ಬೆಂಗಳೂರು | ಮಾರ್ಚ್‌ 30ರಿಂದ ಮೆಟ್ರೋ ನಿಲ್ದಾಣಗಳಲ್ಲಿ ʼಎನ್‌ಸಿಎಂಸಿʼ ಕಾರ್ಡ್‌ ಲಭ್ಯ; ಏನಿದರ ಪ್ರಯೋಜನ?

Date:

  • 2019ರ ಮಾರ್ಚ್ 4ರಂದು ಮೊದಲಬಾರಿಗೆ ಎನ್‌ಸಿಎಂಸಿ ಕಾರ್ಡ್‌ ಬಿಡುಗಡೆ
  • ಕಾರ್ಡ್ ಬಳಸಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪಾವತಿ ಕೂಡ ಮಾಡಬಹುದು

ಮಾರ್ಚ್‌ 30ರಿಂದ ಬೆಂಗಳೂರಿನ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ನ್ಯಾಷನಲ್‌ ಕಾಮನ್‌ ಮೊಬಲಿಟಿ ಕಾರ್ಡ್‌ (ಎನ್‌ಸಿಎಂಸಿ) ಅನ್ನು ಮೆಟ್ರೋ ಪ್ರಯಾಣಿಕರು ಪಡೆಯಬಹುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.

ಏನಿದು ಎನ್‌ಸಿಎಂಸಿ ಕಾರ್ಡ್‌?

ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಒಂದು ಇಂಟರ್ ಆಪರೇಟಿವ್ ಕಾರ್ಡ್ ಆಗಿದ್ದು, ಇದನ್ನು 2019ರ ಮಾರ್ಚ್ 4ರಂದು ಮೊದಲಬಾರಿಗೆ ಬಿಡುಗಡೆ ಮಾಡಲಾಗಿದೆ. ಇದನ್ನು ಸಾರಿಗೆ ಕಾರ್ಡ್ ರೂಪದಲ್ಲಿ ಅಭಿವೃದ್ಧಿಗೊಳಿಸಲಾಗಿದೆ. ಮುಂಬರುವ ದಿನಗಳಲ್ಲಿ ಈ ಕಾರ್ಡ್ ಅನ್ನು ಬಳಸಿ ಪ್ರಯಾಣಿಕರು ಯಾವುದೇ ಸಾರಿಗೆ ಮೂಲಕ ಪ್ರಯಾಣ ಬೆಳೆಸಬಹುದು. ಈ ಕಾರ್ಡ್ ಅನ್ನು ಬಳಸಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪಾವತಿ ಕೂಡ ಮಾಡಬಹುದು.

ದಿಲ್ಲಿ ಮೆಟ್ರೋ ವಿಮಾನ ನಿಲ್ದಾಣ ಮಾರ್ಗದಲ್ಲಿ 2020ರ ಡಿಸೆಂಬರ್‌ನಲ್ಲಿ ಮೊಬಿಲಿಟಿ ಕಾರ್ಡ್‌ ಬಳಕೆಗೆ ಚಾಲನೆ ನೀಡಲಾಗಿದೆ. ಎನ್‌ಸಿಎಂಸಿ ಕಾರ್ಡ್‌ ಅನ್ನು ಕೇವಲ ನಮ್ಮ ಮೆಟ್ರೋ ಮಾತ್ರವಲ್ಲದೆ ದೇಶದಲ್ಲಿರುವ ಇನ್ಯಾವುದೇ ರಾಜ್ಯದ ಮೆಟ್ರೋದಲ್ಲಿಯೂ ಬೇಕಾದರೂ ಬಳಸಬಹುದಾಗಿದೆ. ಈ ಕಾರ್ಡ್‌ನ ಸಹಾಯದಿಂದಾಗಿ ಜನರು ಯಾವುದೇ ಸಾರ್ವಜನಿಕ ಸಾರಿಗೆ ಸೇರಿದಂತೆ ಇತರೆ ಸೇವೆಗಳಿಗೆ ಪಾವತಿ ಮಾಡಲು ಸುಲಭವಾಗಿದೆ. ಬಸ್‌, ಪಾರ್ಕಿಂಗ್‌, ಎಲ್ಲ ಕಡೆಯ ಮೆಟ್ರೋ ಸಂಪರ್ಕ, ರೀಟೇಲ್‌ ಶಾಪಿಂಗ್‌ಗಳಲ್ಲಿ ಈ ಒಂದೇ ಕಾರ್ಡ್‌ ಮೂಲಕ ವ್ಯವಹರಿಸಬಹುದಾಗಿದೆ.

ಶನಿವಾರ ಎನ್‌ಸಿಎಂಸಿ ಕಾರ್ಡ್‌ ಪರಿಚಯ ಆಗಿದೆ. ಮಾ.30ರಿಂದ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಎನ್‌ಸಿಎಂಸಿ ಕಾರ್ಡನ್ನು ಖರೀದಿಸಬಹುದು ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್‌ ಪರ್ವೇಜ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆ. ಗ್ರಾಮಾಂತರ | ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟನೆ

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಕನಸಿದ ಪಶು ಆಸ್ಪತ್ರೆ ನೆಲಮಂಗಲದ...

ಜೀವ ಪ್ರಮಾಣ ಪತ್ರ ಸಲ್ಲಿಸಲು ಪಿಂಚಣಿದಾರರಿಗೆ ಎರಡೇ ದಿನ ಬಾಕಿ

ಕೇಂದ್ರ ಸರ್ಕಾರ ಹಾಗೂ ನಾನಾ ರಾಜ್ಯಗಳಲ್ಲಿ ಉದ್ಯೋಗ ಮಾಡಿ ನಿವೃತ್ತಿ ಹೊಂದಿ...

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಮಕ್ಕಳಿಗಿದು ಸುರಕ್ಷಿತ ತಾಣವೇ?

ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೂ ರಾಜ್ಯದ...

ಹೆಣ್ಣುಭ್ರೂಣ ಹತ್ಯೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ; ಹಲವರ ಕೈವಾಡವಿರುವ ಶಂಕೆ

ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ...