ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಶಿವರಾಜ್‌ ಕುಮಾರ್‌

Date:

Advertisements
  • ಶಿರಸಿಯಲ್ಲೂ ರೋಡ್‌ ಶೋ ನಡೆಸಲಿರುವ ಶಿವರಾಜ್‌ ಕುಮಾರ್‌
  • ಸಿದ್ದರಾಮಯ್ಯ ನಮ್ಮ ಮೈಸೂರು ಪ್ರಾಂತ್ಯದವರು ಎಂದ ಹಿರಿಯ ನಟ

ಚಿತ್ರ ನಿರ್ಮಾಪಕಿ ಗೀತಾ ಕಾಂಗ್ರೆಸ್‌ ಪಕ್ಷ ಸೇರಿದ ಬೆನ್ನಲ್ಲೇ ಅವರ ಪತಿ, ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ ಕುಮಾರ್‌, ಕೈ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ.

ಏಪ್ರಿಲ್‌ 30ರಂದು ಸೊರಬ ವಿಧಾನಸಭಾ ಕ್ಷೇತ್ರದ ಆನವಟ್ಟಿಯಲ್ಲಿ ತಮ್ಮ ಸಂಬಂಧಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಪರ ರೋಡ್‌ ಶೋ ನಡೆಸುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿರುವ ಶಿವಣ್ಣ, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸೇರಿ ಕಾಂಗ್ರೆಸ್‌ನ ಅನೇಕ ಅಭ್ಯರ್ಥಿಗಳ ಪರ ಮತ ಯಾಚಿಸುವುದಾಗಿ ತಿಳಿಸಿದ್ದಾರೆ.

ಸೋಮವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಶಿವಣ್ಣ, “ಮಧು ಬಂಗಾರಪ್ಪ ನನ್ನ ಸಂಬಂಧಿ ಎನ್ನುವುದಕ್ಕಿಂತ ಆತ ನನ್ನ ಸ್ನೇಹಿತ, ಹೀಗಾಗಿ ಆತನ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದೇನೆ. ಸಾಗರ ಕೂಡ ಪಕ್ಕದ ಕ್ಷೇತ್ರವಾದ ಕಾರಣಕ್ಕೆ ಅಲ್ಲಿನ ಕಾಂಗ್ರೆಸ್‌ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರ ಪರ ರೋಡ್‌ ಶೋ ನಡೆಸುತ್ತಿದ್ದೇನೆ. ಶಿರಸಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಭಿಮಣ್ಣ ನಾಯಕ್‌ ನಮ್ಮ ಕುಟುಂಬ ಆತ್ಮೀಯರು ಹೀಗಾಗಿ ಅವರ ಪರವೂ ಪ್ರಚಾರ ಮಾಡಲಿದ್ದೇನೆ. ಜಗದೀಶ್‌ ಶೆಟ್ಟರ್‌ ಅವರು ಕೂಡ ನಮ್ಮ ಕುಟುಂಬದ ಆಪ್ತರು, ಅವರ ಪರ ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸಲಿದ್ದೇನೆ. ಅಶೋಕ್‌ ಖೇಣಿ ನನಗೆ ಒಳ್ಳೆಯ ಸ್ನೇಹಿತರು, ಅವರ ಪರ ಬೀದರ್‌ ಕ್ಷೇತ್ರದಲ್ಲಿ ರೋಡ್ ಶೋ ಮಾಡಲಿದ್ದೇನೆ. ಅಪ್ಪಾಜಿಯವರ ಕಾಲದಿಂದಲೂ ಸಿದ್ದರಾಮಯ್ಯನವರು ನಮ್ಮ ಕುಟುಂಬಕ್ಕೆ ಬೇಕಾದವರು, ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ಮೈಸೂರು ಪ್ರಾಂತ್ಯದವರು, ಹೀಗಾಗಿ ಮೇ 4ರಂದು ಅವರ ಪರ ವರುಣಾ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದೇನೆ. ಜನರ ಸ್ಪಂದನೆ ಕೂಡ ಚೆನ್ನಾಗಿದೆ” ಎಂದಿದ್ದಾರೆ.

Advertisements

ನಟ ಸುದೀಪ್‌ ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಶಿವಣ್ಣ, “ಪ್ರತಿಯೊಬ್ಬರಿಗೂ ಅವರದ್ದೇ ಆದ ಸಿದ್ಧಾಂತಗಳಿರುತ್ತವೆ. ನಾನು ಯಾರನ್ನು ವಿರೋಧಿಸಿ ಮಾತನಾಡುವವನಲ್ಲ. ನನಗೆ ಬೇಕಾದವರನ್ನು ಬೆಂಬಲಿಸುತ್ತಿದ್ದೇನೆ ಅಷ್ಟೇ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣಾ ಪ್ರಚಾರ | ಸುದೀಪ್‌ ನೋಡಲು ಮುಗಿಬಿದ್ದ ಅಭಿಮಾನಿಗಳಿಗೆ ಲಾಠಿ ಏಟು

ಈ ಬಾರಿಯ ಚುನಾವಣೆಯಲ್ಲಿ ನಟ ಸುದೀಪ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯ ಹಲವು ಅಭ್ಯರ್ಥಿಗಳ ಪ್ರಚಾರ ಮಾಡುತ್ತಿದ್ದು, ಮತ್ತೊಬ್ಬ ಸ್ಟಾರ್‌ ನಟ ದರ್ಶನ್‌, ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಇದೀಗ ಶಿವಣ್ಣ ಕೂಡ ಚುನಾವಣಾ ಕಣಕ್ಕೆ ಧುಮುಕಿದ್ದು, ಕೈ ಅಭ್ಯರ್ಥಿಗಳ ಬೆಂಬಲಕ್ಕೆ ನಿಂತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X