ಪಕ್ಷೇತರರಾಗಿ ಅಖಂಡ ಕಣಕ್ಕೆ: ಇಂದು ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ನ ಶ್ರೀನಿವಾಸಮೂರ್ತಿ

Date:

Advertisements
  • ನಿನ್ನೆ ರಾಜೀನಾಮೆ ನೀಡಿ ಇಂದು ನಾಮಪತ್ರ ಸಲ್ಲಿಸಿ ಅಖಂಡ
  • ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡ ಪುಲಿಕೇಶಿ ನಗರದ ಹಾಲಿ ಶಾಸಕ

ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದಾರೆ.

ತಮಗೆ ಟಿಕೆಟ್ ನೀಡುವಲ್ಲಿ ಇನ್ನೂ ವಿಳಂಬ ನೀತಿ ಅನುಸರಿಸುತ್ತಿರುವ ಪಕ್ಷದ ಕ್ರಮದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಏಪ್ರಿಲ್ 17ರಂದು ತಮ್ಮ ಬೆಂಬಲಿಗರ ಸಭೆ ನಡೆಸಿದ ಶ್ರೀನಿವಾಸಮೂರ್ತಿ ಅವರ ಸಲಹೆ ಮೇರೆಗೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ.

Advertisements

ಇದಕ್ಕೂ ಮುನ್ನ (ಏಪ್ರಿಲ್ 16ರಂದು) ಶಿರಸಿಗೆ ತೆರಳಿದ್ದ ಅವರು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ರಾಜೀನಾಮೆ ಪತ್ರ ನೀಡಿದ್ದರು. ಇಂದು ಪ್ರೇಜರ್ ಟೌನ್ನಲ್ಲಿರುವ ಸರ್ಕಾರಿ ಕಾಲೇಜಿಗೆ ಕುಟುಂಬ ಸಮೇತರಾಗಿ ಬಂದ ಶ್ರೀನಿವಾಸಮೂರ್ತಿ ನಾಮಪತ್ರ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಮೂರು ಪಟ್ಟಿ ಬಿಡುಗಡೆ ಮಾಡಿದ್ದರೂ ನನಗೆ ಟಿಕೆಟ್ ನೀಡಿಲ್ಲ. ಇದರಿಂದ ಸಾಕಷ್ಟು ನೊಂದಿದ್ದೇನೆ, ಬೇಸತ್ತಿದ್ದೇನೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.

ಇಲ್ಲಿಯವರೆಗೂ ಪಕ್ಷ ನನಗೆ ಟಿಕೆಟ್ ನೀಡಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ. ನನ್ನ ಕ್ಷೇತ್ರದ ಜನರು ದಿನವೂ ನನ್ನನ್ನು ಯಾಕೆ ಟಿಕೆಟ್ ಸಿಕ್ಕಿಲ್ಲ ಎಂದು ಕೇಳುತ್ತಾರೆ.

ನನ್ನ ಕ್ಷೇತ್ರದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು ಎಲ್ಲರೂ ಒಗ್ಗಟ್ಟಾಗಿದ್ದೇವೆ ಹೀಗಿದ್ದರೂ ಇನ್ನೂ ಟಿಕೆಟ್ ಏಕಿಲ್ಲ ಎಂದು ಅಖಂಡ ಪಕ್ಷ ಪ್ರಮುಖರನ್ನು ಪ್ರಶ್ನಿಸಿದರು.

ಹಿರಿಯ ನಾಯಕರು ಕೆಲವರು ನನಗೆ ಟಿಕೆಟ್ ಕೊಡಬಾರದು ಎಂದು ರಾಜಕೀಯ ಮಾಡಿದ್ರು. ನನಗೆ ಅನ್ಯಾಯವಾಗಿದೆ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದರು.

ಇದೇ ವೇಳೆ ಪಕ್ಷಾಂತರದ ಸಾಧ್ಯತೆಯ ಬಗೆಗಿನ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅಖಂಡ ಬೇರೆ ಪಕ್ಷದವರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? :ಕಾರವಾರ | ಬಿಜೆಪಿ ನಾಯಕರು ನನ್ನಿಂದ ಹಣ ಪಡೆದು ಟಿಕೆಟ್ ತಪ್ಪಿಸಿದ್ದಾರೆ : ಗಂಗಾಧರ ಭಟ್ ಕಣಕ್ಕೆ

ಅಖಂಡ

ಅಖಂಡಗೆ ಟಿಕೆಟ್ ಯಾಕಿಲ್ಲ?

ಮೂಲಗಳ ಮಾಹಿತಿ ಪ್ರಕಾರ ಅಖಂಡ ಅವರಿಗೆ ಕ್ಷೇತ್ರದ ಮೇಲೆ ಹಿಂದಿದ್ದ ಹಿಡಿತ ಇಲ್ಲ ಎನ್ನುವುದು ಟಿಕೆಟ್ ತಪ್ಪಲು ಕಾರಣ ಎನ್ನುವುದು ಹಲವರ ಮಾತು.

ಇದರ ಜೊತೆಗೆ 2020ರ ಆಗಸ್ಟ್ 11 ಅಖಂಡ ಶ್ರೀನಿವಾಸಮೂರ್ತಿ ಸೋದರ ಸಂಬಂಧಿ ನವೀನ್ ಫೇಸ್ಬುಕ್‌ನಲ್ಲಿ ಹಾಕಿದ್ದ ಪೋಸ್ಟ್ ಒಂದು ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಠಾಣೆಗಳಿಗೆ ಬೆಂಕಿ ಹಚ್ಚಿ ಗಲೆಭೆ ಸೃಷ್ಟಿಸಲು ಕಾರಣವಾಗಿತ್ತು.

ಇದಾದ ಕೆಲ ದಿನಗಳ ಬಳಿಕ ಪೋಸ್ಟ್ ಘಟನೆಯಿಂದ ನೊಂದಿದ್ದ ಗುಂಪೊಂದು ಕಾವಲ್ ಭೈರಸಂದ್ರದಲ್ಲಿದ್ದ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಟ್ಟು ಭಾರಿ ಹಾನಿ ಮಾಡಿದ್ದರು.

ಈ ಘಟನೆಗಳ ಬಗ್ಗೆ ಚರ್ಚೆ ನಡೆಸಿದ್ದ ಕಾಂಗ್ರೆಸ್ ಪ್ರಮುಖರು ಪಕ್ಷದ ಇಮೇಜ್ ಮತ್ತು ಎದುರಾಳಿಗಳಿಗೆ ಈ ಘಟನೆಯನ್ನು ದಾಳವಾಗಿಸಿಕೊಳ್ಳುವ ಅವಕಾಶ ತಪ್ಪಿಸಲು, ಪಕ್ಷದ ಮುಜುಗರಕ್ಕೆ ಅವಕಾಶ ಮಾಡಿಕೊಡದಿರಲು ಟಿಕೆಟ್ ನಿರಾಕರಿಸಿದ್ದರೆನ್ನಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X