ಚುನಾವಣೆ 2023 | ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಸೂಚನೆ

Date:

Advertisements

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಾಸನ ಜಿಲ್ಲೆಗೆ ಸಾಮಾನ್ಯ ಹಾಗೂ ವೆಚ್ಚ ವೀಕ್ಷಕರನ್ನು ಚುನಾವಣಾ ಆಯೋಗ ನಿಯೋಜಿಸಿದೆ. ಅವರೆಲ್ಲರೂ ಜಿಲ್ಲೆಯಲ್ಲಿ ಉನ್ನತ ಮಟ್ಟದಲ್ಲಿ ಕೆಲಸ ಮಾಡುತ್ತಿರುವ ಹಲವು ಸಮಿತಿಗಳ ಜೊತೆ ಸಭೆ ನಡೆಸಿದ್ದು, ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸುವಂತೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಹಾಸನ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆದಿದೆ. “ಯಾವುದೇ ಲೋಪ ಇಲ್ಲದಂತೆ ಅಧಿಕಾರಿಗಳು ಪರಸ್ಪರ ಸಹಕಾರ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಮತಗಟ್ಟೆ ಹಂತದಲ್ಲಿ ಯಾವುದೇ ಸಮಸ್ಯೆಗಳು ಇಲ್ಲದಿರುವುದನ್ನು ಖಾತರಿ ಪಡಿಸಿಕೊಳ್ಳಬೇಕು” ಎಂದು ಚುನಾವಣಾ ವೀಕ್ಷಕರು ಸೂಚಿಸಿದ್ದಾರೆ.

“ಮತಯಂತ್ರಗಳ ಸಾಗಾಟಕ್ಕೆ ವ್ಯವಸ್ಥಿತ ಯೋಜನೆ ರೂಪಿಸಿ, ತಂಡಗಳು ದಿನದ 24 ಗಂಟೆಯೂ ಕೆಲಸ ಮಾಡಬೇಕಾಗಿದೆ. ಎಲ್ಲ ತಂಡಗಳಿಗೆ ಸೂಕ್ತ ಗುಣಾತ್ಮಕ ತರಬೇತಿ ನೀಡಿ, ಅಗತ್ಯ ಸೌಲಭ್ಯ ಒದಗಿಸಬೇಕು. ಸ್ವೀಪ್ ಚಟುವಟಿಕೆಗಳನ್ನು ಹೆಚ್ಚಿಸಿ, ಮತದಾರರಲ್ಲಿ ಜಾಗೃತಿ ಮೂಡಿಸಬೇಕು” ಎಂದು ತಿಳಿಸಿದರು.

Advertisements

“ಸಾರ್ವಜನಿಕರು, ರಾಜಕೀಯ ಪಕ್ಷಗಳು, ಪ್ರತಿನಿಧಿಗಳು ಹಾಗೂ ಅಭ್ಯರ್ಥಿಗಳು ತಮ್ಮ ಚುನಾವಣಾ ವೀಕ್ಷಕರನ್ನು ಭೇಟಿ ಮಾಡಿ ದೂರು, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ವ್ಯಾಪಕ ಪ್ರಚಾರ ನೀಡಿ, ಏನಾದರೂ ದೂರುಗಳಿದ್ದರೆ ಅವುಗಳನ್ನು ಸಲ್ಲಿಸುವಂತೆ ಜಾಗೃತಿ ಮೂಡಿಸಿ” ಎಂದು ವೀಕ್ಷಕರು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಕಾಂಗ್ರೆಸ್‌ ತೊರೆದ ಮದ್ದೂರು ಗುರುಚರಣ್; ಡಿಕೆ ಸಹೋದರರ ವಿರುದ್ಧ ವಾಗ್ದಾಳಿ

ಸಭೆಯಲ್ಲಿ ಚುನಾವಣಾ ವೀಕ್ಷಕರುಗಳಾದ ಸಂಜೀವ್ ಕುಮಾರ್, ಅಶೋಕ್ ಕುಮಾರ್, ಮನೀತ್ ಗೋಯಲ್, ಬಾಲಾಜಿ ದಿಗಂಬ‌ ಮಂಜುಲೆ, ಪೊಲೀಸ್ ವೀಕ್ಷಕ ಬೀಮಲ್ ಗುಪ್ತ, ಚುನಾವಣಾ ವೆಚ್ಚ ವೀಕ್ಷಕರು ಐಆರ್‌ಎಸ್ ಡಾ.ನಿಖಿಲ್ ಕುಮಾರ್ ಸಿಂಗ್,  ಐಆರ್‌ಎಸ್ ಡಾ. ಕಾರ್ತಿಕೇಯನ್ ಪಾಂಡ್ಯ, ಐಆರ್‌ಎಸ್ ಮದನ್ ಮೋಹನ್ ಮೀನಾ, ಐಆರ್‌ಎಸ್ ಎಂ.ವಿ ಸಿಂಗ್, ಜಿಲ್ಲಾ ನೋಡಲ್‌ ಅಧಿಕಾರಿಯಾದ ಆದಾಯ ತೆರಿಗೆ ಇಲಾಖೆಯ ಎಡಿಐಟಿ ಚರುಮಾಮಿಲ ವಿನಯ್ ಕೆ.ಚೌದರಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X