‘ನನ್ನ ಶೈಕ್ಷಣಿಕ ಹಣ-ಸಾಲದ ದಾಖಲೆ ಕೊಡುತ್ತೇನೆ, ಚಕ್ರವರ್ತಿ ತಮ್ಮ ಪದವಿ ತೋರಿಸುತ್ತಾರಾ’: ಅಭಿಜೀತ್ ದೀಪ್ಕೆ ಸವಾಲು

Date:

ತಮ್ಮ ಶೈಕ್ಷಣಿಕ ಅರ್ಹತೆ ಮತ್ತು ಶಿಕ್ಷಣಕ್ಕಾಗಿನ ಹಣದ ಮೂಲ ಕುರಿತು ಪ್ರಶ್ನೆ ಎತ್ತುತ್ತಿರುವ ಬಿಜೆಪಿ ನಾಯಕರಿಗೆ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿರುಗೇಟು ನೀಡಿದ್ದಾರೆ. “ನನ್ನ ಪದವಿ, ವಿದ್ಯಾರ್ಥಿವೇತನ ಹಾಗೂ ಶಿಕ್ಷಣ ಸಾಲದ ದಾಖಲೆಗಳನ್ನು ಬಹಿರಂಗಪಡಿಸಲು ನಾನು ಸಿದ್ಧ. ಆದರೆ, ಚಕ್ರವರ್ತಿ ತಮ್ಮ ಪದವಿ ಪ್ರಮಾಣಪತ್ರವನ್ನು ತೋರಿಸುತ್ತಾರೆಯೇ” ಎಂದು ದೀಪ್ಕೆ ಪ್ರಶ್ನಿಸಿದ್ದಾರೆ. ಮೋದಿ ಅವರ ಪದವಿ ಕುರಿತು ಪರೋಕ್ಷವಾಗಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

- Advertisement -

ದೀಪ್ಕೆ ಅವರ ಶೈಕ್ಷಣಿಕ ಅರ್ಹತೆ ಮತ್ತು ಅವರ ತಂದೆಯ ಹಣಕಾಸಿನ ಮೂಲಗಳನ್ನು ತಿಳಿಯಲು ಬಿಜೆಪಿ ಕಾರ್ಯಕರ್ತರೊಬ್ಬರು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ದೀಪ್ಕೆ, ‘ಎಕ್ಸ್‌’ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ವಿಡಿಯೋದಲ್ಲಿ; “ನಾನು ಯಾವ ರೀತಿ ಶಿಕ್ಷಣ ಪೂರ್ಣಗೊಳಿಸಿದೆ ಎಂದು ತಿಳಿಯಲು ಬಿಜೆಪಿ ಕಾರ್ಯಕರ್ತ ಆರ್‌ಟಿಐ ಹಾಕಿದ್ದಾರೆ. ನನ್ನ ವಿದ್ಯಾರ್ಥಿವೇತನ ಪತ್ರ, ಶಿಕ್ಷಣ ಸಾಲದ ದಾಖಲೆ ಹಾಗೂ ಪದವಿ ಪ್ರಮಾಣಪತ್ರವನ್ನು ತೋರಿಸಲು ನಾನು ಸಿದ್ಧನಿದ್ದೇನೆ. ಆದರೆ, ನಿಮ್ಮ ನಾಯಕರು ತಮ್ಮ ನಿಜವಾದ ಪದವಿಯನ್ನು ತೋರಿಸುತ್ತಾರೆಯೇ” ಎಂದು ದೀಪ್ಕೆ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ದೀಪ್ಕೆ, ತಮ್ಮ ವಿರುದ್ಧ ಸರ್ಕಾರ ಯಾವುದೇ ತನಿಖೆ ನಡೆಸಿದರೂ ಎದುರಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ. “ಈ ಸರ್ಕಾರದ ವಿರುದ್ಧ ಯಾರೇ ಧ್ವನಿ ಎತ್ತಿದರೂ ಅವರ ಮೇಲೆ ಇಡಿ, ಸಿಬಿಐ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳನ್ನು ಬಳಸಲಾಗುತ್ತದೆ. ಪ್ರಧಾನಿ ನನ್ನ ವಿರುದ್ಧ ಇಡಿಯನ್ನು ಕಳುಹಿಸುವುದಾದರೆ, ಅವರು ತಮ್ಮ ಪದವಿ ಪ್ರಮಾಣಪತ್ರದ ಪ್ರತಿಯನ್ನೂ ಜೊತೆಗೆ ಕಳುಹಿಸಲಿ. ಆಗ ನಾನು ನನ್ನ ಶಿಕ್ಷಣ ಸಾಲ, ವಿದ್ಯಾರ್ಥಿವೇತನ ಹಾಗೂ ಪದವಿ ದಾಖಲೆಗಳನ್ನು ಸಾರ್ವಜನಿಕಗೊಳಿಸುತ್ತೇನೆ” ಎಂದಿದ್ದಾರೆ.

ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಉದ್ದೇಶವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ದೀಪ್ಕೆ, “ರಾಜಕೀಯ ಪಕ್ಷ ಕಟ್ಟುವ ಬಗ್ಗೆ ಮಾಧ್ಯಮಗಳಿಗೆ ಹೆಚ್ಚು ಆಸಕ್ತಿ ಇದೆ. ದೇಶದಲ್ಲಿ ಈಗಾಗಲೇ ಸಾಕಷ್ಟು ರಾಜಕೀಯ ಪಕ್ಷಗಳಿವೆ. ಮತ್ತೊಂದು ಪಕ್ಷ ಆರಂಭಿಸುವುದರಿಂದ ಏನು ಪ್ರಯೋಜನ? ನಾವು ಇದನ್ನು ಸಾಮಾಜಿಕ ಚಳವಳಿಯಾಗಿಯೇ ಮುಂದುವರಿಸಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

“ಜನರ ರಾಜಕೀಯದ ಮೇಲಿನ ನಂಬಿಕೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಬೆಳಗ್ಗೆ ಒಂದು ಪಕ್ಷಕ್ಕೆ ಮತ ಹಾಕಿದರೆ, ಸಂಜೆ ಮತ್ತೊಂದು ಪಕ್ಷದ ಸರ್ಕಾರ ರಚನೆಯಾಗುತ್ತದೆ. ಬೆಳಗ್ಗೆ ಶಾಸಕರಾಗಿದ್ದವರು, ಸಂಜೆ ಬೇರೆ ಪಕ್ಷಕ್ಕೆ ಸೇರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಜನರು ರಾಜಕೀಯದ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಒಂದೇ ಮತಗಟ್ಟೆಯಲ್ಲಿ ಶೇ. 62ರಷ್ಟು ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ರಮೇಶ್ ಬಾಬು ದೂರು

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....