ಭಾರೀ ಪ್ರತಿಭಟನೆ: ಅಶಾಂತಿಯ ನಡುವೆಯೇ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಎರಡನೇ ಹಂತದ ಮತದಾನ!

Date:

ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ (PoK) ಶಾಸನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಭಾನುವಾರ ನಡೆಯುತ್ತಿದೆ. ಕೆಳದ ಕೆಲವು ದಿನಗಳಿಂದ ಪಿಒಕೆಯಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿದ್ದು, ಶನಿವಾರ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಸಂಘರ್ಷ ನಡೆದಿದೆ. ಪರಿಣಾಮ, ಮುಜಫರಾಬಾದ್‌ನ ಹಲವು ಭಾಗಗಳಲ್ಲಿ ಸುಟ್ಟ ವಾಹನಗಳು, ಕಲ್ಲುಗಳಿಂದ ಮುಚ್ಚಿದ ರಸ್ತೆಗಳು ಹಾಗೂ ಬಿಗಿ ಭದ್ರತೆ ಕಂಡುಬಂದಿವೆ.‌ ಈಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದರ ನಡುವೆಯೂ ಭಾನುವಾರ ಮತದಾನ ನಡೆಯುತ್ತಿದೆ.

- Advertisement -

ಪಿಒಕೆ ಪ್ರತ್ಯೇಕ ಶಾಸನ ಸಭೆಯನ್ನು ಹೊಂದಿದ್ದರು. ಈ ಸೀಮೆಯ ಹತೋಟಿ ಪಾಕ್ ಸರ್ಕಾರ‌ ಮತ್ತು ಪಾಕ್ ಸೇನೆಯೇ ಹಿಡಿತದಲ್ಲಿದೆ. ಸದ್ಯ, ಪಿಒಕೆಗೆ ಒಟ್ಟು 53 ಸ್ಥಾನಗಳ ಶಾಸನ ಸಭೆ ಇದ್ದು, ಈ ಪೈಕಿ 45 ಕ್ಷೇತ್ರಗಳು ನೇರ ಮತದಾನಕ್ಕೆ ಒಳಪಡುತ್ತವೆ. ಈ 45 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ.ಮೊದಲ ಹಂತದ ಚುನಾವಣೆ ಈಗಾಗಲೇ ಮುಗಿದಿದ್ದು, ಪ್ರಸ್ತುತ ಎರಡನೇ ಹಂತದ ಮತದಾನ ನಡೆಯುತ್ತಿದೆ. ರಸ್ತೆಗಳಲ್ಲಿ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ಭಾರಿ ಪ್ರಮಾಣದಲ್ಲಿ ನಿಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಬಿಆರ್ ಚೋಪ್ರಾ ʼಮಹಾಭಾರತʼಕ್ಕೆ ಜೀವ ನೀಡಿದ್ದ ಮುಸ್ಲಿಂ ಪಂಡಿತ:...

ಇಂದು ಡಾ. ರಾಹೀ ಮಾಸೂಮ್ ರೇಜಾ ಅವರ ನೂರನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ನಾವು ಕೇವಲ ಒಬ್ಬ ಮಹಾನ್ ಲೇಖಕರನ್ನು ನೆನಪಿಸಿಕೊಳ್ಳುತ್ತಿಲ್ಲ; ಬದಲಿಗೆ ಭಾರತೀಯ ಸಮಾಜಕ್ಕೆ ಅತ್ಯಗತ್ಯವಾಗಿರುವ ಸಹಬಾಳ್ವೆಯ ಮೌಲ್ಯಗಳನ್ನು ಪುನರುಚ್ಚರಿಸಿಕೊಳ್ಳುತ್ತಿದ್ದೇವೆ. ಮಹಾಭಾರತ...

