ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್ಆರ್‌ಟಿಸಿ

Date:

Advertisements

ಪದವಿ, ಸ್ನಾತಕೋತ್ತರ, ಡಿಪ್ಲೊಮ, ಬಿ. ಫಾರ್ಮ ಮತ್ತು ಹಲವು ಕೋರ್ಸ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಸ್‌ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಕಟಣೆ ಹೊರಡಿಸಿದೆ.

ಏಪ್ರಿಲ್‌ನಲ್ಲೇ ವಾರ್ಷಿಕ ಬಸ್‌ ಪಾಸ್‌ಗಳ ಅವಧಿ ಮುಗಿದ ಕಾರಣ ವಿದ್ಯಾರ್ಥಿಗಳು ಮತ್ತಷ್ಟು ಅವಧಿ ವಿಸ್ತರಣೆಗೆ ಮನವಿ ಮಾಡಿಕೊಂಡಿದ್ದರು. ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪರೀಕ್ಷೆಗಳು ಇನ್ನೂ ಮುಗಿದಿರುವುದಿಲ್ಲ.

ವಿದ್ಯಾರ್ಥಿಗಳ ಬೇಡಿಕೆ ಮತ್ತು ವೇಳಾಪಟ್ಟಿಯನ್ನು ಪರಿಗಣಿಸಿ ಅಂತಿಮ ವರ್ಷದ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ, ಸ್ನಾತಕೋತ್ತರ, ಡಿಪ್ಲೊಮ, ಕಾನೂನು ಸೇರಿದಂತೆ ಇತರೆ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳ ಅಂತಿಮ ವರ್ಷದ ಪರೀಕ್ಷೆ ಮುಗಿಯುವವರೆಗೆ ಬಸ್‌ ಪಾಸ್‌ ಅವಧಿಯನ್ನು ವಿಸ್ತರಿಸಲಾಗಿದೆ.

Advertisements

ವಿದ್ಯಾರ್ಥಿಗಳ ತರಗತಿ ಅಥವಾ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಂಡು ಹೆಚ್ಚುವರಿ ಹಣ ಪಾವತಿಸಿಕೊಂಡು ಒಂದು ಅಥವಾ ಎರಡು ತಿಂಗಳ ಅವಧಿಗೆ ಪಾಸ್‌ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ಕಡ್ಡಾಯವಾಗಿ ರಶೀದಿ ಮತ್ತು ಹಳೆಯ ಪಾಸ್‌ ಎರಡನ್ನೂ ತೋರಿಸಿ ಪ್ರಯಾಣಿಸಬಹುದು. ಈ ಬಗ್ಗೆ ಎಲ್ಲ ಚಾಲಕ ನಿರ್ವಾಹಕರಿಗೆ ಅಗತ್ಯ ಮಾಹಿತಿ ನೀಡುವಂತೆ ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಎಸಿಎಫ್‌ ನೇಮಕಾತಿ; ಸಂದರ್ಶನ ಸಮಿತಿಗೆ ಕೆಪಿಎಸ್‌ಸಿ ನಕಾರ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X