ಜಮ್ಮು – ಶ್ರೀನಗರ ನಡುವೆ ಮೊದಲ ನೇರ ‘ವಂದೇ ಭಾರತ್‌’ ರೈಲು ಸಂಚಾರ ಆರಂಭ

Date:

ಜಮ್ಮು ಮತ್ತು ಕಾಶ್ಮೀರದ ಜನತೆ ಹಾಗೂ ಕಣಿವೆ ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಇದೊಂದು ಸಿಹಿಸುದ್ದಿ. ಜಮ್ಮು ಮತ್ತು ಶ್ರೀನಗರದ ನಡುವಿನ ಮೊದಲ ನೇರ ರೈಲು ಸಂಪರ್ಕವಾದ ‘ವಂದೇ ಭಾರತ್ ಎಕ್ಸ್‌ಪ್ರೆಸ್‌’ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು (ಏಪ್ರಿಲ್ 30) ಹಸಿರು ನಿಶಾನೆ ತೋರಿದ್ದಾರೆ. ಈ ಮೂಲಕ ಜಮ್ಮು ಮತ್ತು ಕಾಶ್ಮೀರದ ಅವಳಿ ರಾಜಧಾನಿಗಳ ನಡುವೆ ಸುಗಮ ಹಾಗೂ ಯಾವುದೇ ಹವಾಮಾನದಲ್ಲೂ ಸಂಚರಿಸಬಹುದಾದ (All weather) ರೈಲು ಸಂಪರ್ಕದ ಹೊಸ ಶಕೆ ಆರಂಭವಾಗಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

ಜಮ್ಮು ತಾವಿ ರೈಲು ನಿಲ್ದಾಣದಲ್ಲಿ ನಡೆದ ಈ ಉದ್ಘಾಟನಾ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಪ್ರಧಾನಿ ಕಚೇರಿ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಉಪಸ್ಥಿತರಿದ್ದರು. ಈ ಹಿಂದೆ 2025ರ ಜೂನ್ 6ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕತ್ರಾ ಮತ್ತು ಶ್ರೀನಗರ ನಡುವಿನ ರೈಲು ಸೇವೆಗೆ ಚಾಲನೆ ನೀಡಿದ್ದರು. ಇದೀಗ ಅದೇ ಸೇವೆಯನ್ನು ಜಮ್ಮು ತಾವಿ ನಿಲ್ದಾಣದವರೆಗೆ ವಿಸ್ತರಿಸಲಾಗಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಬೋಗಿಗಳ ಸಂಖ್ಯೆಯನ್ನು 8ರಿಂದ 20ಕ್ಕೆ ಹೆಚ್ಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ರಸ್ತೆ ಮಾರ್ಗವಾಗಿ ಜಮ್ಮು ಮತ್ತು ಶ್ರೀನಗರ ನಡುವಿನ ಪ್ರಯಾಣಕ್ಕೆ ಸಾಮಾನ್ಯವಾಗಿ 8 ಗಂಟೆಗಳ ಕಾಲಾವಕಾಶ ಬೇಕಿತ್ತು. ಅಲ್ಲದೆ, ಹವಾಮಾನ ವೈಪರೀತ್ಯದಿಂದಾಗಿ ಹೆದ್ದಾರಿಗಳು ಪದೇ ಪದೇ ಮುಚ್ಚಲ್ಪಡುತ್ತಿದ್ದವು. ಆದರೆ, ಈಗ ಈ 267 ಕಿಲೋಮೀಟರ್ ದೂರವನ್ನು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕೇವಲ 4 ಗಂಟೆ 50 ನಿಮಿಷಗಳಲ್ಲಿ ಕ್ರಮಿಸಲಿದೆ. ಇದರಿಂದ ಪ್ರಯಾಣದ ಸಮಯ ಗಣನೀಯವಾಗಿ ಉಳಿತಾಯವಾಗಲಿದ್ದು, ಈ ಭಾಗದ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ದೊಡ್ಡ ಮಟ್ಟದ ಉತ್ತೇಜನ ಸಿಗುವ ನಿರೀಕ್ಷೆಯಿದೆ.

