ಒಂದು ನಿಮಿಷದ ಓದು | ಟೊಫೆಲ್ ಪರೀಕ್ಷೆಯ ಅವಧಿ ಕಡಿತ

Date:

Advertisements

ಮೂರು ಗಂಟೆ ಇದ್ದ ‘ದಿ ಟೆಸ್ಟ್‌ ಆಫ್‌ ಇಂಗ್ಲಿಷ್‌ ಆ್ಯಸ್‌ ಆ್ಯನ್‌ ಫಾರಿನ್‌ ಲಾಂಗ್ವೇಜ್‌’ (ಟಿಒಇಎಫ್‌ಎಲ್‌ ಅಥವಾ ಟೊಫೆಲ್‌) ಪರೀಕ್ಷೆಯ ಅವಧಿಯನ್ನು ಕಡಿತಗೊಳಿಸಲಾಗಿದೆ.

ಎಜುಕೇಷನಲ್‌ ಟೆಸ್ಟಿಂಗ್‌ ಸರ್ವಿಸಸ್‌ (ಇಟಿಎಸ್‌) ಆಯೋಜಿಸುವ ಟೊಫೆಲ್ ಪರೀಕ್ಷೆಯು ಜಗತ್ತಿನ ಅತಿ ಪ್ರಸಿದ್ಧ ಭಾಷಾ ಅರ್ಹತಾ ಪರೀಕ್ಷೆಗಳಲ್ಲಿ ಒಂದಾಗಿದೆ. ಈ ಹಿಂದೆ ಪರೀಕ್ಷೆ ಬರೆಯಲು ಮೂರು ಗಂಟೆ ಬೇಕಾಗುತ್ತಿತ್ತು. ಆದರೆ, ಈಗ 1:56 ಗಂಟೆಗೆ ತಗ್ಗಿಸಲಾಗಿದೆ.

ಈ ಹಿಂದೆ ಪರೀಕ್ಷೆ ಬರೆದ ನಂತರ ಅಂಕ ಬಿಡುಗಡೆ ದಿನದ ಘೋಷಣೆಗಾಗಿಯೂ ದಿನಗಣನೆ ಮಾಡಬೇಕಾಗಿತ್ತು. ಆದರೀಗ ಅಭ್ಯರ್ಥಿಗಳು ಪರೀಕ್ಷೆ ಪೂರ್ಣಗೊಳಿಸಿದ ನಂತರ ಅಂಕ ಬಿಡುಗಡೆಯ ಅಧಿಕೃತ ದಿನಾಂಕದ ಕುರಿತು ಮಾಹಿತಿ ಪಡೆಯಬಹುದಾಗಿದೆ. ಇದರ ಜೊತೆಗೆ ಇನ್ನಿತರ ಬದಲಾವಣೆಗಳನ್ನು ಮಾಡಲಾಗಿದ್ದು, ಇದು ಈ ವರ್ಷದ ಜುಲೈ 26ರಿಂದಲೇ ಜಾರಿಯಾಗಲಿದೆ ಎಂದು ಇಟಿಎಸ್‌ ತಿಳಿಸಿದೆ.

Advertisements

ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ. ಮೊದಲ ಬಾರಿಗೆ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಶುಲ್ಕದ ಹಣವನ್ನು ಭಾರತೀಯ ರೂಪಾಯಿಗಳಲ್ಲಿ ಪಾವತಿಸಬಹುದು. ಸರಳೀಕೃತ ನೋಂದಣಿ ಪ್ರಕ್ರಿಯೆಯು 2023 ಜುಲೈನಿಂದ ಲಭ್ಯವಿರುತ್ತದೆ. ಪರೀಕ್ಷೆ ಎದರಿಸುವವರು ಈ ಹಿಂದೆಂದಿಗಿಂತಲೂ ತ್ವರಿತವಾಗಿ ಮತ್ತು ಸುಲಭವಾಗಿ ನೋಂದಾಯಿಸಿಕೊಳ್ಳಬಹುದು ಎಂದು ಇಟಿಎಸ್ ಹೇಳಿದೆ.

ಟೊಫೆಲ್‌ ಪರೀಕ್ಷೆ ನಡೆಸುವ ಉದ್ದೇಶವೇನೆಂದರೆ ವಿದ್ಯಾರ್ಥಿಗಳು ಇಂಗ್ಲಿಷ್‌ ಭಾಷೆಯಲ್ಲಿ ಹೊಂದಿರುವ ಪ್ರಾವೀಣ್ಯತೆಯನ್ನು ಪರೀಕ್ಷಿಸುವುದು. ಭಾರತ, ಬ್ರಿಟನ್‌, ಕೆನಡಾ, ಆಸ್ಟ್ರೇಲಿಯಾ ಸೇರಿದಂತೆ ಜಗತ್ತಿನ 160 ದೇಶಗಳ 11,500ಕ್ಕೂ ಅಧಿಕ ವಿಶ್ವವಿದ್ಯಾಲಯಗಳು ಹಾಗೂ ಇತರೆ ಶಿಕ್ಷಣ ಸಂಸ್ಥೆಗಳು ಈ ಪರೀಕ್ಷೆಗೆ ಮಾನ್ಯತೆ ನೀಡಿವೆ. ಈ ಸಂಸ್ಥೆಗಳು ವಿದ್ಯಾರ್ಥಿಗಳ ಆಯ್ಕೆಗೂ ಮುನ್ನ ಟೊಫೆಲ್‌ ಪರೀಕ್ಷೆಯಲ್ಲಿ ಅವರು ಪಡೆದಿರುವ ಅಂಕಗಳನ್ನು ಗಮನಿಸುತ್ತವೆ.

ಈ ಸುದ್ದಿ ಓದಿದ್ದೀರಾ?: ಒಂದು ನಿಮಿಷದ ಓದು | ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಶಿಕ್ಷಕ ಅಮಾನತು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X