‘ಮನುವಾದಿ ಮನಸ್ಥಿತಿ’: ಕಾಂಗ್ರೆಸ್ ಸಂಸದೆಯ ಕುರಿತ ಬಿಜೆಪಿ ನಾಯಕನ ‘ಸೆರಗು’ ಹೇಳಿಕೆಗೆ ರಾಹುಲ್ ಕಿಡಿ

Date:

ಗುಜರಾತ್ ಬಿಜೆಪಿ ಘಟಕದ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಅವರು ಕಾಂಗ್ರೆಸ್ ಸಂಸದೆ ಗೆನಿಬೆನ್ ಠಾಕೋರ್ ಅವರ ಕುರಿತು ನೀಡಿರುವ ‘ಸೆರಗು’ (ಪಲ್ಲು) ಕುರಿತಾದ ಹೇಳಿಕೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿಯು ‘ನಾರಿ ವಂದನೆ’ಯ ಮುಖವಾಡ ಧರಿಸಿದ್ದು, ಅದರ ಹಿಂದೆ ‘ಮನುವಾದಿ ಮತ್ತು ಮಹಿಳಾ ವಿರೋಧಿ’ ಮನಸ್ಥಿತಿ ಅಡಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ ‘ಎಕ್ಸ್‌’ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಗುಜರಾತ್ ಬಿಜೆಪಿ ಅಧ್ಯಕ್ಷರು ನಮ್ಮ ಮಹಿಳಾ ಸಂಸದೆ ಗೆನಿಬೆನ್ ಠಾಕೋರ್ ಅವರ ಬಗ್ಗೆ ಅಸಭ್ಯವಾದ ಹೇಳಿಕೆ ನೀಡಿದ್ದಾರೆ. ಈ ಮೂಲಕ ಅವರ ‘ನಾರಿ ವಂದನೆ’ಯ ಮುಖವಾಡ ಕಳಚಿ ಬಿದ್ದಿದೆ. ಇದು ಕೇವಲ ನಾಚಿಕೆಗೇಡಿನ ಸಂಗತಿಯಲ್ಲ, ಬದಲಿಗೆ ಬಿಜೆಪಿಯ ಮಹಿಳಾ ವಿರೋಧಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ,” ಎಂದು ಕಿಡಿಕಾರಿದ್ದಾರೆ. ಮಹಿಳೆಯರಿಗೆ ಹಕ್ಕು ಮತ್ತು ಗೌರವ ನೀಡುವಲ್ಲಿ ಬಿಜೆಪಿಯ ಬದ್ಧತೆಯನ್ನು ಅವರು ಇದೇ ವೇಳೆ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಮಹಿಳೆಯರನ್ನು ಗುರಿ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ರಾಹುಲ್, ಇಂತಹ ಹೇಳಿಕೆಗಳು ಅವರ ‘ವಿಕೃತ ಮನೋಭಾವ’ವನ್ನು ಎತ್ತಿ ತೋರಿಸುತ್ತವೆ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಉಲ್ಲೇಖಿಸಿದ ಅವರು, ಮಹಿಳೆಯರನ್ನು ಗೌರವಿಸುವ ಕುರಿತು ಬಿಜೆಪಿ ತನ್ನ ಹಳೆಯ ಮಾತುಗಳನ್ನು ನೆನಪಿಸಿಕೊಳ್ಳಲಿ ಎಂದು ಎಚ್ಚರಿಸಿದ್ದಾರೆ. ಇಂತಹ ಅಪಮಾನಗಳಿಗೆ ಗುಜರಾತ್ ಸೇರಿದಂತೆ ದೇಶದ ಮಹಿಳೆಯರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕರ್ನಾಟಕ ಮಹಿಳಾ ಕ್ರಿಕೆಟ್ ಸಾಗಬೇಕಾದ ಹಾದಿ ಯಾವುದು? KSCA ತೋರಿಸಬೇಕಿದೆ ದಿಕ್ಕು

ಕಳೆದ ಗುರುವಾರ ಬನಸ್ಕಾಂತದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಜಗದೀಶ್ ವಿಶ್ವಕರ್ಮ, “ಬಿಜೆಪಿಯು 30 ವರ್ಷಗಳ ನಂತರ ಠಾಕೋರ್ ಅವರ ಸೀರೆಯ ‘ಸೆರಗಿ’ನಿಂದ (Pallu) ಜಿಲ್ಲಾ ಪಂಚಾಯತ್ ನಿಯಂತ್ರಣವನ್ನು ತನ್ನ ವಶಕ್ಕೆ ಪಡೆದುಕೊಂಡಿದೆ” ಎಂದು ಹೇಳಿದ್ದರು. ಈ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಮಹಿಳೆಯರನ್ನು ಅವಹೇಳನ ಮಾಡಿದಂತಾಗಿದೆ ಎಂದು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.

ಇದೇ ವಿಷಯವಾಗಿ ಈಗಾಗಲೇ ಹಲವು ಕಾಂಗ್ರೆಸ್ ನಾಯಕರು ವಿಶ್ವಕರ್ಮ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಸಂಸದೆಯ ಕುರಿತು ಇಂತಹ ಕೀಳುಮಟ್ಟದ ಹೇಳಿಕೆ ನೀಡಿರುವುದು ಅಕ್ಷಮ್ಯ ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...