ಇದನ್ನು ಓದಿದ್ದೀರಾ? ತಮಿಳುನಾಡಿನ ಮೊದಲ ಲಿಂಗತ್ವ ಅಲ್ಪಸಂಖ್ಯಾತ ಕ್ರಿಕೆಟ್ ಅಂಪೈರ್ ರಿತಿಕಾ ಶ್ರೀ

ರೈಲಿನ ವೇಳಾಪಟ್ಟಿ ಮತ್ತು ನಿಲ್ದಾಣಗಳು
ಈ ಮಾರ್ಗದಲ್ಲಿ ವಾಣಿಜ್ಯ ಸೇವೆ ಮೇ 2ರಿಂದ ಅಧಿಕೃತವಾಗಿ ಆರಂಭವಾಗಲಿದೆ. ವಾರದಲ್ಲಿ ಆರು ದಿನಗಳ ಕಾಲ (ಮಂಗಳವಾರ ಹೊರತುಪಡಿಸಿ) ಈ ರೈಲು ಸೇವೆ ಲಭ್ಯವಿರಲಿದೆ:

ರೈಲು ಸಂಖ್ಯೆ 26401: ಜಮ್ಮು ತಾವಿ ನಿಲ್ದಾಣದಿಂದ ಮುಂಜಾನೆ 6:20ಕ್ಕೆ ಹೊರಟು, ಶ್ರೀ ಮಾತಾ ವೈಷ್ಣೋದೇವಿ ಕತ್ರಾ, ರಿಯಾಸಿ ಮತ್ತು ಬನಿಹಾಲ್ ನಿಲ್ದಾಣಗಳಲ್ಲಿ ನಿಲುಗಡೆ ನೀಡಿ, ಬೆಳಗ್ಗೆ 11:10ಕ್ಕೆ ಶ್ರೀನಗರ ತಲುಪಲಿದೆ.

ರೈಲು ಸಂಖ್ಯೆ 26402 (ಹಿಂದಿರುಗುವ ಮಾರ್ಗ): ಶ್ರೀನಗರದಿಂದ ಮಧ್ಯಾಹ್ನ 2:00 ಗಂಟೆಗೆ ಹೊರಟು, ಸಂಜೆ 6:50ಕ್ಕೆ ಜಮ್ಮು ತಾವಿ ನಿಲ್ದಾಣವನ್ನು ತಲುಪಲಿದೆ.

ವಿಶೇಷ ತಂತ್ರಜ್ಞಾನ ಮತ್ತು ಸೌಲಭ್ಯಗಳು
ಈ ರೈಲನ್ನು ಸಂಪೂರ್ಣವಾಗಿ ಸ್ವದೇಶಿ ತಂತ್ರಜ್ಞಾನದಲ್ಲಿ ನಿರ್ಮಿಸಲಾಗಿದೆ. ಮೈನಸ್ 20 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ, ಅಂದರೆ ವಿಪರೀತ ಹಿಮಪಾತ ಮತ್ತು ಚಳಿಯಲ್ಲೂ ಯಾವುದೇ ಅಡೆತಡೆಯಿಲ್ಲದೆ ಸುರಕ್ಷಿತವಾಗಿ ಕಾರ್ಯನಿರ್ವಹಿಸುವ ವಿಶೇಷ ತಂತ್ರಜ್ಞಾನವನ್ನು ಇದು ಹೊಂದಿದೆ.

ಪ್ರಯಾಣಿಕರ ಸುರಕ್ಷತೆಗಾಗಿ ‘ಕವಚ’ (Kavach) ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾಗಳು, ಜಿಪಿಎಸ್ ಆಧಾರಿತ ಮಾಹಿತಿ ವ್ಯವಸ್ಥೆ, ಸ್ವಯಂಚಾಲಿತ ಬಾಗಿಲುಗಳು ಮತ್ತು ಆರಾಮದಾಯಕವಾಗಿ ತಿರುಗಿಸಬಹುದಾದ ಆಸನಗಳನ್ನು ಅಳವಡಿಸಲಾಗಿದೆ. ಜಮ್ಮು ಮತ್ತು ಶ್ರೀನಗರ ನಡುವಿನ ಈ ವಂದೇ ಭಾರತ್ ರೈಲು ಕೇವಲ ಒಂದು ಸಾರಿಗೆ ವ್ಯವಸ್ಥೆಯಾಗಿರದೆ, ಇಡೀ ಕಣಿವೆ ರಾಜ್ಯದ ಪ್ರಗತಿಗೆ ಹೊಸ ಮುನ್ನುಡಿ ಬರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...