ಎಸಿಎಫ್‌ ನೇಮಕಾತಿ; ಸಂದರ್ಶನ ಸಮಿತಿಗೆ ಕೆಪಿಎಸ್‌ಸಿ ನಕಾರ

Date:

  • ಸಂದರ್ಶನ ಸಮಿತಿ ರಚನೆಯಲ್ಲಿ ಬದಲಾವಣೆಯಿಲ್ಲ ಎಂದ ಕೆಪಿಎಸ್‌ಸಿ
  • ಕೆಪಿಎಸ್‌ಸಿ ಅಧಿಕಾರಿಗಳ ನಡುವೆ ಮುಸುಕಿನ ಗುದ್ದಾಟ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್‌) ಖಾಲಿ ಹುದ್ದೆ ನೇಮಕಾತಿಗೆ ಸಂದರ್ಶನ ಸಮಿತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷರು ಮತ್ತು ಸದಸ್ಯರು ಇರಬೇಕೆಂದು ಸರ್ಕಾರ ನಿರ್ದೇಶಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೆಪಿಎಸ್‌ಸಿ ಅಧಿಕಾರಿಗಳು, ‘ಏಕಾಏಕಿ ಬಂದಿರುವ ಆದೇಶ ಪಾಲನೆ ಮಾಡಲಾಗುವುದಿಲ್ಲ’ ಎಂದು ತಳ್ಳಿಹಾಕಿದ್ದಾರೆ. ಅಧಿಕಾರಿಗಳ ನಡೆ ಸಮಂಜಸವಲ್ಲವೆಂದು ಕರ್ನಾಟಕ ಸ್ಟೇಟ್ ಕಾಂಪಿಟೇಟಿವ್ ಎಕ್ಸಾಮಿನೇಷನ್ ಆಸ್ಪಿರೆಂಟ್ಸ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ನಾಲ್ಕು ಜನರನ್ನೊಳಗೊಂಡ ಸಮಿತಿಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷರು ಮತ್ತು ಸದಸ್ಯರು ಇರಬೇಕೆನ್ನುವುದು ರಾಜ್ಯ ಸರ್ಕಾರದ ನಿರ್ದೇಶನ. ಆದರೆ, ಸರ್ಕಾರ ಮುಂಚಿತವಾಗಿ ಮಾಹಿತಿ ನೀಡದೆ ಏಕಾಏಕಿ ವಿಷಯದ ಕುರಿತು ನಿರ್ಧರಿಸುವುದು ಗೊಂದಲಕ್ಕೀಡು ಮಾಡಿದೆ ಎಂದು ಅಧಿಕಾರಿಗಳು ನಿರ್ಲಕ್ಷ್ಯ ಸ್ವಭಾವ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಸದ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪೂರ್ವಭಾವಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಗಳು ನಡೆದಿರುವುದರಿಂದ ಈ ಹಂತದಲ್ಲಿ ಸಂದರ್ಶನ ಸಮಿತಿ ರಚನೆಯಲ್ಲಿ ಬದಲಾವಣೆ ಮಾಡುವುದಕ್ಕೆ ಸಾಧ್ಯವಿಲ್ಲ” ಎಂದು ಕೆಪಿಎಸ್‌ಸಿ ಸರ್ಕಾರದ ಆದೇಶ ತಳ್ಳಿಹಾಕಿದೆ.  

ಈ ಸುದ್ದಿ ಓದಿದ್ದೀರಾ?: ಬೋಧನಾ ಕೌಶಲ್ಯ ಕಾರ್ಯಗಾರ; ಕಣಜ ಯುವ ಸಂಶೋಧನಾ ಕೇಂದ್ರದಿಂದ ಅರ್ಜಿ ಆಹ್ವಾನ

ಈ ಹಿಂದೆ ಪಿಡಬ್ಲ್ಯೂಡಿಯ ಸಹಾಯಕ ಅಭಿಯಂತರ ಹುದ್ದೆಗೆ ಸಂದರ್ಶನ ಸಮಿತಿಯ ರಚನೆಯಲ್ಲಿ ಬದಲಾವಣೆ ತರಲಾಗಿತ್ತು. ಇದರಿಂದ ನೂರಾರು ಅಭ್ಯರ್ಥಿಗಳಿಗೆ ಪಾರದರ್ಶಕವಾಗಿ ಯಾವುದೇ ಸಮಸ್ಯೆಗಳಿಲ್ಲದೆ ಹುದ್ದೆ ಪಡೆಯಲು ಅನುಕೂಲವಾಗಿತ್ತು.  

