ರಾಜ್ಯ ಸರ್ಕಾರದ ತೀರ್ಮಾನಗಳನ್ನು ‘ಬಿಟ್ಟಿ ಭಾಗ್ಯ’ ಎಂದು ಅವಹೇಳನ ಮಾಡಿದ ಹೊಸದುರ್ಗ ತಾಲೂಕಿನ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಸರ್ಕಾರ ಟೀಕಿಸುವ ಬರಹವನ್ನು ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ತಾಲೂಕಿನ ಕಾನುಬೇನಹಳ್ಳಿ ಶಿಕ್ಷಕ ಎಂ ಜಿ ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್ ಜಯಪ್ಪ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.
ಸಿದ್ದರಾಮಯ್ಯ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಸಂದರ್ಭದಲ್ಲಿ ಶಾಂತಮೂರ್ತಿ ಅವರು, “ಎಸ್ ಎಂ ಕೃಷ್ಣ ಅವಧಿಯಲ್ಲಿ ₹3,590 ಕೋಟಿ, ಧರ್ಮಸಿಂಗ್ ₹15,635 ಕೋಟಿ, ಎಚ್ ಡಿ ಕುಮಾರಸ್ವಾಮಿ ₹3,545 ಕೋಟಿ, ಬಿ ಎಸ್ ಯಡಿಯೂರಪ್ಪ ₹25,653 ಕೋಟಿ, ಸದಾನಂದಗೌಡ ₹9,464 ಕೋಟಿ, ಜಗದೀಶ್ ಶೆಟ್ಟರ್ ₹13,464 ಕೋಟಿ, ಸಿದ್ದರಾಮಯ್ಯ ₹2,42,000 ಕೋಟಿ ಸಾಲ ಮಾಡಿದ್ದರು” ಎಂದು ಬರೆದುಕೊಂಡಿದ್ದಾರೆ.
“ಎಸ್ಎಂ ಕೃಷ್ಣ ಅವಧಿಯಿಂದ ಶೆಟ್ಟರ್ವರೆಗೆ ಮಾಡಿದ ಒಟ್ಟು ಸಾಲ ₹71,331 ಕೋಟಿ, ಸಿದ್ದರಾಮಯ್ಯ ಅವರು ಮಾಡಿದ ಸಾಲ ₹2,42,000 ಕೋಟಿ. ಹೀಗಿರುವಾಗ ‘ಬಿಟ್ಟಿ ಭಾಗ್ಯ’ ಕೊಡದೆ ಇನ್ನೇನು” ಎಂದು ಬರಹದಲ್ಲಿ ಟೀಕಿಸಿದ್ದರು. ಈ ಮಾಹಿತಿಯನ್ನು ವಾಟ್ಸ್ಆ್ಯಪ್ ಗ್ರೂಪ್ಗಳಿಗೂ ಶೇರ್ ಮಾಡಿದ್ದರು. ಈ ಹಿನ್ನೆಲೆ ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಮಂಡ್ಯ | ಒಂದೂ ಸ್ಥಾವವನ್ನು ಗೆಲ್ಲದ ಜೆಡಿಎಸ್ಗೆ ಮನ್ಮುಲ್ ಮೇಲೆ ಹಿಡಿತ ಕಳೆದುಕೊಳ್ಳುವ ಭೀತಿ