ಗ್ರಾಮೀಣ ಕರ್ನಾಟಕದ ವಿದ್ಯಾರ್ಥಿಗಳು ಗಣಿತದಲ್ಲಿ ಹಿಂದುಳಿದಿದ್ದಾರೆ: ಸಮೀಕ್ಷೆ

Date:

Advertisements

ಕರ್ನಾಟಕದ ಗ್ರಾಮೀಣ ಭಾಗದ 4, 5 ಮತ್ತು 6ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳು ಗಣಿತದ ಲೆಕ್ಕದಲ್ಲಿ ಹಿಂದುಳಿದಿದ್ದಾರೆ. ಸಂಕಲನ, ವ್ಯವಕಲನ, ಗುಣಾಕಾರ, ಭಾಗಾಕಾರ ಮಾಡಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ವರದಿಯಾಗಿದೆ.

ಬೆಂಗಳೂರಿನ ಅಕ್ಷರ ಫೌಂಡೇಶನ್‌ ರಾಜ್ಯಾದ್ಯಂತ 2,625 ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ 2022ರ ನವೆಂಬರ್‌ನಿಂದ 2023ರ ಮಾರ್ಚ್‌ವರೆಗೆ ಸಮೀಕ್ಷೆ ನಡೆಸಿದೆ. 4ರಿಂದ 6ನೇ ತರಗತಿ ವರೆಗಿನ 3,12,550 ಮಕ್ಕಳನ್ನು ಸಮೀಕ್ಷೆಗೆ ಒಳಪಡಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಪ್ರಸ್ತುತ ತರಗತಿಗಳಿಗಿಂತ ಹಿಂದಿನ ತರಗತಿಯ ವಿಷಯಗಳ ಮೇಲೆ ಸಮೀಕ್ಷೆ ನಡೆಸಲಾಗಿದೆ. ಆದರೆ, ವಿದ್ಯಾರ್ಥಿಗಳು ಅವುಗಳಲ್ಲಿಯೂ ಹಿಂದುಳಿದಿದ್ದಾರೆ ಎಂಬುದನ್ನು ಸಮೀಕ್ಷೆ ಕಂಡುಕೊಂಡಿದೆ.

“ಕೊರೊನಾ ನಂತರದಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಹೆಚ್ಚುತ್ತಿದ್ದರೂ, ವಿದ್ಯಾರ್ಥಿಗಳ ಕಲಿಕೆಯಲ್ಲಿ ಭಾರೀ ಅತಂರ ಕಂಡುಬರುತ್ತಿದೆ. ಇದು ಗಂಭೀರ ಸಮಸ್ಯೆಯನ್ನು ಎತ್ತಿ ತೋರಿಸಿದೆ. ಚಿತ್ರದುರ್ಗ, ಬಳ್ಳಾರಿ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳು ಅತ್ಯಂತ ಕಳಪೆ ಪ್ರದರ್ಶನ ನೀಡಿವೆ. ಈ ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಸರಾಸರಿ ಅಂಕವನ್ನು ಗಳಿಸಿಲು ವಿಫಲರಾಗಿದ್ದಾರೆ” ಎಂದು ಸಮೀಕ್ಷಾ ವರದಿ ಹೇಳಿದೆ.

