ಚಾಮುಂಡಿ ಸನ್ನಿಧಿಯಲ್ಲಿ ಪಾದರಕ್ಷೆ ಧರಿಸಿ ಫೋಟೋಗೆ ಪೋಸ್ ನೀಡಿದ ಅಮಿತ್ ಶಾ

Date:

Advertisements
  • ಮೈಸೂರು ಭಾಗದ ಬಿಜೆಪಿ ಪ್ರಚಾರ ಯಾತ್ರೆಗೆ ಬಂದಿದ್ದ ಅಮಿತ್ ಶಾ
  • ಚಾಮುಂಡಿ ಸನ್ನಿಧಾನದಲ್ಲಿ ಶೂ ಧರಿಸಿ ಓಡಾಡಿದ ಕೇಂದ್ರ ಗೃಹ ಸಚಿವ

ಚಾಮುಂಡಿ ಸನ್ನಿಧಿಯಲ್ಲಿನ ಅನಾದಿ ಕಾಲದ ಸಂಪ್ರದಾಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಧಕ್ಕೆ ತಂದಿರುವ ಆರೋಪ ಅವರ ಹೆಗಲೇರಿದೆ.

ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಹೊರಡುವ ವೇಳೆ ದೇವಳದ ಮುಖ್ಯದ್ವಾರದ ಬಳಿ ದೇವಸ್ಥಾನದ ಅರ್ಚಕರು ಹಾಗೂ ಮೈಸೂರಿನ ಜನಪ್ರತಿಗಳ ಜೊತೆ ಅಮಿತ್ ಶಾ ಫೋಟೋ ತೆಗೆಸಿಕೊಂಡಿದ್ದಾರೆ.

ಈ ವೇಳೆ ಅವರು ಶೂ ಧರಿಸಿ ಪೋಟೋಗೆ ಪೋಸು ನೀಡಿರುವುದು, ಚಾಮುಂಡೇಶ್ವರಿಯ ಭಕ್ತರನ್ನು ಕೆರಳಿಸಿದೆ.

Advertisements

ಜೊತೆಯಲ್ಲಿದ್ದ ಸಂಸದರು, ಶಾಸಕರು ಹಾಗೂ ಭದ್ರತಾ ಸಿಬ್ಬಂದಿಗಳೆಲ್ಲರೂ ಬರಿಗಾಲಲ್ಲೇ ದೇವಾಲಯದ ಆವರಣದಲ್ಲಿ ನಿಂತಿರುವಾಗ ಅಮಿತ್ ಶಾ ಮಾತ್ರ ಶೂ ಧರಿಸಿರುವುದು ಈಗ ವಿವಾದದ ಕಿಡಿ ಹೊತ್ತಿಸಿದೆ.

ಹಿಂದೂ ಧರ್ಮದ, ಸನಾನತ ನೀತಿಗಳ ಬಗ್ಗೆ ಮಾತನಾಡುವ ಬಿಜೆಪಿಗರೇ ಈಗ ಹೀಗೆ ನಡೆದುಕೊಂಡರೆ ಹೇಗೆ ಎನ್ನುವ ಪ್ರಶ್ನೆಯನ್ನು ಹಲವರು ಎತ್ತಿದ್ದಾರೆ.ಚಾಮುಂಡಿ

ಅಮಿತ್ ಶಾ ಪ್ರವಾಸ:

ಇಂದು (ಏ 24) ಮೈಸೂರು ಭಾಗದಲ್ಲಿನ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸುವ ಸಲುವಾಗಿ ಅಮಿತ್ ಶಾ ಮೈಸೂರಿಗೆ ಬಂದಿದ್ದರು.

ಈ ಸುದ್ದಿ ಓದಿದ್ದೀರಾ? : ಪ್ರಜಾಕೀಯ ಅಭ್ಯರ್ಥಿಯ ವಿನೂತನ ಪ್ರಯೋಗ | ಮತದಾರರಿಗೆ “ಬಾಂಡ್” ವಾಗ್ದಾನ

ಸಾಂಸ್ಕೃತಿಕ ನಗರಿಗೆ ಬಂದಿಳಿದ ಅವರು, ಅಲ್ಲಿಂದ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಳ ಸಮಿತಿ ಅವರನ್ನು ಗೌರವಿಸಿತ್ತು.

ಬಳಿಕ ಅಲ್ಲಿಂದ ಹೊರ ಹೊರಡುವ ವೇಳೆ ಎಲ್ಲರೊಂದಿಗೆ ನಿಂತು ಅಮಿತ್ ಶಾ ಫೋಟೋಗೆ ಪೋಸ್ ನೀಡಿದ್ದರು. ಈ ವೇಳೆ ಅವರು ಪಾದರಕ್ಷೆ ಧರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X