ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಟೋಲ್​ ದರ ಹೆಚ್ಚಳ ಆದೇಶ ಹಿಂಪಡೆದ ಎನ್‌ಎಚ್‌ಎಐ

Date:

Advertisements
  • ಶೇ. 22ರಷ್ಟು ಟೋಲ್ ದರ ಹೆಚ್ಚಿಸಿ ಆದೇಶಿಸಿತ್ತು
  • ಮಧ್ಯರಾತ್ರಿಯಿಂದಲೇ ದೇವನಹಳ್ಳಿ ಟೋಲ್‌ ದರ ಹೆಚ್ಚಳ

ಏಪ್ರಿಲ್ 1ರಿಂದ ಜಾರಿಯಾಗುವಂತೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಟೋಲ್​ ದರವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಶೇ. 22ರಷ್ಟು ಹೆಚ್ಚಿಸಿ ಆದೇಶಿಸಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆ, ಪ್ರಾಧಿಕಾರ ಶನಿವಾರ ಆದೇಶವನ್ನು ಹಿಂಪಡೆದಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಆರಂಭವಾದ 17 ದಿನಗಳಲ್ಲೇ ಪ್ರಾಧಿಕಾರ ಮತ್ತೆ ಶೇ. 22ರಷ್ಟು ಟೋಲ್ ದರವನ್ನು ಹೆಚ್ಚಳ ಮಾಡಿತ್ತು. ಇದಕ್ಕೆ ಕೋಪಗೊಂಡ ವಾಹನ ಸವಾರರು ಆಕ್ರೋಶ ಹೊರಹಾಕಿದ್ದರು.

ಮಧ್ಯರಾತ್ರಿಯಿಂದಲೇ ದೇವನಹಳ್ಳಿ ಟೋಲ್‌ ದರ ಹೆಚ್ಚಳ

ಬೆಂಗಳೂರಿನಿಂದ ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗದ ಟೋಲ್​ ದರ ಏರಿಕೆಯಾಗಿದೆ. ಏರ್​​ಪೋರ್ಟ್​​ ರಸ್ತೆಯ ನಿರ್ವಹಣೆ ಹೊತ್ತಿರುವ ಅಥಾಂಗ್ ಟೋಲ್ ವೇ ಪ್ರೈವೈಟ್ ಲಿಮಿಟೆಡ್‌ ಮಧ್ಯರಾತ್ರಿಯಿಂದಲೇ ಟೋಲ್ ದರವನ್ನು ಹೆಚ್ಚಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಏ. 1ರವರೆಗೆ ಮೈಸೂರು ರಸ್ತೆ ಮೂಲಕ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್‌

ಕಾರು, ಜೀಪು, ವ್ಯಾನ್ ಲಘು ‌ಮೋಟಾರು ವಾಹನ

ಏಕಮುಖ ಸಂಚಾರಕ್ಕೆ ₹110 ಹಾಗೂ 24 ಗಂಟೆಯೊಳಗೆ ಹಿಂತಿರುಗುವ ಶುಲ್ಕ ₹170 ನಿಗದಿ ಮಾಡಲಾಗಿದೆ. ಮಾಸಿಕ ಪಾಸ್ ಶುಲ್ಕ ₹3,755ಕ್ಕೆ ಏರಿಕೆಯಾಗಿದೆ.

ಈ ಹಿಂದೆ ಏಕಮುಖ ಸಂಚಾರಕ್ಕೆ ₹105 ಹಾಗೂ ದ್ವಿಮುಖ ಸಂಚಾರ ₹165 ಇತ್ತು. ಮಾಸಿಕ ಪಾಸ್ ಶುಲ್ಕ ₹3,555 ಇತ್ತು.

ಲಘು ವಾಣಿಜ್ಯ ವಾಹನ ಲಘು ಸರಕು ವಾಹನ ಮಿನಿ ಬಸ್

ಏಕಮುಖ ಸಂಚಾರಕ್ಕೆ ₹165 ರಿಂದ ₹170 ಏರಿಕೆ ಕಂಡಿದೆ. ಹಿಂತಿರುಗುವ ಶುಲ್ಕ ₹245 ರಿಂದ ₹260 ಏರಿಕೆಯಾಗಿದೆ. ಮಾಸಿಕ ಪಾಸ್ ₹5,465 ಯಿಂದ ₹5,745 ಗೆ ಏರಿಸಲಾಗಿದೆ.

ಟ್ರಕ್ ಬಸ್ 2 ಆಕ್ಸೆಲ್ ವಾಹನ

ಏಕಮುಖ ಸಂಚಾರಕ್ಕೆ ₹330 ರಿಂದ ₹345 ಗೆ ಏರಿಕೆ. ದ್ವಿಮುಖ ಸಂಚಾರಕ್ಕೆ ₹495 ನಿಂದ ₹520 ಏರಿಕೆ ಮಾಡಲಾಗಿದೆ. ₹10,990 ಇದ್ದ ಮಾಸಿಕ ಪಾಸ್ ₹11,550 ಆಗಿದೆ.

ಭಾರೀ ವಾಹನಗಳು 03 ರಿಂದ 06 ಆಕ್ಸೆಲ್ ವಾಹನ

ಏಕಮುಖ ಸಂಚಾರಕ್ಕೆ ₹500 ರಿಂದ ₹525 ದ್ವಿಮುಖ ಸಂಚಾರ ₹750 ನಿಂದ ₹790 ಆಗಿದೆ. ₹16,680 ಇದ್ದ ಮಾಸಿಕ ಪಾಸ್ ₹17,525 ಹೆಚ್ಚಿಗೆಯಾಗಿದೆ.

ಭಾರೀ ಗಾತ್ರದ 7 ಆಕ್ಸೆಲ್ ಹಾಗೂ ಅದಕ್ಕಿಂತ ಹೆಚ್ಚು ಆಕ್ಸೆಲ್ ವಾಹನ

ಏಕಮುಖ ಸಂಚಾರಕ್ಕೆ ₹650 ರಿಂದ ₹685 ಗೆ ಏರಿಕೆ. ದ್ವಿಮುಖ ₹980 ನಿಂದ ₹1025 ಗೆ ಏರಿಕೆ. ₹21,730 ರೂ. ಇದ್ದ ಮಾಸಿಕ ಪಾಸ್ ₹22,830ಗೆ ಹೆಚ್ಚಿಸಲಾಗಿದೆ.

ಸ್ಥಳೀಯ ಮಾಸಿಕ ಪಾಸ್ ₹315 ರಿಂದ ₹330 ಏರಿಕೆಯಾಗಿದ್ದು ಇದು ಕಾರುಗಳಿಗೆ ಮಾತ್ರ ಅನ್ವಯವಾಗುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X