ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಇರಲಿ: ಯುಜಿಸಿ

Date:

Advertisements

ಉನ್ನತ ಶಿಕ್ಷಣ ಕೋರ್ಸ್‌ಗಳಲ್ಲಿ ನಡೆಯುವ ಪರೀಕ್ಷೆಗಳು ಪ್ರಾದೇಶಿಕ ಭಾಷೆಗಳಲ್ಲೇ ಇರಲಿ ಎಂದು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಎಲ್ಲ ಕೇಂದ್ರಿಯ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.

ಎಲ್ಲ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ಹೊರಡಿಸಿರುವ ಯುಜಿಸಿ, “ಬೋಧನೆ, ಕಲಿಯುವಿಕೆ ಆಂಗ್ಲ ಭಾಷೆಯಲ್ಲಿದ್ದರೂ ಸಹ ಪ್ರಾದೇಶಿಕ ಭಾಷೆಗಳಲ್ಲೇ ಪರೀಕ್ಷೆ ಬರೆಸುವುದು ಉತ್ತಮ. ಸ್ಥಳೀಯ ಮತ್ತು ಪ್ರಾದೇಶಿಕ ಭಾಷೆಗಳ ಬಳಕೆ ಮಾಡುವುದಕ್ಕೆ ಉತ್ತೇಜಿಸುವ ಉದ್ದೇಶ ಈ ಯೋಜನೆಯದ್ದಾಗಿದೆ” ಎಂದು ಹೇಳಿದೆ.

“ಪಠ್ಯಪುಸ್ತಕ ಕೈಪಿಡಿಗಳ ರಚನೆ ಇಂಗ್ಲಿಷ್‌ಗೆ ಮಾತ್ರ ಸೀಮಿತವಾಗದೆ, ಪ್ರಾದೇಶಿಕ ಭಾಷೆಗಳಲ್ಲು ತರ್ಜುಮೆಗೊಳಿಸುವಂತೆ ಬೇಡಿಕೆ ಇದೆ. ಇದರಿಂದಾಗಿ ಕಲಿಯುವ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳ ಗುಂಪು ಕ್ರಮೇಣವಾಗಿ ಏರಿಕೆಯಾಗುತ್ತದೆ. ಇತ್ತೀಚೆಗೆ ಐಐಟಿಗಳಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಕೆಯನ್ನು ಅರ್ಧಕ್ಕೆ ಬಿಟ್ಟಿದ್ದಾರೆ. ಇನ್ನೂ ಕೆಲವರು ವರ್ಗಾವಣೆಗೊಂಡಿದ್ದಾರೆ. ಇಂತಹ ಸನ್ನಿವೇಶಗಳನ್ನು ತಡೆಯಲು ಇದೊಂದು ಸರಿಯಾದ ಮಾರ್ಗವಾಗಿದೆ” ಎಂದಿದೆ.

Advertisements

“ಪ್ರಾದೇಶಿಕ ಭಾಷೆಗಳಲ್ಲಿ ಪುಸ್ತಕ ಪ್ರಕಟಣೆ, ಪರೀಕ್ಷೆ ಬರೆಯುವುದರಿಂದ ಕಲಿಯುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತದೆ. 2035ರ ವೇಳೆಗೆ ಉನ್ನತ ಶಿಕ್ಷಣದಲ್ಲಿ ದಾಖಲಾತಿ ದರ (ಜಿಇಆರ್) ಶೇಕಡಾ 27 ರಿಂದ 50ಕ್ಕೆ ಹೆಚ್ಚಿಸಬಹುದು” ಎಂದು ಯುಜಿಸಿ ಮುಖ್ಯಸ್ಥ ಜಗದೀಶ್‌ ಕುಮಾರ್ ಎಂ ತಿಳಿಸಿದ್ದಾರೆ.

ಸ್ಥಳೀಯ ಭಾಷೆಗಳಲ್ಲಿ ಮೂಲ ಬರವಣಿಗೆಯ ಅನುವಾದವನ್ನು ಉತ್ತೇಜಿಸಬೇಕು ಮತ್ತು ಬೋಧನೆ-ಕಲಿಕೆಯಲ್ಲಿ ಸ್ಥಳೀಯ ಭಾಷೆಯನ್ನು ಬಳಸಬೇಕೆಂದು ವಿವಿಗಳಿಗೆ ಯುಜಿಸಿ ಹೇಳಿದೆ. 

ಈ ಸುದ್ದಿ ಓದಿದ್ದೀರಾ?: ಮೇ.25ರೊಳಗೆ ಅನಧಿಕೃತ ಶಾಲೆಗಳ ಮುಚ್ಚಲು ಸೂಚನೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X