ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯ ಸೃಷ್ಟಿಗೆ ‘ಕರ್ನಾಟಕ ಮುಸ್ಲಿಮ್ ಲೇಖಕರ ಸಂಘ’ವು ಉತ್ತೇಜನ ನೀಡುತ್ತಿದೆ. ಇದೇ ಉದ್ದೇಶದಿಂದ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ನೀಡಲು ಮುಂದಾಗಿದೆ. 2025ನೇ ಸಾಲಿನಲ್ಲಿ ಪ್ರಕಟಗೊಂಡ ಮುಸ್ಲಿಂ ಲೇಖಕಕರ ಕೃತಿಗಳನ್ನು ಪ್ರಶಸ್ತಿಗೆ ಆಹ್ವಾನಿಸಿದೆ. ಆಯ್ಕೆಯಾಗುವ ಅತ್ಯುತ್ತಮ ಕೃತಿಗೆ 10,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ ಎಂದು ಸಂಘ ಹೇಳಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಘವು, “ಪ್ರಶಸ್ತಿಯಲ್ಲಿ ಭಾಗವಹಿಸಲು ಇಚ್ಛಿಸುವ ಮುಸ್ಲಿಮ್ ಬರಹಗಾರರು 2025ರ ಸಾಲಿನಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟಗೊಂಡ ತಮ್ಮ ಕನ್ನಡ ಕೃತಿಯ 4 ಪ್ರತಿಗಳನ್ನು ಅಕ್ಟೋಬರ್ 10ರೊಳಗೆ ಸಂಘಕ್ಕೆ ತಲುಪಿಸಬೇಕು. ಆಸಕ್ತರು ತಮ್ಮ ಪುಸ್ತಕಗಳನ್ನು ‘ಸಂಚಾಲಕರು, ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ, ಮುಸ್ಲಿಮ್ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು – 575001’ ವಿಳಾಸಕ್ಕೆ ಕಳುಹಿಸಬಹುದು” ಎಂದು ತಿಳಿಸಿದೆ.
“ಅನುವಾದಿತ ಕೃತಿಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಪ್ರಶಸ್ತಿಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಹಿಂತಿರುಗಿಸಲಾಗುವುದಿಲ್ಲ” ಎಂದು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು. ಹೆಚ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು: 9845054191 ಅಥವಾ 0824-2410358 ಅನ್ನು ಸಂಪರ್ಕಿಸಬಹುದು ಎಂದು ಸಂಘ ಹೇಳಿದೆ.



