೆಗಳು ಪ್ರವೇಶಾತಿ ಶುಲ್ಕದ ವಿವರವನ್ನು ಕಡ್ಡಾಯವಾಗಿ ಪ್ರಕಟಣೆ ಮಾಡಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.

ಮೇ 29ರಿಂದ ಈ ವರ್ಷದ ಶೈಕ್ಷಣಿಕ ವರ್ಷ ಆರಂಭವಾಗುತ್ತಿದೆ. ಈಗಾಗಲೇ ಎಲ್ಲ ಪರೀಕ್ಷೆಗಳು ಪೂರ್ಣಗೊಂಡು ಶಾಲೆಗಳಿಗೆ ಬೇಸಿಗೆ ರಜೆ ಘೋಷಿಸಲಾಗಿದೆ. ಕೆಲ ಖಾಸಗಿ ಶಾಲೆಗಳು ಪ್ರವೇಶಾತಿ ಪ್ರಕ್ರಿಯೆ ಆರಂಭಿಸಿದ್ದು, ಮನಬಂದಂತೆ ಶುಲ್ಕ ವಿಧಿಸಿ ಪೋಷಕರನ್ನು ಸುಲಿಗೆ ಮಾಡುತ್ತಿವೆ. ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಖಾಸಗಿ ಶಾಲೆಗಳ ಶುಲ್ಕದ ವಿವರ ಪ್ರಕಟಿಸುವುದು ಕಡ್ಡಾಯ ಎಂದಿದೆ.

ಶುಲ್ಕದ ವಿವರದೊಂದಿಗೆ ಹಲವು ನಿಯಮಗಳನ್ನು ಜಾರಿ ಮಾಡಿದ್ದು, ವಿದ್ಯಾರ್ಥಿ ಹಿಂದೆ ಓದುತ್ತಿದ್ದ ಶಾಲೆ ತೊರೆದು ಬೇರೆ ಶಾಲೆಗೆ ಪ್ರವೇಶ ಪಡೆದ ಸಂದರ್ಭದಲ್ಲಿ ತಕ್ಷಣವೇ ವರ್ಗಾವಣೆ ಪತ್ರ ನೀಡಬೇಕು ಎಂದು ಆದೇಶಿಸಿದೆ.

Advertisements

ಸಿಬಿಎಸ್‌ಸಿ, ಐಸಿಎಸ್‌ಸಿ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಡೊನೇಷನ್ ಪಡೆಯಬಾರದು ಎಂದು ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಿದೆ. ಮಗುವಿನ ಪ್ರವೇಶಕ್ಕೆ ಪೋಷಕರಿಗೆ ಪ್ರವೇಶ ಪರೀಕ್ಷೆ ನಡೆಸಬಾರದೆಂದು ಸೂಚಿಸಲಾಗಿದೆ. ನಿಯಮಗಳನ್ನು ಉಲ್ಲಂಘಿಸಿದ ಶಾಲೆಗಳಿಗೆ ಒಂದು ಲಕ್ಷ ರೂಪಾಯಿ ದಂಡ, ಇದು ಪುನರಾವರ್ತನೆ ಆದರೆ ದಿನಕ್ಕೆ 10 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ?: ಕನ್ನಡದಲ್ಲೂ ಬರೆಯಬಹುದು ಸಿಎಪಿಎಫ್ ಪರೀಕ್ಷೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X