ಬೆಂಗಳೂರು | ಆಟೋದಲ್ಲಿ ಪತ್ತೆಯಾದ ದಾಖಲೆ ಇಲ್ಲದ ಒಂದು ಕೋಟಿ ರೂಪಾಯಿ

Date:

Advertisements
  • ಆಟೋದಲ್ಲಿ ಒಂದು ಕೋಟಿ ರೂಪಾಯಿ ಸಾಗಾಟ
  • ದಾಖಲೆ ಇಲ್ಲದೆ ಹಣ ಸಾಗಿತ್ತಿದ್ದವರು ಪೊಲೀಸ್‌ ವಶಕ್ಕೆ

ಬೆಂಗಳೂರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಎಸ್‌ ಜೆ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಈ ಪ್ರಕರಣ ಹಿನ್ನೆಲೆಯಲ್ಲಿ ಇಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಆಟೋರಿಕ್ಷಾದಲ್ಲಿ ಸಾಗುತ್ತಿದ್ದ ಪ್ರವೀಣ್‌ ಹಾಗೂ ಸುರೇಶ್ ಎನ್ನುವವರು ತಮ್ಮ ಬಳಿ ಎರಡು ಬ್ಯಾಗುಗಳನ್ನು ಹೊಂದಿಕೊಂಡಿದ್ದರು. ಹೀಗೆ ಹೋಗುತ್ತಿದ್ದ ಆಟೋ ಏಕಾಏಕಿ ಪೊಲೀಸ್ ಸ್ಟೇಷನ್‌ ಎದುರೇ ಕೆಟ್ಟು ನಿಂತಿತ್ತು.ಒಂದು ಕೋಟಿ ರೂಪಾಯಿ

Advertisements

ಸಾಮಾನ್ಯ ತಪಾಣೆಯಲ್ಲಿದ್ದ ಪೊಲೀಸರು. ಕೆಟ್ಟು ನಿಂತ ಆಟೋ ಬಳಿ ಬಂದು ವಿಚಾರಣೆ ನಡೆಸುವಾಗ ಅಲ್ಲಿದ್ದ ಬ್ಯಾಗ್ ಅವರ ಗಮನ ಸೆಳೆಯಿತು. ಬಳಿಕ ಅದನ್ನು ತೆಗೆಯುವಂತೆ ಸುರೇಶ್‌ ಹಾಗೂ ಪ್ರವೀಣ್‌ ಆವರಿಗೆ ಸೂಚಿಸಲಾಯಿತು.

ಈ ವೇಳೆ ಇಬ್ಬರೂ ಅನುಮಾನಾಸ್ಪದವಾಗಿ ನಡೆದುಕೊಂಡ ಕಾರಣ ಪೊಲೀಸರೇ ಬ್ಯಾಗ್‌ ಪರಿಶೀಲನೆ ನಡೆಸಿದರು. ಈ ವೇಳೆ ಅಪಾರ ಪ್ರಮಾಣದ ನಗದು ಗೋಚರವಾದ ಹಿನ್ನೆಲೆಯಲ್ಲಿ ಇಬ್ಬರನ್ನೂ ವಶಕ್ಕೆ ಪಡೆದ ಆರಕ್ಷಕರು, ಅವರನ್ನು ಠಾಣೆಗೆ ಕರೆದೊಯ್ದರು.

ಈ ಸುದ್ದಿ ಓದಿದ್ದೀರಾ? :ಚುನಾವಣೆ 2023 | ಕೈ ತಪ್ಪಿದ ಬಿಜೆಪಿ ಟಿಕೆಟ್; ಜೆಡಿಎಸ್‌ನತ್ತ ಸೂರ್ಯಕಾಂತ ನಾಗಮಾರಪಳ್ಳಿ?

ಅಲ್ಲಿನ ಪರಿಶೀಲನೆ ವೇಳೆ ಒಂದು ಕೋಟಿ ನಗದು ಪತ್ತೆಯಾಗಿದೆ. ವಿಚಾರಣೆ ವೇಳೆ ನಗದು ಸಂಬಂಧಿ ಯಾವುದೇ ದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಅವರಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X