ಬೇಸಿಗೆಗೆ ಮತ್ತಷ್ಟು ಹುಳಿಯಾದ ನಿಂಬೆಹಣ್ಣು

Date:

Advertisements
  • ₹4 ರಿಂದ ₹5 ದರ ಇದ್ದ ನಿಂಬೆಹಣ್ಣು ಬೆಲೆ ಇದೀಗ ₹10
  • ಸಣ್ಣ ಗಾತ್ರದ ನಿಂಬೆ ಹಣ್ಣು ಪ್ರತಿ ಕಾಯಿಗೆ ₹5-6

ಚಳಿಯ ಕೊರೆ ಮುಗಿದು, ಬೇಸಿಗೆಯ ಬಿಸಿ ಏರುತ್ತಿದೆ. ಮಾರ್ಚ್‌ ತಿಂಗಳಿನಲ್ಲಿಯೇ ಬೇಸಿಗೆ ಸುಡುಬಿಸಿಲಿಗೆ ಜನರಿಗೆ ಸಾಕಪ್ಪ ಎನಿಸುವಂತೆ ಮಾಡಿದೆ. ಇನ್ನು ಏಪ್ರಿಲ್-ಮೇ ತಿಂಗಳಲ್ಲಿ ಬಿಸಿಲಿನ ಬೇಗೆ ಮತ್ತಷ್ಟು ಹೆಚ್ಚಾಗಲಿದೆ. ಜನರು ಕುಳಿತಲ್ಲಿಯೇ ದಣಿಯುವಂತಹ ವಾತಾವರಣ ಆವರಿಸಿದೆ. ದಣಿವು ನೀಗಿಸಿಕೊಳ್ಳಲು ತುಂಪು ಪಾನೀಯ, ಶರಬತ್‌ನ ಮೊರೆಹೋಗುತ್ತಿದ್ದಾರೆ. ಆದರೆ, ಶರಬತ್ ಮಾಡುವುದು ಬೇಸಿಗೆಗಿಂತಲೂ ಹೆಚ್ಚು ಕೈಸುಡುತ್ತಿದೆ. ₹4 ರಿಂದ ₹5 ದರ ಇದ್ದ ನಿಂಬೆಹಣ್ಣು ಬೆಲೆ ಇದೀಗ ₹10 ಆಗಿದೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಕರ್ನಾಟಕ ನಿಂಬೆ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಸಂತೋಷ ಸಪ್ಪಂಡಿ, “ನಗರದಾದ್ಯಂತ ಏರುತ್ತಿರುವ ತಾಪಮಾನವು ಬೆಳೆಗಳ ಮೇಲೆ ಪರಿಣಾಮ ಬೀರಿದೆ. ಮಳೆಗಾಲ ಮತ್ತು ಚಳಿಗಾಲದಲ್ಲಿ ನಿಂಬೆಹಣ್ಣು ಇಳುವರಿ ಚೆನ್ನಾಗಿರುತ್ತದೆ. ಆದರೆ, ಬೇಸಿಗೆ ಕಾಲದಲ್ಲಿ ನಿಂಬೆ ಹಣ್ಣಿನ ಇಳುವರಿ ತುಂಬಾ ಕಡಿಮೆಯಿರುತ್ತದೆ. ಈ ಅವಧಿಯಲ್ಲಿ ನಿಂಬೆ ಹಣ್ಣಿಗೆ ಬೇಡಿಕೆ ಜಾಸ್ತಿ ಇರುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಾರ್ಚ್‌ 31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

Advertisements

“ಸಾಮಾನ್ಯವಾಗಿ ಬೇಸಿಗೆಯಲ್ಲಿ ನಿಂಬೆಹಣ್ಣು ದುಬಾರಿಯಾಗಿರುತ್ತದೆ. ಈ ವರ್ಷ ಸಾಮಾನ್ಯಕ್ಕಿಂತ ಮುಂಚಿತವಾಗಿಯೇ ಫಸಲು ಬಂದಿದೆ. ಸಾಮಾನ್ಯವಾಗಿ ಏಪ್ರಿಲ್ ಮಧ್ಯದಲ್ಲಿ ಹಣ್ಣಿನ ಬೆಲೆಗಳು ಹೆಚ್ಚಾಗುತ್ತವೆ. ಆದರೆ, ಈ ಬಾರಿ ತಾಪಮಾನ ಏರಿಕೆಯಿಂದಾಗಿ ಮಾರ್ಚ್ ಮಧ್ಯದಿಂದಲೇ ಏರಿಕೆಯಾಗಿದೆ. ಸೋಮವಾರ ಸಗಟು ದರದಲ್ಲಿ 40 ಕೆಜಿ ನಿಂಬೆಹಣ್ಣಿನ ಪ್ರತಿ ಚೀಲಕ್ಕೆ ₹3,700 ಮುಂದಿನ ದಿನಗಳಲ್ಲಿ ಪ್ರತಿ ಚೀಲಕ್ಕೆ ₹4,000 ಏರಿಕೆ ಕಾಣಬಹುದು” ಎಂದು ಸಂತೋಷ್ ಹೇಳಿದರು.

ಸಣ್ಣ ಗಾತ್ರದ ನಿಂಬೆ ಹಣ್ಣು ಪ್ರತಿ ಕಾಯಿಗೆ ₹5-6 ಮಾರಾಟವಾಗುತ್ತಿದೆ. ಮಧ್ಯಮ ಗಾತ್ರದ ನಿಂಬೆಹಣ್ಣು ಅಂಗಡಿಗಳಲ್ಲಿ ₹8-10ಗೆ ಮಾರಾಟವಾಗುತ್ತಿದೆ. ವಿಜಯಪುರ ಹಾಗೂ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ನಿಂಬೆಹಣ್ಣುಗಳು ಆಮದು ಆಗುತ್ತಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X