ಬೀದರ್‌ | ʼಸಂವಿಧಾನʼ ಭಾರತೀಯರ ರಕ್ಷಾ ಕವಚ : ಎಸ್.ಬಿ.ಕುಚಬಾಳ

Date:

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ದೇಶದ ನಿಜವಾದ ಧರ್ಮಗ್ರಂಥವಾಗಿದ್ದು, ಅದು ಭಾರತೀಯರ ರಕ್ಷಾ ಕವಚವಾಗಿದೆ ಎಂದು ನಿವೃತ್ತ ಶಿಕ್ಷಣಾಧಿಕಾರಿ ಎಸ್.ಬಿ.ಕುಚಬಾಳ ಅಭಿಪ್ರಾಯಪಟ್ಟರು.

- Advertisement -

ನಗರದ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಭೀಮರಾಜ ಸಾಹಿತ್ಯ ಪರಿಷತ್ ಬೀದರ ವತಿಯಿಂದ ಆಯೋಜಿಸಿದ ಬುದ್ಧ, ಬಸವ, ಅಂಬೇಡ್ಕರ ಸಾಂಸ್ಕೃತಿಕ ಉತ್ಸವ ಹಾಗೂ ಸಂವಿಧಾನ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

“ಭಾರತದಲ್ಲಿ ವಿವಿಧ ಜಾತಿ, ಧರ್ಮಗಳ ಜನರು ವಾಸಿಸುತ್ತಿದ್ದು, ಪ್ರತಿಯೊಬ್ಬರಿಗೂ ತಮ್ಮದೇ ಆದ ಧರ್ಮಗ್ರಂಥಗಳಿವೆ. ಆದರೆ ದೇಶದ ಎಲ್ಲ ನಾಗರಿಕರನ್ನು ಸಮಾನವಾಗಿ ಕಾಣುವ ಸಂವಿಧಾನವೇ ಭಾರತದ ಧರ್ಮಗ್ರಂಥವಾಗಿದೆ. ಇದು ಪ್ರತಿಯೊಬ್ಬ ಭಾರತೀಯರ ಹಕ್ಕುಗಳನ್ನು ಕಾಪಾಡುವ ರಕ್ಷಾ ಕವಚವಾಗಿದ್ದು, ಸಮಾನತೆ ಹಾಗೂ ನ್ಯಾಯವನ್ನು ಒದಗಿಸುತ್ತದೆ. ಸರ್ವರ ಹಿತವನ್ನು ಕಾಪಾಡುವುದರ ಜೊತೆಗೆ ಸಮಾನ ಅವಕಾಶಗಳನ್ನು ನೀಡುವ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ದಾರಿಯಾಗುತ್ತದೆ” ಎಂದು ಅವರು ತಿಳಿಸಿದರು.

ಮುಖಂಡ ಶಂಕರರಾವ ದೊಡ್ಡಿ ಮಾತನಾಡಿ, “ಸಂವಿಧಾನ ಕೇವಲ ದಲಿತ ಸಮುದಾಯಕ್ಕೆ ಸೀಮಿತವಾಗಿಲ್ಲ. ಅದು ಎಲ್ಲ ಧರ್ಮ, ಜಾತಿ ಹಾಗೂ ವರ್ಗಗಳ ಜನರಿಗೆ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಒದಗಿಸಿದೆ” ಎಂದು ಹೇಳಿದರು.

ದಲಿತ ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ ಮಾತನಾಡಿ, “ಇಂದಿನ ಪರಿಸ್ಥಿತಿಯಲ್ಲಿ ಸಂವಿಧಾನವೇ ನಮ್ಮ ಉಸಿರಾಗಿದ್ದು, ಅದರ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ” ಎಂದು ಅಭಿಪ್ರಾಯಪಟ್ಟರು.

ಸಾಮಾಜಿ ಕಾರ್ಯಕರ್ತ ಸುರೇಶ್ ಜೋಜನಾಕರ್ ಮಾತನಾಡಿ, :ಎಲ್ಲರ ಹಿತ ಕಾಪಾಡುತ್ತಿರುವ ಸಂವಿಧಾನವನ್ನು ಕೆಲವರು ಬದಲಾಯಿಸಲು ಯತ್ನಿಸುತ್ತಿದ್ದಾರೆ. ಆದರೆ ಅಂತಹ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” ಎಂದು ಹೇಳಿದರು.

ಕಲಬುರಗಿಯ ಅಮ್ರಪಾಲಿ ಬುದ್ಧ ವಿಹಾರದ ಪೂಜ್ಯ ಭಂತೆ ಧಮ್ಮಜ್ಯೋತಿ ಅವರು ಸಾನಿಧ್ಯ ವಹಿಸಿದ್ದರು. ಭೀಮರಾಜ ಸಾಹಿತ್ಯ ಪರಿಷತ್ ಅಧ್ಯಕ್ಷ ತಾತ್ಯಾರಾವ ಕೆ.ಮಾರ್ಥಂಡ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಉತ್ಸವ ಜರುಗಿತು. 15ಕ್ಕೂ ಹೆಚ್ಚು ಕಲಾ ತಂಡಗಳು ಭಾಗವಹಿಸಿ ಹಾಡು, ತತ್ವಪದ, ಕೋಲಾಟ ಹಾಗೂ ಜಾನಪದ ಗೀತೆಗಳ ಮೂಲಕ ಪ್ರೇಕ್ಷಕರ ಮನಗೆದ್ದವು.

ಇದನ್ನೂ ಓದಿ : ಔರಾದ್‌ | ಸಬ್ಸಿಡಿ ಬೀಜ ನೆರೆ ರಾಜ್ಯದ ರೈತರಿಗೆ ಮಾರಾಟ : ಆರೋಪ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಅರುಣ ಪಟೇಲ್, ಪತ್ರಕರ್ತ ಶಕ್ತಿಕಾಂತ ಬಾವಿದೊಡ್ಡಿ, ನಿವೃತ್ತ ಪ್ರಾಂಶುಪಾಲ ಎಂ.ಡಿ.ನಿಝಾಮ್ ಹಾಗೂ ಪ್ರಸನ್ನ ಡಾಂಗೆ, ಸುಧಾಕರ ಎಕಂಬೇಕರ್, ಬಸವರಾಜ ದಾಂಡೇಕರ್ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ...

ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಡಿಎಚ್‌ಒ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ...

ಬಸವಕಲ್ಯಾಣ | ತ್ಯಾಗ, ಬಲಿದಾನದಿಂದಲೇ ವಿಮೋಚನೆ ಪ್ರಾಪ್ತಿ: ರವೀಂದ್ರ ಗಾಯಕವಾಡ

ಸಾವಿರಾರು ಜನರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ...

₹25 ಕೋಟಿ ವೆಚ್ಚದಲ್ಲಿ ಬೀದರ್ ಕೋಟೆ, ಪಾಪನಾಶ ಕೆರೆ ಅಭಿವೃದ್ಧಿ

ಪ್ರವಾಸೋದ್ಯಮ ಇಲಾಖೆಯ ‘ಸ್ವದೇಶ ದರ್ಶನ್ 2.0’ ಯೋಜನೆಯ ‘ಚಾಲೆಂಜ್ ಬೇಸ್ಡ್ ಡೆಸ್ಟಿನೇಷನ್...