ವಿಜಯನಗರ | ಎಸ್‌ಐಆರ್‌ ಜಾಥಾಗೆ ಅಧಿಕೃತ ಚಾಲನೆ

Date:

ಪರಿಶಿಷ್ಟ ಜಾತಿಯ ಮತಗಳನ್ನು ಕದಿಯಲು ಎಸ್ಐಆರ್ ಮಾಡುತ್ತಿದ್ದಾರೆ. ಅಕ್ರಮ ನಿವಾಸಿಗಳನ್ನು ಪತ್ತೆ ಹಚ್ಚುವ ನೆಪದಲ್ಲಿ ಈ ದೇಶದ ಮೂಲ ನಿವಾಸಿಗಳ ಮತದಾನದ ಹಕ್ಕನ್ನು ಕದಿಯುತ್ತಿದ್ದೀರಿ ಎಂದು ಮಾನವ ಬಂಧುತ್ವ ವೇದಿಕೆಯ ಮುಖಂಡ ಸೋಮಶೇಖರ್ ಬಣ್ಣದಮನೆ ಕಳವಳ ವ್ಯಕ್ತಪಡಿಸಿದರು.

ಎದ್ದೇಳು ಕರ್ನಾಟಕ ವತಿಯಿಂದ ಎಸ್ಐಆರ್ ವಿರೋಧಿ ಜನಜಾಗೃತ ಜಾಥಾವನ್ನು ಹಮ್ಮಿಕೊಳ್ಳಲಾಗಿದ್ದು, ಎಸ್ಐಆರ್ ವಿರೋಧಿ ಕರ್ನಾಟಕದ ಮಾರ್ಗ 1ರ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಜಾಗೃತ ಜಾಥಾ ನಡೆಯುತ್ತಿದ್ದು, ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಈ ಜಾಥಾಗೆ ಅಧಿಕೃತ ಚಾಲನೆ ನೀಡಲಾಯಿತು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಸೋಮಶೇಖರ್‌ ಬಣ್ಣದಮನೆ “ಕಳೆದ ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷೆ ಮಾಡಿದಷ್ಟು ಸೀಟ್ ಬರಲಿಲ್ಲ ಎಂದು ಎಸ್ಐಆರ್ ತಂದಿದ್ದಾರೆ. ಬುದ್ಧ, ಬಸವ ಹಾಗೂ ಅಂಬೇಡ್ಕರ್ ನಾಡಿನಲ್ಲಿ ನಿಮ್ಮ ಎಸ್ಐಆರ್ ನಾಟಕ ನಡೆಯದು” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಎದ್ದೇಳು ಕರ್ನಾಟಕ ಸಂಘಟನೆಯ ದುರ್ಗೇಶ್ ಮಾತನಾಡಿ, “ಎಸ್ಐಆರ್ ವಿರೋಧಿಸಿ ನಮ್ಮ ಮತದಾನದ ಹಕ್ಕನ್ನು ರಕ್ಷಿಸಲು ಒಗ್ಗಟ್ಟಾಗೋಣ, 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿರೋಧ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಸಾಹಿತಿಗಳಾದ ಬಿ.ಪೀರ್ ಭಾಷಾ ಅವರು ಮಾತನಾಡಿ “ಬಿಜೆಪಿಯವರಿಗೆ ಬೇಕಾಗಿದ್ದು ಸರ್ವಾಧಿಕಾರ. ಅದನ್ನು ಉಳಿಸಿಕೊಳ್ಳಲು ಈ ಎಸ್ಐಆರ್ ತಂದಿದ್ದಾರೆ. ಬಡವರು, ಹಿಂದುಳಿದವರು, ಮುಸಲ್ಮಾನ, ದಲಿತರ ಮತದಾನದ ಹಕ್ಕು ಕಿತ್ತುಕೊಂಡು ಸರ್ವಾಧಿಕಾರ ಧೋರಣೆ ಮಾಡುತ್ತಿದ್ದಾರೆ. ಎಸ್ಐಆರ್ ಎನ್ನುವುದು ಪ್ರಜಾಪ್ರಭುತ್ವಕ್ಕೆ ಉಣಿಸುವ ವಿಷ” ಎಂದು ಟೀಕಿಸಿದರು.

ಎಸ್ಡಿಪಿಐ ಜಿಲ್ಲಾಧ್ಯಕ್ಷರಾದ ಸದ್ದಾಂ ಅವರು ಮಾತನಾಡಿ, “ಎಸ್ಐಆರ್ ಎನ್ನುವುದು ಎನ್ಆರ್‌ಸಿ ಪ್ರಕ್ರಿಯೆಯ ಹಿಂಬಾಗಿಲು. ಸಮಾಜ ಒಡೆಯುವ ಶಕ್ತಿಗಳಿಗೆ ಬುದ್ದಿ ಕಲಿಸಿಯೇ ತೀರುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಜನಶಕ್ತಿ ಸಂಘಟನೆಯ ಚೆನ್ನಮ್ಮ ಮಾತನಾಡಿ, “ಅಮಾಯಕರನ್ನು ಮತದಾನದ ಹಕ್ಕಿನಿಂದ ದೂರ ಮಾಡುತ್ತಿರುವವರನ್ನು ಅಧಿಕಾರದಿಂದ ಇಳಿಸಬೇಕು” ಎಂದು ಅಭಿಪ್ರಾಯಿಸಿದರು.

ಈ ಸಂದರ್ಭದಲ್ಲಿ ಜನಶಕ್ತಿ, ಮಾನವ ಬಂಧುತ್ವ ವೇದಿಕೆ, ಎದ್ದೇಳು ಕರ್ನಾಟಕ, ದಲಿತ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...

‘ನಾನೇ ಬುರುಡೆ ಒಡೆದಿದ್ದು’ ಎಂದಾತನಿಗೆ ಜಾಮೀನು; ಪುರಾವೆ ಇಲ್ಲದಿದ್ದರೂ ವರ್ಷಗಳಿಂದ ಜೈಲಿನಲ್ಲಿದ್ದಾರೆ ಹೋರಾಟಗಾರರು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ...

ಎನ್‌ಡಿಎ ರಾಜ್ಯಗಳಲ್ಲಿ ಯುಸಿಸಿ ಜಾರಿಗೆ ಯತ್ನಕ್ಕೆ ಮೈತ್ರಿ ಪಕ್ಷಗಳಲ್ಲಿ ತೀವ್ರ ವಿರೋಧ

​ಮುಂಬರುವ 2029ರ ಲೋಕಸಭಾ ಚುನಾವಣೆಯೊಳಗೆ ದೇಶದ 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ...