ದಂಪತಿಗೆ ಕನ್ನಡ ನಟ ನಾಗಭೂಷಣ್​ ಕಾರು ಡಿಕ್ಕಿ: ಮಹಿಳೆ ಮೃತ್ಯು

Date:

Advertisements
  • ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ ನಡೆದ ಘಟನೆ
  • ರಾತ್ರಿ ವಾಕಿಂಗ್‌ ಮಾಡುತ್ತಿದ್ದ ದಂಪತಿಗಳ ಪೈಕಿ ಪ್ರೇಮಾ ಮೃತ್ಯು ; ನಟ ಪೊಲೀಸ್ ವಶಕ್ಕೆ

ಸ್ಯಾಂಡಲ್‌ವುಡ್‌ ನಟ ನಾಗಭೂಷಣ ಅವರು ಸಂಚರಿಸುತ್ತಿದ್ದ ಕಾರು ದಂಪತಿಗೆ ಡಿಕ್ಕಿಯಾಗಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಸೆ.30ರ ಶನಿವಾರ ರಾತ್ರಿ ದಂಪತಿಯು ನಡೆದುಕೊಂಡು ಹೋಗುವಾಗ ನಾಗಭೂಷಣ ಅವರ ಕಾರು ಡಿಕ್ಕಿಯಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್​ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸು​ ದಾಖಲಿಸಲಾಗಿದ್ದು, ಘಟನೆಗೆ ಕಾರಣನಾಗಿರುವ ಹಿನ್ನೆಲೆಯಲ್ಲಿ ನಟ ನಾಗಭೂಷಣ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

car accident

ಕೃಷ್ಣ (58) ಹಾಗೂ ಅವರ ಪತ್ನಿ ಪ್ರೇಮಾ (48) ಅವರು ರಾತ್ರಿ ವಾಕಿಂಗ್‌ ಮಾಡುವಾಗ ನಟ ನಾಗಭೂಷಣ ಅವರು ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿದೆ. ಮೊದಲು ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ನಂತರ ಫುಟ್‌ಪಾತ್‌ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿದೆ.

Advertisements

ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಕೃಷ್ಣ ಅವರನ್ನು ಬನ್ನೇರುಘಟ್ಟದಲ್ಲಿರುವ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

accident victiom prema

ಈ ನಡುವೆ ನಾಗಭೂಷನ್ ಕಾರು ಚಲಾಯಿಸುವಾಗ ಮದ್ಯ ಸೇವನೆ ಮಾಡಿರುವ ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿದ್ದು, ನಟ ಮದ್ಯ ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ದೂರು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X