ಮೈತ್ರಿ ಸರ್ಕಾರ ಉರುಳಿಸಲು ನೆರವಾಗಿದ್ದ ಸಂತೋಷ್‌ಗೆ ಜೆಡಿಎಸ್‌ ಟಿಕೆಟ್?

Date:

  • ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್ ಆರ್ ಸಂತೋಷ್ ಬಿಜೆಪಿ ತೊರೆದು ಜೆಡಿಎಸ್‌ಗೆ ಸೇರ್ಪಡೆ
  • ಐವರು ಜೆಡಿಎಸ್‌ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ ಎಚ್‌ ಡಿ ಕುಮಾರಸ್ವಾಮಿ

ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದಂತೆಯೇ ಜೆಡಿಎಸ್ ಅರಸೀಕೆರೆ ಅಭ್ಯರ್ಥಿಯನ್ನೂ ಬದಲಿಸಲು ಚಿಂತನೆ ನಡೆಸಿದೆ. ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತರಾಗಿದ್ದ ಎನ್ ಆರ್ ಸಂತೋಷ್ ಅರಸೀಕೆರೆಯಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಕೈತಪ್ಪಿದ ಕಾರಣ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ.

“ಜೆಡಿಎಸ್‌ ನಾಯಕ ಹೆಚ್ ಡಿ ರೇವಣ್ಣ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಎನ್ ಆರ್ ಸಂತೋಷ್ ಅವರೊಂದಿಗೆ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದಕ್ಕೂ ಮುನ್ನ ಎನ್ ಆರ್ ಸಂತೋಷ್ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಕರೆ ಮಾಡಿ ಅರಸೀಕೆರೆ ಟಿಕೆಟ್ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ನಡುವೆ ಎನ್ ಆರ್ ಸಂತೋಷ್ ಬೆಂಬಲಿಗರು ಬೆಂಗಳೂರಿನಲ್ಲಿರುವ ದೇವೇಗೌಡ ನಿವಾಸಕ್ಕೆ ತೆರಳಿ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎನ್‌ ಆರ್‌ ಸಂತೋಷ್‌ ಅವರನ್ನು ಜೆಡಿಎಸ್‌ಗೆ ಸೇರಿಸಿಕೊಳ್ಳಲಾಗಿದೆ” ಎಂದು ಜೆಡಿಎಸ್‌ ಮೂಲಗಳಿಂದ ತಿಳಿದುಬಂದಿದೆ.

ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕುರುಬ ಸಮುದಾಯದ ಬಾಣಾವರ ಅಶೋಕ್‌ಗೆ ಟಿಕೆಟ್ ಘೋಷಿಸಲಾಗಿತ್ತು. ಇದೀಗ ಘೋಷಿತ ಅಭ್ಯರ್ಥಿಯಾಗಿರುವ ಅಶೋಕ್​ ಅವರ ಮನವೊಲಿಸಿ ಎನ್‌ ಆರ್‌ ಸಂತೋಷ್​ಗೆ ಟಿಕೆಟ್​ ನೀಡುವ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಹಾಸನ | ಬಿಜೆಪಿ ಅಭ್ಯರ್ಥಿಯ ಬೃಹತ್‌ ರ‍್ಯಾಲಿ; ಖರ್ಚಿನ ಲೆಕ್ಕವಿದೆಯೇ ಎನ್ನುತ್ತಿದ್ದಾರೆ ಸ್ಥಳೀಯರು

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು, ಶನಿವಾರ ಮತ್ತೆ ಐವರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದು, ಚಿತ್ರದುರ್ಗಕ್ಕೆ ವಿಧಾನ ಪರಿಷತ್‌ನ ಮಾಜಿ ಸದಸ್ಯ ರಘು ಆಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮೂಡಬಿದಿರೆಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಭಾರತಿ ಶಂಕರ್, ಬಾಗಲಕೋಟೆ ಕ್ಷೇತ್ರಕ್ಕೆ ದೇವರಾಜ್ ಪಾಟೀಲ್ ಹಾಗೂ ಯಾದಗಿರಿ ಕ್ಷೇತ್ರಕ್ಕೆ ಮಾಜಿ ಸಚಿವ ಎ.ಬಿ ಮಾಲಕರೆಡ್ಡಿ ಅವರು ಜೆಡಿಎಸ್ ಅಭ್ಯರ್ಥಿಗಳು ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಕಟಿಸಿದರು.

ಎನ್ ಆರ್ ಸಂತೋಷ್, ದೇವರಾಜ್ ಪಾಟೀಲ್  ಸೇರ್ಪಡೆ

ಇದೇ ಸಂದರ್ಭದಲ್ಲಿ ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್ ಆರ್ ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ, ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಪಕ್ಷಕ್ಕೆ ಸೇರಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಕೈ ಜಾರಿದ ರಾಜಸ್ಥಾನ- ವಾಡಿಕೆ ತಪ್ಪಿಸದೆ ಪಕ್ಷ ಬದಲಿಸಿದ ಮತದಾರರು

ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ ಹಾಲಿ ಚುನಾವಣೆಯಲ್ಲಿ...

ತೆಲಂಗಾಣ ಫಲಿತಾಂಶ: ಕೆಸಿಆರ್ ಸರ್ವಾಧಿಕಾರಕ್ಕೆ ಏಟು; ಕಾಂಗ್ರೆಸ್ ಗ್ಯಾರಂಟಿಗಳಿಗೆ ಓಟು

2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ...

ರಾಜಸ್ಥಾನ | ಬಿಜೆಪಿ ವಿರುದ್ಧ ಬಂಡಾಯವೆದ್ದ 26 ವರ್ಷದ ಸ್ವತಂತ್ರ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಭಾರಿ...

ರಾಜಸ್ಥಾನ | ಬಿಜೆಪಿ ಮುನ್ನಡೆ ಕಾಯ್ದುಕೊಂಡಂತೆ ಸಿಎಂ ಸ್ಥಾನಕ್ಕೆ ಮೂವರ ಪೈಪೋಟಿ!

ರಾಜಸ್ಥಾನ ರಾಜ್ಯದ 199 ವಿಧಾನಸಭಾ ಕ್ಷೇತ್ರಗಳ ಪೈಕಿ ಮಧ್ಯಾಹ್ನ 12 ಗಂಟೆ...