ಮೋದಿಯನ್ನು ‘ಸಂತ’ ಎಂದಿದ್ದಕ್ಕೆ ಒಲಿಯಿತೇ ಪ್ರಸಾರ್ ಭಾರತಿ ಪಟ್ಟ? ಪ್ರಸೂನ್ ಜೋಶಿಗೆ ನೆಟ್ಟಿಗರ ಪ್ರಶ್ನೆ!

Date:

ಕೇಂದ್ರ ಸರ್ಕಾರವು ಆಲ್ ಇಂಡಿಯಾ ರೇಡಿಯೋ (ಆಕಾಶವಾಣಿ) ಹಾಗೂ ದೂರದರ್ಶನದ ಕಾರ್ಯಾಚರಣೆ ನೋಡಿಕೊಳ್ಳುವ ಪ್ರಸಾರ್ ಭಾರತಿ ಮಂಡಳಿಗೆ ಸುಪ್ರಸಿದ್ಧ ಗೀತರಚನೆಕಾರ, ಬರಹಗಾರ ಹಾಗೂ ಸಂವಹನ ತಜ್ಞ ಪ್ರಸೂನ್ ಜೋಶಿ ಅವರನ್ನು ಹೊಸ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ನವನೀತ್ ಕುಮಾರ್ ಸೆಹಗಲ್ ಅವರ ಹಠಾತ್ ರಾಜೀನಾಮೆಯಿಂದ ಖಾಲಿ ಇದ್ದ ಈ ಮಹತ್ವದ ಸ್ಥಾನಕ್ಕೆ ಜೋಶಿ ಅವರನ್ನು ನೇಮಿಸಲಾಗಿದೆ. ಸಂಸ್ಥೆಯಲ್ಲಿ ತಂತ್ರಜ್ಞಾನದ ಬದಲಾವಣೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಇದು ಪ್ರಮುಖ ಬೆಳವಣಿಗೆಯಾಗಿದೆ.

- Advertisement -

ವನೀತ್ ಕುಮಾರ್ ಸೆಹಗಲ್ ಅವರು ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾದ ಬಳಿಕ ಮಾರ್ಚ್ 16, 2024 ರಂದು ಅಧಿಕಾರವನ್ನು ಸ್ವೀಕರಿಸಿದ್ದ ನವನೀತ್ ಕುಮಾರ್ ಸೆಹಗಲ್ ಅವರು, ಎರಡು ವರ್ಷ ಪೂರೈಸುವ ಮುನ್ನವೇ, ಅಂದರೆ ಡಿಸೆಂಬರ್ 2025 ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅವರ ರಾಜೀನಾಮೆಯನ್ನು ಅಂಗೀಕರಿಸಿದರೂ, ಅವರು ಇಷ್ಟು ಬೇಗ ನಿರ್ಗಮಿಸಲು ನಿಖರವಾದ ಕಾರಣಗಳು ಇನ್ನೂ ಬಹಿರಂಗವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಹೊಸ ನೇಮಕದ ಬಗ್ಗೆ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಸೂನ್ ಜೋಶಿ ಅವರಿಗೆ ಶುಭ ಹಾರೈಸಿದ್ದಾರೆ. “ಜೋಶಿ ಅವರು ಜಾಹೀರಾತು, ಸಾಹಿತ್ಯ, ಕಲೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ವಿಶ್ವದಾದ್ಯಂತ ಹೆಸರು ಮಾಡಿದ ವಿಶಿಷ್ಟ ಸೃಜನಶೀಲ ವ್ಯಕ್ತಿ, ಆದರೂ ಅವರ ಹೃದಯ ಭಾರತಕ್ಕಾಗಿ ಮಿಡಿಯುತ್ತದೆ. ಅವರ ಮಾರ್ಗದರ್ಶನದಲ್ಲಿ ಪ್ರಸಾರ್ ಭಾರತಿ ಹೊಸ ಚೈತನ್ಯ, ಆಳವಾದ ಉದ್ದೇಶ ಹಾಗೂ ಹೊಸ ಸೃಜನಶೀಲ ಧ್ವನಿಯನ್ನು ಪಡೆಯಲಿದೆ,” ಎಂದು ಸಚಿವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಅಭಿನಂದನೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಐಪಿಎಲ್‌ನಲ್ಲೂ ಕಲಾತ್ಮಕ ಶೈಲಿ: ಅಪರೂಪದ ಆಟಗಾರ ಕೆ.ಎಲ್. ರಾಹುಲ್

