‘ಹಾಲ್ ಟಿಕೆಟ್’ ಇದೆ ಆದರೆ, ಕನಿಷ್ಠ ಹಾಜರಾತಿ ಇಲ್ಲ ಎಂದು ಪಿಯುಸಿ ಪರೀಕ್ಷೆಯಿಂದ ಹೊರಗುಳಿದಿದ್ದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೇಳಿದೆ.
2022-23ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆ ಕೇಂದ್ರದಿಂದ ಹೊರಗುಳಿದಿದ್ದ ವಿದ್ಯಾರ್ಥಿಗಳು ಮೇ 23ರಿಂದ ಪ್ರಾರಂಭವಾಗುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಕನಿಷ್ಠ ಶೇ. 75ರಷ್ಟು ಹಾಜರಾತಿ ಹೊಂದಿರುವವರು ಮಾತ್ರ ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಅರ್ಹರು ಎಂದು ಈ ಹಿಂದೆಯಿಂದಲೂ ಶಿಕ್ಷಣ ಇಲಾಖೆ ಸೂಚನೆ ನೀಡಿತ್ತು. ಕನಿಷ್ಠ ಹಾಜರಾತಿಯೂ ಇಲ್ಲದ ಕಾರಣಕ್ಕೆ ಕಲಾ ಮತ್ತು ವಾಣಿಜ್ಯ ವಿಭಾಗದಿಂದ ಹನ್ನೆರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ವಿದ್ಯಾರ್ಥಿಗಳಿಗೆ ಮಾತ್ರ ಮಂಡಳಿ ಮತ್ತೊಂದು ಅವಕಾಶ ಮಾಡಿಕೊಟ್ಟಿದೆ.
ದ್ವಿತೀಯ ಪಿಯುಸಿ ಪರೀಕ್ಷೆ 2023 ಕ್ಕೆ ಅಂದಾಜು 7,26,195 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ರಾಜ್ಯದಲ್ಲಿ 1,109 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಈ ಸುದ್ದಿ ಓದಿದ್ದೀರಾ?: ನಕಲಿ ಅಂಕಪಟ್ಟಿ | 51 ವಿದ್ಯಾರ್ಥಿಗಳ ಪ್ರವೇಶಾತಿ ರದ್ದು: ವಿಟಿಯು