ವಿಜಯಪುರ | ಜಗತ್ತಿನ ಎಲ್ಲ ಜೀವಚರಗಳು ಒಂದಲ್ಲ ಒಂದು ರೀತಿ ಕಾರ್ಮಿಕರೆ: ವೈಜನಾಥ ಕರ್ಪೂರಮಠ

Date:

ʼಜಗತ್ತಿನ ಎಲ್ಲ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೆʼ ಎಂಬ ಭಾವದೊಂದಿಗೆ ನಾವು ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಚರಿಸುತ್ತ ಇದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಹೇಳಿದರು.

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಚರಿಸಲಾದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಹೇಶ ದೊಡಮನಿ, ಸಮಿಯುಲ್ಲಾ ಕಾಖಂಡಕಿ, ಮಹಾಂತೇಶ ಗಚ್ಚಿನಮನಿ, ಮಹೇಂದ್ರ ಸರಸಂಗಿ, ಸಲೀಮ ಸೌದಾಗರ ಮುಂತಾದ ಕಾರ್ಮಿಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

- Advertisement -

“ನಾವು ಐಷರಾಮಿ ಮನೆ ನಿರ್ಮಿಸಿ ಸಂತೋಷದಿಂದ ಜೀವಿಸುತ್ತಿರಲು ಕಾರಣ ಕಾರ್ಮಿಕರ ಬೆವರು. ನಮಗೆ ಬಗೆಬಗೆಯ ಆಹಾರವನ್ನು ಉಣಬಡಿಸುವವರು ಕಾರ್ಮಿಕರು, ನಿತ್ಯ ನಾವು ಓಡಾಡಲು ಬಳಸುವ ವಾಹನಗಳ ನಿರ್ಮಾಣದಲ್ಲಿ ಕಾರ್ಮಿಕರ ಪರಿಶ್ರಮವಿದೆ. ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತ ನಮ್ಮ ಜೀವವನ್ನು ರಕ್ಷಿಸುತ್ತಿರುವವರು ಕಾರ್ಮಿಕರು. ರೈಲ್ವೇ ಇಲಾಖೆ, ನೇಯ್ಗೆ, ಇಟ್ಟಿಗೆ ಕಾರ್ಖಾನೆಗಳಲ್ಲೂ ಕಾರ್ಮಿಕರ ಶ್ರಮವಿದೆ. ದೇಶ ನಿರ್ಮಾಣಕ್ಕಾಗಿ ಮಾರ್ಗದರ್ಶನ ಮಾಡುವ ಪತ್ರಿಕಾ ಮಾಧ್ಯಮ, ದೇಶವನ್ನು ಶುಚಿಯಾಗಿರಿಸುವ ಪೌರ ಕಾರ್ಮಿಕರು ಹೀಗೆ ಅನೇಕ ವಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರ ಸುಖ ಸಂತೋಷಕ್ಕಾಗಿ ಪ್ರಾರ್ಥನೆ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಈ ಸುದಿ ಓದಿದ್ದೀರಾ? ಹಾವೇರಿ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಮೂಲಭೂತ ಕರ್ತವ್ಯ: ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪಾ ಎನ್. ಕರೆ

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಕಾಂಗ್ರೆಸ್ ಮುಖಂಡರಾದ ಎಫ್ಎಚ್ ಅಂಕಲಗಿ, ವಿದ್ಯಾವತಿ ಅಂಕಲಗಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಎಂ ಮುಲ್ಲಾ, ವಸಂತ ಹೊನಮೋಡೆ, ದೇಸು ಚವ್ಹಾಣ, ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ ಬಕ್ಷಿ, ಜಿಲ್ಲಾ ಯುವ ಮಜ್ದುರ ಕಾರ್ಮಿಕ ಘಟಕದ ಅಧ್ಯಕ್ಷ ಅಬ್ದುಲಪೀರಾಂ ಜಮಖಂಡಿ, ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಹನೀಫ ಮಕಾಂದಾರ, ಶರಣಪ್ಪ ಯಕ್ಕುಂಡಿ, ಅಬುಬಕರ ಕಂಬಾಗಿ, ಖ್ವಾಜಾ ಆರ್ ಬಾಗವಾನ, ಅಸಂಘಟಿತ ಕಾರ್ಮಿಕ ರಾಜ್ಯ ಕಾರ್ಯದರ್ಶಿಗಳಾದ ರಜಾಕಸಾಬ ಕಾಖಂಡಕಿ, ರಾಜ್ಯ ಒ ಬಿ ಸಿ ವಿಭಾಗದ ಕಾರ್ಯದರ್ಶಿ ಸತೀಶ ಅಡವಿ, ಶಿಡ್ಲಪ್ಪ ತಳಗೇರಿ, ಬಾಬಾಜಾನ ಬಾಗವಾನ, ಶರಣಕುಮಾರ ಹೊನಮೋಡೆ, ಲುಕ್ಮಾನ ಮುಲ್ಲಾ, ನತೀಬಶರೀಫ ಮುಲ್ಲಾ ಹಾಗೂ ಇತರ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...