ಬಿಜೆಪಿ ಅಭ್ಯರ್ಥಿಗಳ 3ಪಟ್ಟಿ ಬಿಡುಗಡೆ : ಅರವಿಂದ ಲಿಂಬಾವಳಿ, ರಾಮದಾಸ್‌ಗೆ ಟಿಕೆಟ್ ಮಿಸ್‌

Date:

  • ಹತ್ತು ಕ್ಷೇತ್ರಗಳ ಟಿಕೆಟ್ ಫೈನಲ್ ಮಾಡಿ ಮೂರನೇ ಪಟ್ಟಿ ಬಿಟ್ಟ ಬಿಜೆಪಿ
  • ಲಿಂಬಾವಳಿ, ರಾಮದಾಸ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಟಿಕೆಟ್ ಮಿಸ್

2023ರ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.

ಹತ್ತು ಕ್ಷೇತ್ರಗಳ ಹೆಸರು ಬಿಡುಗಡೆ ಮಾಡಿರುವ ಪಟ್ಟಿಯಲ್ಲೂ ಬಿಜೆಪಿ ಕೆಲ ಅಚ್ಚರಿಯ ಹೆಸರುಗಳನ್ನು ಕಾಣಿಸಿದೆ.

ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ರಾಮದಾಸ್‌ಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿದರೆ, ಸೋಮಣ್ಣರ ವಲಸೆ ಕಾರಣದಿಂದ ತೆರವಾದ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರಕ್ಕೆ ಬಿಬಿಎಂಪಿ ಕಾರ್ಪೋರೇಟರ್ ಉಮೇಶ್ ಶೆಟ್ಟಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉಳಿದಂತೆ ಮಹದೇವಪುರದಲ್ಲಿ ಹಾಲಿ ಶಾಸಕ ಅರವಿಂದ ಲಿಂಬಾವಳಿ ಬದಲಿಗೆ ಅವರ ಪತ್ನಿ ಮಂಜುಳಾ ಅವರಿಗೂ, ಹೆಬ್ಬಾಳದಲ್ಲಿ ಕಟ್ಟಾ ಪುತ್ರ ಜಗದೀಶ್ ಗೂ ಟಿಕೆಟ್ ನೀಡಲಾಗಿದೆ. ಹಾಗೆಯೇ ಪ್ರಹ್ಲಾದ್‌ ಜೋಶಿ ಗ್ಯಾಂಗ್‌ನ ಮಹೇಶ್‌ ಟೆಂಗಿನಕಾಯಿಗೆ ಕಾಂಗ್ರೆಸ್‌ನ ಜಗದೀಶ್‌ ಶೆಟ್ಟರ್‌ ಸ್ಪರ್ಧಿಸುವ ಹುಬ್ಬಳ್ಳಿ ಸೆಂಟ್ರಲ್‌ ಟಿಕೆಟ್‌ ನೀಡಲಾಗಿದೆ.

ಉಳಿದಂತೆ ಪಟ್ಟಿ ಹೀಗಿದೆ.ಮೂರನೇ ಪಟ್ಟಿ

ಸೇಡಮ್ – ರಾಜಕುಮಾರ ಪಾಟೀಲ್
ಕೊಪ್ಪಳ – ಶ್ರೀಮತಿ.ಮಂಜುಳಾ ಅಮರೇಶ್
ರೋಣ – ಶ್ರೀ ಕಳಕಪ್ಪ ಬಂಡಿ
ಹುಬ್ಬಳ್ಳಿ-ಧಾರವಾಡ-ಕೇಂದ್ರ -ಶ್ರೀ ಮಹೇಶ ಟೆಂಗಿನಕಾಯಿ
ಹಗರಿಬೊಮ್ಮನಹಳ್ಳಿ (SC)- ಶ್ರೀ ಬಿ ರಾಮಣ್ಣ
ಹೆಬ್ಬಾಳ -ಶ್ರೀ ಕಟ್ಟಾ ಜಗದೀಶ್
ಗೋವಿಂದರಾಜ್ ನಗರ -ಶ್ರೀ ಉಮೇಶ್ ಶೆಟ್ಟಿ,
ನಾಗತಾನ್ (SC)-ಸಂಜೀವ್ ಐಹೊಳೆ
ಮಹದೇವಪುರ (SC) – ಶ್ರೀಮತಿ.ಮಂಜುಳಾ ಅರವಿಂದ ಲಿಂಬಾವಳಿ
ಕೃಷ್ಣರಾಜ – ಶ್ರೀ ಶ್ರೀವತ್ಸ,

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶುಕ್ಲಾ ಜೊತೆ ಕರಣ್ ಥಾಪರ್ ಮಾತುಕತೆ: ಮಹಾನಾಯಕನ ಐಬು ಮತ್ತು ಅಂಧಭಕ್ತರ ಹೂಂಕಾರ

ಭಾರತ ದೇಶ ಕಳೆದ ಹತ್ತು ವರ್ಷಗಳಿಂದ ಅದೆಂಥ ಕರಾಳಕೂಪಕ್ಕೆ ಜಾರುತ್ತಿದೆ ಎಂಬುದರ...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಚಿಕ್ಕಮಗಳೂರು | ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ; ಜೆ.ಪಿ ಹೆಗ್ಡೆಗೆ ಜನ ಬೆಂಬಲ

ಚಿಕ್ಕಮಗಳೂರು ಹಾಗೂ ಉಡುಪಿ ಲೋಕಾಸಭಾ ಕ್ಷೇತ್ರವಾಗಿದೆ. ಎಂಟು ವಿಧಾನಸಭಾ ಕ್ಷೇತ್ರ ಒಳಗೊಂಡ...