ಬಳ್ಳಾರಿ | ಕಂಪ್ಲಿಯಲ್ಲಿ ಸ್ನಾತಕೋತ್ತರ ಪದವಿ ಕಾಲೇಜು ತೆರೆಯುವಂತೆ ಮನವಿ

Date:

Advertisements
  • ಭಾರತೀಯ ದಲಿತ ಪ್ಯಾಂಥರ್‌ ಮನವಿ
  • ಪ್ರಸ್ತುತ ವರ್ಷದಿಂದಲೇ ಆರಂಭಿಸುವಂತೆ ಆಗ್ರಹ

ಕಂಪ್ಲಿ ನಗರದಲ್ಲಿ ಸ್ನಾತಕೋತ್ತರ ಪದವಿ ಕಾಲೇಜು ತೆರೆಯುವಂತೆ ಒತ್ತಾಯಿಸಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರರ ಮೂಲಕ ವಿಎಸ್‌ಕೆ ವಿಶ್ವವಿದ್ಯಾಲಯದ ಉಪ ಕುಲಪತಿ ಮತ್ತು ಬಳ್ಳಾರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಮನವಿ ಸಲ್ಲಸಿ ಮಾತಿಡದ ಸಂಘಟನೆಯ ತಾಲೂಕು ಅಧ್ಯಕ್ಷ ಎನ್ ಸೈಯ್ಯದ್ ವಾರೀಶ್, “ಕಂಪ್ಲಿ ನಗರದಲ್ಲಿ ಸರ್ಕಾರಿ ಪದವಿ ಕಾಲೇಜು ಹಾಗೂ ಖಾಸಗಿ ಪದವಿ ಕಾಲೇಜುಗಳಿದ್ದು ಪ್ರತಿ ವರ್ಷ ತಾಲೂಕು ವ್ಯಾಪ್ತಿಯಿಂದ 150 ರಿಂದ 200 ಜನ ವಿಧ್ಯಾರ್ಥಿಗಳು ಪದವಿ ನಂತರ ಉನ್ನತ ಶಿಕ್ಷಣ ಪಡೆಯಲು ಬಳ್ಳಾರಿ ಮತ್ತು ಕೊಪ್ಪಳ, ಗಂಗಾವತಿಗೆ ತೆರಳುತ್ತಾರೆ” ಎಂದು ಮಾಹಿತಿ ನೀಡಿದರು.

“ಈ ಎಲ್ಲ ವಿದ್ಯಾರ್ಥಿಗಳು ದೂರದ ಬಳ್ಳಾರಿ, ಕೊಪ್ಪಳ, ಗಂಗಾವತಿಗೆ ತೆರಳಲು ಕಂಪ್ಲಿ ತಾಲೂಕಿನ ತಮ್ಮ ಸ್ವಗ್ರಾಮಗಳಿಂದ ಕಂಪ್ಲಿ ನಗರಕ್ಕೆ ಬಂದು ನಂತರ ಕಂಪ್ಲಿಯಿಂದ 52 ಕಿಮೀ ದೂರದ ಬಳ್ಳಾರಿಗೆ, 54 ಕಿಮೀ ದೂರದ ಕೊಪ್ಪಳಕ್ಕೆ ಹಾಗೂ 15 ಕಿ.ಮೀ ದೂರದ ಗಂಗಾವತಿಗೆ ಹರಸಾಹಸ ಪಟ್ಟು ವಿದ್ಯಾಭ್ಯಾಸ ಮಾಡುತ್ತಿರುವುದು ದುರ್ದೈವ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ವಿಶ್ವ ವಿದ್ಯಾಲಯಗಳ ನಿಯಮದಂತೆ ನಿಗದಿಪಡಿಸಿದ ಸೀಟ್‌ಗಳು ಭರ್ತಿಯಾದ ನಂತರ, ದೂರದ ಹುಬ್ಬಳ್ಳಿ-ಧಾರವಾಡ, ಬೆಂಗಳೂರಿಗೆ ತೆರಳಿ ವಿದ್ಯಾಭ್ಯಾಸ ಮಾಡಬೇಕಾದ ಅನಿವಾರ್ಯತೆ ಸುಮಾರು ವರ್ಷಗಳಿಂದ ನಡೆದುಕೊಂಡು ಬಂದಿರುವುದು ವಿಧ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಆರ್ಥಿಕ ಹೊರೆಯಾಗಿದೆ. ಕೆಲವು ವಿದ್ಯಾರ್ಥಿಗಳು, ಪೋಷಕರು ಆರ್ಥಿಕ ಹೊರೆ ಹೊರಲಾರದೇ ಮಕ್ಕಳನ್ನ ವಿದ್ಯಾಭ್ಯಾಸಕ್ಕೆ ದೂರದೂರಿಗೆ ಕಳುಹಿಸಲು ಇಚ್ಚಿಸದೇ ಹಿಂಜರಿದು ಸ್ಥಗಿತಗೊಳಿಸಿದಂತಹ ಉದಾಹರಣೆಗಳು ಸಾಕಷ್ಟಿವೆ” ಎಂದು ಅಳಲನ್ನು ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ? : ಧಾರವಾಡ | ಈ ಚುನಾವಣೆ ಬಿಜೆಪಿ ವಿರುದ್ಧದ ಲಿಂಗಾಯತ ಹೋರಾಟ: ಗಂಗಾಧರ ದೊಡವಾಡ

“ಈ ಎಲ್ಲ ಕಾರಣಗಳಿಂದ ನೂತನವಾಗಿ ತಾಲೂಕು ಕೇಂದ್ರವಾಗಿ ಹೊರಹೊಮ್ಮಿರುವ ಕಂಪ್ಲಿಯು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರಲಿದ್ದು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಂಪ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಲವು ಕೊಠಡಿಗಳಿದ್ದು ಅಲ್ಲಿಯೇ ಪ್ರಸ್ತುವ ವರ್ಷದಿಂದ ಸ್ನಾತಕೋತ್ತರ ಪದವಿ ತರಗತಿಗಳನ್ನು ಸ್ಥಾಪಿಸಲು ಅಗತ್ಯ ಪ್ರಕ್ರಿಯೆಗಳನ್ನು ಕೂಡಲೇ ಕೈಗೊಳ್ಳುವಂತೆ” ಮನವಿ ಮಾಡಿಕೊಂಡರು.

ಈ ವೇಳೆ ಪ್ರಧಾನ ಕಾರ್ಯದರ್ಶಿ ರಮೇಶ್ ಕುಂಟೋಜಿ, ಖಜಾಂಚಿ ರೋಷನ್ ಯಾಳ್ಪಿ, ಗೌರವಾಧ್ಯಕ್ಷ ಹೇಮಂತ್ ಕುಮಾರ್ ಡಿ, ಕಾರ್ಯಕಾರಣಿ ಸದಸ್ಯ ಗಂಗಾವತಿ ಕೃಷ್ಣ, ಸುಭಾನ್, ಗುರು ಶಾಸ್ತ್ರೀ, ಪಿ.ಸಿ ಈರಣ್ಣ, ಎಂ. ಪಂಪನ ಗೌಡ, ಪುರುಷೋತ್ತಮ್, ದೇವರಾಜ್ ಹೆಚ್, ಸಿ.ಡಿ.ಅನಿಲ್ ಕುಮಾರ್, ಧನರಾಜ್, ಕೆ. ಶಾಂತ ಕುಮಾರ್, ವೆಂಕಟೇಶ್, ಗಣೇಶ್ ಹಾಗೂ ಇತರರು ಪಾಲ್ಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X