ಬಿಎಸ್ಸಿ ನರ್ಸಿಂಗ್ ‘ಸಿಇಟಿ’ಗೆ ಅರ್ಜಿ ಆಹ್ವಾನ

Date:

Advertisements

ಬಿಎಸ್ಸಿ ನರ್ಸಿಂಗ್ ಪರೀಕ್ಷೆಗೆ ಈ ವರ್ಷದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಕಡ್ಡಾಯ ಎಂದು ಪ್ರಕಟಣೆಯಾದ ಬೆನ್ನಲ್ಲೆ, ಆನ್‌ಲೈನ್‌ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.

ಮ್ಯಾನೆಜ್‌ಮೆಂಟ್ ಸೀಟಿಗಾಗಿ ಹಲವು ವಿದ್ಯಾರ್ಥಿಗಳು ಪರದಾಡುವುದನ್ನು ತಪ್ಪಿಸುವ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸಕ್ತ ವರ್ಷದಿಂದ ಬಿಎಸ್ಸಿ ನರ್ಸಿಂಗ್‌ ವಿಷಯಕ್ಕೂ ಸಿಇಟಿ ಕಡ್ಡಾಯ ಮಾಡಿದೆ. ಅರ್ಜಿ ಸಲ್ಲಿಕೆಗೆ ಏ.22 ಕೊನೆಯ ದಿನಾಂಕವಾಗಿದೆ.

ಬಿಎಸ್ಸಿ (ನರ್ಸಿಂಗ್) ಕೋರ್ಸ್‌ಗಳಿಗೆ ಸಿಇಟಿ ಮೂಲಕ ಪ್ರವೇಶಾತಿ ಬಯಸುವ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ವಿಷಯಗಳನ್ನು ಅಭ್ಯಸಿಸಿ ಒಟ್ಟಾರೆ ಕನಿಷ್ಠ ಶೇ.45ರಷ್ಟು ಅಂಕಗಳನ್ನು ಒಡೆದು ತೇರ್ಗಡೆಯಾಗಿರಬೇಕು. ಜೊತೆಗೆ, ಇಂಗ್ಲಿಷ್‌ ವಿಷಯವನ್ನೂ ಅಭ್ಯಾಸ ಮಾಡಿರಬೇಕು. ಎಸ್ಸಿ, ಎಸ್ಟಿ, ಮತ್ತು ಇತರೆ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ, 3ಎ ಮತ್ತು 3ಬಿಗಳಿಗೆ ಸೇರಿರುವ ಅಭ್ಯರ್ಥಿಗಳು ಶೇ.40 ರಷ್ಟು ಅಂಕಗಳಿಸಿರಬೇಕು.

Advertisements

ಬಿಎಸ್ಸಿ ನರ್ಸಿಂಗ್ ಕೋಸ್‌ಗಳ ಪ್ರವೇಶಾತಿಗೆ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಏ. 22 ರಾತ್ರಿ 11.59 ರವರೆಗೆ ಸಿಇಟಿ-2023ಕ್ಕೆ ನೋಂದಣಿ ಮಾಡಿಕೊಂಡು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅದೇ ದಿನದೊಳಗೆ ನಿಗದಿತ ಶುಲ್ಕವನ್ನು ಪಾವತಿಸಬೇಕು.

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

ಈ ಸುದ್ದಿ ಓದಿದ್ದೀರಾ?: ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಇರಲಿ: ಯುಜಿಸಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X