ಇಂತಹ ಒಳ್ಳೆಯ ಬದಲಾವಣೆಯನ್ನು ಕೆಪಿಎಸ್‌ಸಿ ಅಧ್ಯಕ್ಷರು ಹಾಗೂ ಸದಸ್ಯರು ತಳ್ಳಿಹಾಕಿರುವುದು ಶೋಭೆಯಲ್ಲ ಎಂದು ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಎಸ್‌ಸಿಯ ಸದಸ್ಯರು, ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ನಡುವಿನ ಮುಸುಕಿನ ಗುದ್ದಾಟದಿಂದ ಸ್ಪರ್ಧಾಕಾಂಕ್ಷಿಗಳು ಈಗಾಗಲೇ ಸಾಕಷ್ಟು ಬೇಸತ್ತಿದ್ದಾರೆ ಎಂದು ಹೇಳಲಾಗಿದೆ.

ಕಾರ್ಯದರ್ಶಿಗಳು ಕೈಗೊಳ್ಳುವ ಪ್ರತಿಯೊಂದು ಕೆಲಸ ಸ್ಪರ್ಧಾರ್ಥಿಗಳಿಗೆ ಅನುಕೂಲವಾಗಿರುತ್ತದೆ ಹಾಗೂ ಪಾರದರ್ಶಕತೆ ಇರುತ್ತದೆ. ಆದರೆ, ಇದಕ್ಕೆ ವಿರುದ್ಧವಾಗಿ ಕೆಪಿಎಸ್‌ಸಿ ಸದಸ್ಯರು ಮತ್ತು ಅಧ್ಯಕ್ಷರು ಕಾರ್ಯದರ್ಶಿಗಳ ನಡೆಗೆ ಸುಖಾ ಸುಮ್ಮನೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸ್ಪರ್ಧಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಇವುಗಳನ್ನೆಲ್ಲ ತ್ವರಿತವಾಗಿ ಸರಿಪಡಿಸಬೇಕೆಂದು ಕರ್ನಾಟಕ ಸ್ಟೇಟ್ ಕಾಂಪಿಟೇಟಿವ್ ಎಕ್ಸಾಮಿನೇಷನ್ ಆಸ್ಪಿರೆಂಟ್ಸ್ ಅಸೋಸಿಯೇಷನ್ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿ ಸಂಘಕ್ಕೆ ಚುನಾವಣೆ: ‘ರಾಜಕೀಯ’ ನಿಷೇಧ ಅಗತ್ಯವೇ?

ಸರ್ಕಾರದ ಉದ್ದೇಶ ‘ರಾಜಕೀಯವನ್ನು ಸಂಪೂರ್ಣ ನಿಷೇಧಿಸುವುದು’ ಆಗದೆ, ‘ಪಕ್ಷೀಯ ಹಸ್ತಕ್ಷೇಪ ಮತ್ತು...

ಋಷಿಕೇಶ್ ಆತ್ಮಹತ್ಯೆ ಪ್ರಕರಣ: ಐಐಟಿ ದೆಹಲಿಯಲ್ಲಿ ತೀವ್ರ ಪ್ರತಿಭಟನೆ; ವಿದ್ಯಾರ್ಥಿಗಳಿಗೆ ಶಿಸ್ತು ಕ್ರಮದ ಬೆದರಿಕೆ

ಐಐಟಿ ದೆಹಲಿಯ ಎಂಎಸ್‌ಸಿ ವಿದ್ಯಾರ್ಥಿ ಋಷಿಕೇಶ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ...

ಸ್ನಾತಕೋತ್ತರ ಇತಿಹಾಸ ಪಠ್ಯದಿಂದ ‘ದೆಹಲಿ ಸುಲ್ತಾನ’ರ ಪಠ್ಯ ಕೈಬಿಟ್ಟ ದೆಹಲಿ ವಿವಿ; ಬೋಧಕರ ಕಳವಳ

ದೆಹಲಿ ವಿಶ್ವವಿದ್ಯಾಲಯವು (DU) ತನ್ನ ಸ್ನಾತಕೋತ್ತರ (MA) ಇತಿಹಾಸ ವಿಭಾಗದ ಮೂರನೇ...

ಜಾರ್ಖಂಡ್ | 3 ಪರೀಕ್ಷೆಗಳ ರದ್ದತಿಗೆ ಸರ್ಕಾರ ಒಪ್ಪಿಗೆ; ಉದ್ಯೋಗ ಸಮಿತಿ ಮೂವರು ಸದಸ್ಯರ ರಾಜೀನಾಮೆ

ಪರೀಕ್ಷಾ ಅಕ್ರಮಗಳ ವಿರುದ್ಧ ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಮಹತ್ವದ ಗೆಲುವು...