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ಗಮನಾರ್ಹವಾಗಿ, PoK ಯಲ್ಲಿ ಗೋಧಿ ಮೇಲಿನ ಸಬ್ಸಿಡಿ ಕಡಿತ, ಭಾರಿ ವಿದ್ಯುತ್ ದರ ಏರಿಕೆ ಹಾಗೂ ಆರ್ಥಿಕ ಸಂಕಷ್ಟದ ವಿರುದ್ಧ ‘ಜಾಯಿಂಟ್ ಅವಾಮಿ ಆಕ್ಷನ್ ಕಮಿಟಿ’ (JAAC) ನೇತೃತ್ವದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಭಾರೀ ಜನಪ್ರತಿಭಟನೆಗಳು ನಡೆಯುತ್ತಿವೆ.

​ಈ ಪ್ರತಿಭಟನೆಗಳನ್ನು ಹತೋಟಿಗೆ ತರಲು ಪಾಕಿಸ್ತಾನಿ ಪಡೆಗಳು ಬಲಪ್ರಯೋಗ ಮತ್ತು ಭದ್ರತಾ ಬಿಗಿಕ್ರಮ ಕೈಗೊಂಡಿದ್ದರಿಂದ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ಇದರ ನಡುವೆಯೇ‌ ನಡೆಯುತ್ತಿರುವ ಚುನಾವಣೆಯಲ್ಲಿ ಪಾಕಿಸ್ತಾನದ ಕೇಂದ್ರ ಸರ್ಕಾರ ಹಾಗೂ ಸೇನೆಯು ತನಗೆ ಬೇಕಾದ ಅಭ್ಯರ್ಥಿಗಳನ್ನು ಗೆಲ್ಲಿಸಲು ಅಕ್ರಮ ಎಸಗುತ್ತಿದೆ ಎಂಬ ಗಂಭೀರ ಆರೋಪಗಳನ್ನು ಸ್ಥಳೀಯರು ಮತ್ತು ವಿಪಕ್ಷಗಳು ಮಾಡುತ್ತಿವೆ.

​ಇಂತಹ ಅಕ್ರಮಗಳು ಮತ್ತು ಸೇನಾ ಹಸ್ತಕ್ಷೇಪವನ್ನು ವಿರೋಧಿಸಿ ಇಮ್ರಾನ್ ಖಾನ್ ಅವರ ಪಿಟಿಐ ಸೇರಿದಂತೆ ಕೆಲವು ಪ್ರಮುಖ ರಾಜಕೀಯ ಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಕೊನೆಯ ಗಳಿಗೆಯ ಪ್ರಯೋಗಗಳು ಅಪಾಯಕಾರಿ’: ಟೀಮ್ ಇಂಡಿಯಾಗೆ ಯುವರಾಜ್ ಸಿಂಗ್ ಸಲಹೆ

ಮುಂಬರುವ 2027ರ ಏಕದಿನ ವಿಶ್ವಕಪ್‌ ಟೂರ್ನಿಗೆ ಸಜ್ಜಾಗುತ್ತಿರುವ ಭಾರತ ಕ್ರಿಕೆಟ್ ತಂಡದಲ್ಲಿ...

ಅರಬ್ಬಿ ಸಮುದ್ರದಲ್ಲಿ ಭಾರತ-ಪಾಕ್ ನೌಕಾಪಡೆ ನೌಕೆಗಳ ಡಿಕ್ಕಿ: ಪಾಕಿಸ್ತಾನ ನಡವಳಿಕೆಗೆ ವಿದೇಶಾಂಗ ಸಚಿವಾಲಯ ಆಕ್ಷೇಪ

ಅಂತಾರಾಷ್ಟ್ರೀಯ ಜಲಪ್ರದೇಶವಾದ ಉತ್ತರ ಅರಬ್ಬಿ ಸಮುದ್ರದಲ್ಲಿ ಗಸ್ತು ಕಾರ್ಯದಲ್ಲಿದ್ದ ಭಾರತೀಯ ನೌಕಾಪಡೆಯ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...