ಬೆಂಗಳೂರು | ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಶೀಘ್ರದಲ್ಲೇ ಹಳದಿ ಮಾರ್ಗ ಮೆಟ್ರೋ

Date:

Advertisements
  • ಆರ್‌.ವಿ.ರಸ್ತೆ-ಬೊಮ್ಮಸಂದ್ರವರೆಗೆ 18.82ಕಿ.ಮೀ ಉದ್ದ ಮೆಟ್ರೋ ಮಾರ್ಗ
  • ಈ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ₹4,255 ಕೋಟಿ ವೆಚ್ಚ ಮಾಡಲಾಗಿದೆ

ಬೆಂಗಳೂರಿನ ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ ಹಳದಿ ಮಾರ್ಗವು ಮೂರು ತಿಂಗಳಲ್ಲಿ ಸಿದ್ಧವಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಹಳದಿ ಮಾರ್ಗವು ಉತ್ತರ-ದಕ್ಷಿಣ (ನಾಗಸಂದ್ರ-ಸಿಲ್ಕ್ ಇನ್‌ಸ್ಟಿಟ್ಯೂಟ್) ಮತ್ತು ಪೂರ್ವ-ಪಶ್ಚಿಮ (ಬೈಯಪ್ಪನಹಳ್ಳಿ-ಕೆಂಗೇರಿ) ಕಾರಿಡಾರ್‌ಗಳನ್ನು ಒಳಗೊಂಡಿರಲಿದೆ.

ಮೆಟ್ರೋ 2 ನೇ ಹಂತದ ಯೋಜನೆಯಡಿ ಆರ್‌.ವಿ.ರಸ್ತೆ-ಬೊಮ್ಮಸಂದ್ರ ಹಾಗೂ ಗೊಟ್ಟಿಗೆರೆ-ನಾಗವಾರ ಮಾರ್ಗವು (ಗುಲಾಬಿ ಮಾರ್ಗ) ಹಾದು ಹೋಗುವ ಇಂಟರ್‌ಚೇಂಜ್‌ ನಿಲ್ದಾಣವು ಜಯದೇವ ಆಸ್ಪತ್ರೆ ಬಳಿ ನಿರ್ಮಾಣವಾಗುತ್ತಿದೆ.

Advertisements

“ಹಳದಿ ಮಾರ್ಗದಲ್ಲಿ ಹೆಚ್ಚಿನ ಹಳಿಗಳ ಜೋಡಣೆ ಕಾರ್ಯ ಪೂರ್ಣಗೊಂಡಿದೆ. ಆದರೆ, ನಿಲ್ದಾಣಗಳು ಬಳಕೆಗೆ ಸಿದ್ಧವಾಗಬೇಕಾಗಿದೆ. ಎಲ್ಲವೂ ಸರಿಯಾಗಿ ನಡೆದರೆ, ಜುಲೈ ಅಂತ್ಯದಲ್ಲಿ ಅಥವಾ ಆಗಸ್ಟ್ ಆರಂಭದಲ್ಲಿ ಮಾರ್ಗವನ್ನು ತೆರೆಯಲಾಗುವುದು” ಎಂದು ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು ಹೇಳಿದರು.

ಈ ಮಾರ್ಗವು ನಗರದ ಮೊದಲ ಡಬಲ್ ಡೆಕ್ಕರ್ ಮೇಲ್ಸೇತುವೆಯನ್ನು ಒಳಗೊಂಡಿರುತ್ತದೆ. ಅಲ್ಲಿ ಎರಡು ಹಂತದ ಸೇತುವೆಯು ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ 3.3 ಕಿಮೀವರೆಗೆ ಚಲಿಸುತ್ತದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾತ್ರಿ ವೇಳೆ ಹಾಡಿನ ಶಬ್ದ ಕಡಿಮೆ ಮಾಡಿ ಎಂದ ನೆರೆಯವರು; ಥಳಿತಕ್ಕೊಳಗಾದ ವ್ಯಕ್ತಿ ಸಾವು

ಆರ್‌.ವಿ.ರಸ್ತೆಯಿಂದ ಬೊಮ್ಮಸಂದ್ರವರೆಗೆ 18.82 ಕಿ.ಮೀ ಉದ್ದದ ಮೆಟ್ರೋ ಮಾರ್ಗ ನಿರ್ಮಿಸಲಾಗಿದೆ. ಇದಕ್ಕೆ ಹಳದಿ ಬಣ್ಣದ ಮಾರ್ಗವೆಂದು ಹೆಸರಿಡಲಾಗಿದೆ. ಈ ಮಾರ್ಗ ನಿರ್ಮಾಣಕ್ಕೆ ₹4,255 ಕೋಟಿ ವೆಚ್ಚ ಮಾಡಲಾಗಿದೆ.

ಆರ್‌.ವಿ.ರಸ್ತೆ, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್‌, ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲುಗೇಟ್‌, ಸಿಂಗಸಂದ್ರ, ಹೊಸ ರಸ್ತೆ, ಬೆರಟೇನ ಅಗ್ರಹಾರ, ಎಲೆಕ್ಟ್ರಾನಿಕ್‌ ಸಿಟಿ, ಇನ್ಫೋಸಿಸ್‌ ಫೌಂಡೇಶನ್‌ ಕೋನಪ್ಪನ ಅಗ್ರಹಾರ, ಹುಸ್ಕೂರು ರಸ್ತೆ, ಹೆಬ್ಬಗೋಡಿ ಮತ್ತು ಬೊಮ್ಮಸಂದ್ರದಲ್ಲಿ ಒಟ್ಟು 16 ನಿಲ್ದಾಣಗಳು ಇರಲಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X