ಪರೀಕ್ಷೆ | ಮೌಲ್ಯಮಾಪಕರಿಗೆ ಮೊದಲು ತರಬೇತಿ ಕೊಡಿ: ವಿವಿಗೆ ಹೈಕೋರ್ಟ್ ಸೂಚನೆ

Date:

Advertisements

ಮೌಲ್ಯಮಾಪನದಲ್ಲಿ ಆಗುವ ವ್ಯತ್ಯಾಸವು ಮತ್ತು ವ್ಯತ್ಯಾಸದ ಕಾರಣಕ್ಕಾಗಿ ಪರೀಕ್ಷಾರ್ಥಿಗಳು ಅನುತ್ತೀರ್ಣರಾದರೆ ವಿದ್ಯಾರ್ಥಿಗಳು, ಅವರ ಕುಟುಂಬಸ್ಥರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ಮಾತ್ರವಲ್ಲದೆ, ಸಮಾಜ, ಕಾಲೇಜು ಹಾಗೂ ವಿಶ್ವವಿದ್ಯಾಲಯದ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ. ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುವವರಿಗೆ ಮೊದಲು ತರಬೇತಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.

ರಾಜೀವ್ ಗಾಂಧಿ ಆರೋಪ ವಿಶ್ವವಿದ್ಯಾಲಯದ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಎಂಬವರು ಪರೀಕ್ಷೆಗಳ ಥಿಯರಿ ಪತ್ರಿಕೆಗಳಗೆ ಅನಿಯಮಿತವಾಗಿ ಅಂಕಗಳನ್ನು ನೀಡಲಾಗುತ್ತಿದೆ ಎಂದು ಆರೋಪಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್, “ವಿದ್ಯಾರ್ಥಿಗಳು ಅನುತ್ತೀರ್ಣರಾದರೆ, ಅದು ಅವರ ಆತ್ಮವಿಶ್ವಾಸದ ಮೇಲೆ ಪರಿಣಾಮ ಬೀರಬಹುದು. ಅದಕ್ಕಾಗಿ ಸರಿಯಾದ ರೀತಿಯಲ್ಲಿ ಮೌಲ್ಯಮಾಪನ ಮಾಡಬೇಕು. ಮೌಲ್ಯಮಾಪನ ಮಾಡುವವರಿಗೆ ಅಗತ್ಯ ತರಬೇತಿ ನೀಡಬೇಕು” ಎಂದು ರಾಜೀವ್ ಗಾಂಧಿ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದ್ದಾರೆ.

“ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಸಾವಿರಾರು ಪ್ರಕರಣಗಳು ಬರುತ್ತಿವೆ. ಅವುಗಳಲ್ಲಿ ಹೆಚ್ಚಿನವು ಮೌಲ್ಯಮಾಪನದಲ್ಲಿನ ವ್ಯತ್ಯಾಸಕ್ಕೆ ಸಂಬಂಧಿಸಿವೆ. ಆಡಳಿತಾತ್ಮಕ ತೊಂದರೆಗಳ ಕಾರಣಕ್ಕಾಗಿ ಜವಾಬ್ದಾರಿಯನ್ನು ನಿರಾಕರಿಸಲು ಅಥವಾ ತ್ಯಜಿಸಲು ಸಾಧ್ಯವಿಲ್ಲ. ಇಂತಹ ಪ್ರಕರಣಗಳಲ್ಲಿ ಶೈಕ್ಷಣಿಕ ಮಂಡಳಿಯು ಯಾವ ರೀತಿಯ ಕ್ರಮ ತೆಗೆದುಕೊಂಡಿದೆ ಎಂಬುದನ್ನು ಪರಿಶೀಲಿಸಬೇಕಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

Advertisements

“ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವಾಗಲೇ ಅವುಗಳಿಗೆ ಮಾದರಿ ಉತ್ತರಗಳು ಅಥವಾ ಪ್ರಮುಖ ಉತ್ತರಗಳನ್ನು ಪ್ರಶ್ನೆ ಪತ್ರಿಕೆ ಹೊಂದಿಸಿದವರಿಂದಲೇ ಸಿದ್ದಪಡಿಸಬಹುದು. ಇದು ವಿಶ್ವವಿದ್ಯಾಲಯದ ಮೇಲೆ ಯಾವುದೇ ರೀತಿಯ ಆಡಳಿತಾತ್ಮಕ ಒತ್ತಡ ಉಂಟುಮಾಡುವುದಿಲ್ಲ. ಬದಲಾಗಿ, ವಿದ್ಯಾರ್ಥಿಗಳು ಎದುರಿಸುತ್ತಿರುವ ತೊಂದರೆಗಳನ್ನು ಪರಿಹರಿಸಲು ನೆರವಾಗುತ್ತದೆ” ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X