Advertisements

4ನೇ ತರಗತಿಯಲ್ಲಿ 1,03,962ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಹೊಂದಿಸಲು 3ನೇ ತರಗತಿಯ ಶಾಲಾ ಪಠ್ಯಕ್ರಮವನ್ನು ಬಳಸಲಾಗಿತ್ತು. ಆದಾಗ್ಯೂ, ಆ ಮಕ್ಕಳಲ್ಲಿ ಕೇವಲ 40% ಮಾತ್ರ ಗುಣಾಕಾರ ಮತ್ತು ಭಾಗಾಕಾರ ಲೆಕ್ಕವನ್ನು ಸರಿಪಡಿಸುವ ಸಾಮರ್ಥ್ಯ ಹೊಂದಿದ್ದಾರೆ. 5 ಮತ್ತು 6ನೇ ತರಗತಿಯ ಹೆಚ್ಚಿನ ವಿದ್ಯಾರ್ಥಿಗಳು ಕೂಡ ಗಣಿತದಲ್ಲಿ ಹಿಂದುಳಿದಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಸಮೀಕ್ಷೆಯಲ್ಲಿ ಬೆಳಗಾವಿ, ಮಂಡ್ಯ, ತುಮಕೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಪ್ರದರ್ಶನ ಕಂಡುಬಂದಿದೆ. ಬಳ್ಳಾರಿ, ಚಿತ್ರದುರ್ಗ ಮತ್ತು ಕಲಬುರಗಿ ಜಿಲ್ಲೆಗಳು ಹಿಂದುಳಿದಿವೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ?: ಕನಿಷ್ಠ ಜನರ ಈ ಪ್ರಶ್ನೆಗಳಿಗಾದರೂ ಉತ್ತರ ನೀಡುವರೇ ಪ್ರಧಾನಿ ಮೋದಿ?

ಅಕ್ಷರ ಫೌಂಡೇಶನ್‌ನ ಅಧ್ಯಕ್ಷ ಅಶೋಕ್ ಕಾಮತ್ ಮಾತನಾಡಿ, “ಗಣಿತವು ಪ್ರತಿಯೊಬ್ಬರಿಗೂ ಪ್ರಮುಖ ವಿಶ್ಲೇಷಣಾತ್ಮಕ ಸಾಧನವಾಗಿದೆ. ಗಣಿತ ಗೊತ್ತಿಲ್ಲದ ಮಕ್ಕಳು ಬಹಳಷ್ಟು ಅವಕಾಶಗಳನ್ನು ಕಳೆದುಕೊಳ್ಳುತ್ತಾರೆ. ಕಲಿಕೆಯನ್ನು ಸುಲಭಗೊಳಿಸಬಲ್ಲ ಶಾಲಾ ವಾತಾವರಣವನ್ನು ನಿರ್ಮಿಸುವ ಕಡೆಗೆ ನಾವು ಹೆಚ್ಚಿನ ಗಮನ ಕೊಡಬೇಕು. ಫಲಿತಾಂಶದ ಮೇಲೆ ಕೇಂದ್ರೀಕರಿಸಬಾರದು” ಎಂದು ಹೇಳಿದ್ದಾರೆ.

“ಗಣಿತವನ್ನು ಕಲಿಸುವ ಶಿಕ್ಷಕರಿಗೂ ಬಹಳಷ್ಟು ಜನರು ಭಯಪಡುತ್ತಾರೆ. ಪ್ರಸ್ತುತ, ಮಕ್ಕಳಿಗೆ ಪಠ್ಯಪುಸ್ತಕ ಜ್ಞಾನವನ್ನು ವರ್ಗಾಯಿಸಲು ಉತ್ತಮವಾದ ಯಾವುದೇ ಪರಿಣಾಮಕಾರಿ ವಿಧಾನಗಳಿಲ್ಲ. ಗಣಿತವನ್ನು ಉತ್ತಮವಾಗಿ ಕಲಿಸಲು ಪ್ರಾಥಮಿಕವಾಗಿ ನಮಗೆ ಮಣಿಗಳು, ಅಬ್ಯಾಕಸ್, ಬೇಸ್ 10 ಬ್ಲಾಕ್‌ಗಳಂತಹ ಪರಿಣಾಮಕಾರಿ ಸಾಧನಗಳು ಬೇಕಾಗುತ್ತವೆ; ಜೊತೆಗೆ ಮೌಲ್ಯದ ಪಟ್ಟಿಗಳು, ಭಿನ್ನರಾಶಿ ಪಟ್ಟಿಗಳು ಕಲಿಕೆಯನ್ನು ಸುಲಭಗೊಳಿಸುತ್ತವೆ. ಮಾತ್ರವಲ್ಲದೆ, ಮೋಜಿನಿಂದ ಕಲಿಯಲು ನೆರವಾಗುತ್ತವೆ” ಎಂದು ಅವರು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X