ಪ್ರಸೂನ್ ಜೋಶಿ ಅವರು ಸಾಹಿತ್ಯ ಹಾಗೂ ಸಂವಹನ ಕ್ಷೇತ್ರದಲ್ಲಿ ವಿಪುಲ ಅನುಭವ ಹೊಂದಿದ್ದಾರೆ. 2017 ರಿಂದ ಅವರು ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (CBFC) ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ ಹಾಗೂ ಚಿತ್ರ ಪ್ರಮಾಣೀಕರಣ ಪ್ರಕ್ರಿಯೆಯಲ್ಲಿ ಮುಖ್ಯವಾದ ಪಾತ್ರ ವಹಿಸಿದ್ದಾರೆ. ಇದಕ್ಕೂ ಮುನ್ನ, ಅವರು ಮೆಕ್ ಕ್ಯಾನ್ ವರ್ಲ್ಡ್ ಗ್ರೂಪ್ (McCann World Group) ಇಂಡಿಯಾದ ಸಿಇಒ ಹಾಗೂ ಏಷ್ಯಾ ಪೆಸಿಫಿಕ್ ಅಧ್ಯಕ್ಷರಾಗಿ ಜಾಹೀರಾತು ಕ್ಷೇತ್ರದಲ್ಲೂ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ, ಅವರು ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ (IGNCA) ಟ್ರಸ್ಟಿಯೂ ಸಹ ಆಗಿದ್ದಾರೆ.

ಇದೆಲ್ಲ ಒಂದೆಡೆಯಾದರೆ, ಜೋಶಿ ಅವರ ಈ ಹೊಸ ನೇಮಕವು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಿಂದೊಮ್ಮೆ ಪ್ರಧಾನಿ ಮೋದಿಯವರನ್ನು ಸಂದರ್ಶನ ಮಾಡುವಾಗ ಪ್ರಸೂನ್ ಜೋಶಿ ಅವರು, ‘ನೀವು ಓರ್ವ ಸಂತನಂತೆ (ಫಕೀರನಂತೆ) ಸರಳ ಜೀವನ ನಡೆಸುತ್ತೀರಂತೆ, ಹೌದಾ?’ ಎಂದು ಪ್ರಶ್ನೆ ಕೇಳಿದ್ದರು. ಈ ಹಳೆಯ ವಿಡಿಯೋವನ್ನು ಈಗ ಮತ್ತೆ ಹಂಚಿಕೊಂಡು ಚರ್ಚಿಸುತ್ತಿರುವ ನೆಟ್ಟಿಗರು, “ಪ್ರಧಾನಿಯವರನ್ನು ಹೊಗಳಿ ಸಂದರ್ಶನ ಮಾಡಿದ ಈ ಕಾರಣಕ್ಕಾಗಿಯೇ ಜೋಶಿ ಅವರಿಗೆ ಈಗಿನ ಈ ಪ್ರಸಾರ್ ಭಾರತಿಯ ಉನ್ನತ ಹುದ್ದೆಯಲ್ಲದೆ, ಕೇಂದ್ರದ ಇತರ ಹುದ್ದೆಗಳು, ಪ್ರಶಸ್ತಿ ಹಾಗೂ ಬಿರುದುಗಳು ಬಕ್ಷೀಸಾಗಿ ಒಲಿದು ಬರುತ್ತಿವೆಯೇ?” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಟುವಾಗಿ ಪ್ರಶ್ನಿಸುತ್ತಿದ್ದಾರೆ.

2018ರಲ್ಲಿ ಲಂಡನ್‌ನಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ‘Bharat Ki Baat, Sabke Saath’ ಕಾರ್ಯಕ್ರಮದಲ್ಲಿ ಪ್ರಸೂನ್ ಜೋಶಿ ಸಂದರ್ಶನ ಮಾಡಿದ್ದರು. ಅಲ್ಲಿ ಅವರು ಮೋದಿ ಅವರನ್ನು “ಫಕೀರಿ” (fakiri – ಸಂತ/ಫಕೀರ್ ಗುಣ, ಸರಳತೆ, ವೈಯಕ್ತಿಕ ಆಸಕ್ತಿ ರಹಿತ) ಎಂದು ವರ್ಣಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...