ಬೀದರ್ | ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Date:

Advertisements
  • ಭಾಲ್ಕಿ ಕ್ಷೇತ್ರದ ಹಾಲಿ ಕಾಂಗ್ರೆಸ್‌ ಶಾಸಕ ಈಶ್ವರ್‌ ಖಂಡ್ರೆ ಕಿಡಿ
  • ಬಿಜೆಪಿ ಬೆಂಬಲಿತ ಮೂವರು ಆರೋಪಿಗಳಿಂದ ಹಲ್ಲೆ ಆರೋಪ

ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ ಪರವಾಗಿ ಪ್ರಚಾರ ಮಾಡುತ್ತಿದ್ದ ಕಾರ್ಯಕರ್ತನಿಗೆ ಚಾಕು ಇರಿದು ಗಾಯಗೊಳಿಸಿರುವ ಘಟನೆ ಭಾಲ್ಕಿ ಪಟ್ಟಣದಲ್ಲಿ ಶನಿವಾರ ತಡರಾತ್ರಿ ನಡೆದಿದ್ದು, ಗಾಯಗೊಂಡ ಯುವಕನನ್ನು ಹೈದರಾಬಾದ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಗಣೇಶ ಶಾಲಿವಾನ ಯರಬಾಗೆ (23) ಎಂಬ ಯುವಕ ಭಾಲ್ಕಿ ಪಟ್ಟಣದ ಇಶಾನ್ ಕಾಲೋನಿಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾಗ ಸಂಜೆ 6 ಗಂಟೆ ಸುಮಾರಿಗೆ ಮೂವರು ಯುವಕರು ಗಣೇಶ ಶಾಲಿವಾನ್ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಸಾರ್ವಜನಿಕ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಔರಾದ್ ಮೂಲದ ರಾಬೀನ್ ಸೂರ್ಯಕಾಂತ್, ಭಾಲ್ಕಿ ಪಟ್ಟಣದ ನಿವಾಸಿ ಸಂಗಮೇಶ ಸ್ವಾಮಿ ಮತ್ತು ಖಟಕ್ ಚಿಂಚೋಳಿ ಗ್ರಾಮದ ಸಂಗಮೇಶ ಚನಶೆಟ್ಟಿ ಎಂಬ ಆರೋಪಿಗಳು ಗಣೇಶ್‌ ಮೇಲೆ ಹಲ್ಲೆ ನಡೆಸಿ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾರೆ. ಈ ಸಂಬಂಧ ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? : ಅಗೌರವದಿಂದ ಮಾತನಾಡುವುದನ್ನು ನಿಲ್ಲಿಸಿ; ರೇವಣ್ಣಗೆ ಶಿವಲಿಂಗೇಗೌಡ ಎಚ್ಚರಿಕೆ

ಆಸ್ಪತ್ರೆಗೆ ಶಾಸಕ ಈಶ್ವರ ಖಂಡ್ರೆ ಭೇಟಿ

ವಿಷಯ ತಿಳಿದ ತಕ್ಷಣ ಶಾಸಕ ಈಶ್ವರ ಖಂಡ್ರೆ ಭಾಲ್ಕಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ತಮ್ಮ ಪಕ್ಷದ ಕಾರ್ಯಕರ್ತನ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಸೋಲಿನ ಭಯದಿಂದ ಬಿಜೆಪಿಯವರು ಈ ರೀತಿ ಗುಂಡಾವರ್ತನೆ ಮಾಡುತ್ತಿದ್ದಾರೆ. ಜನರಿಗೆ ಹೆದರಿಸಿ, ಬೆದರಿಸಿ ಭಯದ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಇಲ್ಲಿಯ ಬಿಜೆಪಿಗರು ಮಾಡುತ್ತಿದ್ದಾರೆ” ಎಂದು ಕಿಡಿ ಕಾರಿದರು.

“ಚಾಕು ಇರಿದು ಕಾಂಗ್ರೆಸ್ ಕಾರ್ಯಕರ್ತನನ್ನು ಗಾಯಗೊಳಿಸಿರುವುದು ಅಕ್ಷಮ್ಯ ಅಪರಾಧ. ಕೂಡಲೇ ಪೊಲೀಸ್ ಇಲಾಖೆಯು ತನಿಖೆ ನಡೆಸಿ, ತಪ್ಪಿಸ್ಥರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೇ ಮುಂದೆ ಜರುಗುವ ಎಲ್ಲ ಅನಾಹುತಗಳಿಗೆ ಸರ್ಕಾರ ಮತ್ತು ಅಧಿಕಾರಿಗಳೇ ಜವಾಬ್ದಾರರು” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬೀದರ್‌ | ಮಳೆ ಅಬ್ಬರ : ಮೂರು ದಿನಗಳಲ್ಲಿ 138 ಮನೆಗಳಿಗೆ ಹಾನಿ, 7,775 ಹೆಕ್ಟೇರ್‌ ಬೆಳೆ ನಾಶ!

ಬೀದರ್‌ ಜಿಲ್ಲಾದ್ಯಂತ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರದಿಂದ ಜಿಲ್ಲೆಯಾದ್ಯಂತ 138...

ಅತಿವೃಷ್ಟಿ ಹಾನಿ | ಔರಾದ ಕ್ಷೇತ್ರಕ್ಕೆ ವಿಶೇಷ ಅನುದಾನ ಕೊಡಿ : ಅಧಿವೇಶನದಲ್ಲಿ ಶಾಸಕ ಪ್ರಭು ಚವ್ಹಾಣ ಆಗ್ರಹ

ಬೀದರ್‌ ಜಿಲ್ಲೆಯ ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ...

ಬೀದರ್‌ | ಸೋರುತಿಹದು ನಿಟ್ಟೂರ(ಬಿ) ನಾಡ ಕಚೇರಿ, ಆವರಣದಲ್ಲಿ ಮಳೆ ನೀರು!

ಬೀದರ್‌ ಜಿಲ್ಲಾದ್ಯಂತ ಕಳೆದ ಎರಡ್ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ...

Download Eedina App Android / iOS

X