ಬೀದರ್‌ | ವಾಡೆನ್‌ ಬಾಗ್ ತಾಂಡಾಕ್ಕೆ ದೌಡಾಯಿಸಿದ ಡಾ. ಶಿಂಧೆ, ಅಧಿಕಾರಿಗಳು

Date:

Advertisements
  • ʼಈದಿನ.ಕಾಮ್‌ʼ ವರದಿಗೆ ಸ್ಪಂದಿಸಿದ ಪರಾಜಿತ ಅಭ್ಯರ್ಥಿ ಭೀಮಸೇನರಾವ್ ಶಿಂಧೆ‌ ಹಾಗೂ ಅಧಿಕಾರಿಗಳು
  • ಸರಕಾರಕ್ಕೆ ಪತ್ರ ಬರೆದು ಕೆಕೆಆರ್‌ಡಿಬಿಯಿಂದ ತಾಂಡಕ್ಕೆ ರಸ್ತೆ ನಿರ್ಮಾಣ ಮಾಡಿಸುವ ಭರವಸೆ ನೀಡಿದ ಶಿಂಧೆ

ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾ.ಪಂ. ವ್ಯಾಪ್ತಿಯ ವಾಡೆನ್ ಬಾಗ್ ತಾಂಡಾ (ವಡಗಾಂವ ದೇ ತಾಂಡ)ಕ್ಕೆ ಸೋಮವಾರ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಡಾ. ಭೀಮಸೇನರಾವ ಶಿಂಧೆ ಭೇಟಿ ನೀಡಿ ತಾಂಡ ಜನರ ಸಮಸ್ಯೆ ಆಲಿಸಿದರು. ತಾಂಡದಲ್ಲಿನ ಶಾಲೆ, ಅಂಗನವಾಡಿ, ರಸ್ತೆ ಹಾಗೂ ವಿದ್ಯುತ್ ಸೌಕರ್ಯಗಳ ಕುರಿತು ತಾಂಡದ ನಿವಾಸಿಗಳಿಂದ ಮಾಹಿತಿ ಪಡೆದರು.

ಈ ಕುರಿತು ʼಈದಿನ.ಕಾಮ್‌ʼ ನಲ್ಲಿ ಸೆ.9ರಂದು “ಸ್ವಾತಂತ್ರ್ಯ ಸಿಕ್ಕಿ ವರ್ಷಗಳೇ ಉರುಳಿದರೂ ರಸ್ತೆ ಕಾಣದ ತಾಂಡಾ” ಎಂಬ ಶೀರ್ಷಿಕೆಯಡಿ ವಿಶೇಷ ಬರಹ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿದ ಡಾ. ಭೀಮಸೇನರಾವ ಶಿಂಧೆ ಅ.2 ರಂದು ವಾಡೆನ್‌ ಬಾಗ್‌ ತಾಂಡಾಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ತಾಂಡಾ ನಿವಾಸಿ ಬಾಬುರಾವ ಮಾತನಾಡಿ, “ನಮ್ಮ ತಾಂಡಾಕ್ಕೆ ರಸ್ತೆಯಿಲ್ಲದ ಕಾರಣ ಮಕ್ಕಳು ದಿನನಿತ್ಯ ಶಾಲೆಗೆ ತೆರಳಲು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು.

ಇದಕ್ಕೆ ಸ್ಪಂದಿಸಿದ ಡಾ. ಶಿಂಧೆ “ತಾಂಡಕ್ಕೆ ಹೋಗಲು ರಸ್ತೆಯಿಲ್ಲ ಎಂಬ ಬಗ್ಗೆ ಮಾಹಿತಿ ಬಂದಿದ್ದ ಕಾರಣಕ್ಕೆ ತಾಂಡಕ್ಕೆ ಭೇಟಿ ನೀಡಿದ್ದೇನೆ, ತಾಂಡಾದ ರಸ್ತೆ ಸೇರಿದಂತೆ ಎಲ್ಲ ಸಮಸ್ಯೆಗಳು ವಿಚಾರಿಸಲಾಗುತ್ತಿದೆ. ಈ ಬಗ್ಗೆ ಸರಕಾರಕ್ಕೆ ಪತ್ರ ಬರೆದು ರಸ್ತೆ ನಿರ್ಮಾಣಕ್ಕೆ ಪ್ರಯತ್ನಿಸುವೆ ” ಎಂದು ಭರವಸೆ ನೀಡಿದರು.

Advertisements

“ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಯೊಂದಿಗೆ ಸಾರ್ವಜನಿಕ ಮೂಲ ಸೌಕರ್ಯಗಳ ನಿರ್ಮಾಣಕ್ಕೆ ಸಾಕಷ್ಟು ಅನುದಾನವನ್ನು ನೀಡುತ್ತಿದೆ. ಈಗಾಗಲೇ ಸರಕಾರ ಕೆಕೆಆರ್‌ಡಿ ಗೆ ನಿರೀಕ್ಷೆಗೂ ಮೀರಿ ಹಣ ನೀಡಲಿದೆ. ಈ ಹಣ ತಾಲೂಕಿನ ಅಗತ್ಯವಿರುವ ಕಡೆ ವಿವಿಧ ಕಾಮಗಾರಿ ಮಾಡಬೇಕಿದೆ. ತಾಲೂಕಿನಲ್ಲಿ ಕುಡಿಯುವ ನೀರು, ರಸ್ತೆಗಾಗಿ ಅನುದಾನ ಹರಿದು ಬರುತ್ತಿದೆ. ವಾಡೇನ್ ಬಾಗ್ ತಾಂಡದ ಸಂಪರ್ಕಕ್ಕೆ ರಸ್ತೆ ಸಮಸ್ಯೆ ಕೂಡ ಗಂಭೀರವಾಗಿ ಪರಿಗಣಿಸಲಾಗಿದೆ” ಎಂದರು.

ತಾಂಡಾ ರಸ್ತೆ ನಿರ್ಮಾಣಕ್ಕೆ ನಾವು ಭೂಮಿ ನೀಡಿದ್ದೇವೆ. ರಸ್ತೆ ನಿರ್ಮಾಣದ ಜೊತೆಗೆ ಭೂಮಿಗೆ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ರೈತರಾದ ಗಣಪತಿ, ರಾಮ ಸೋರಳ್ಳಿ, ಶಿವರಾಜ ಶಂಕರ, ರಮೇಶ ಪಾಟೀಲ್ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಸರ್ಕಾರದ ನಡೆಗೆ ಖಂಡನೆ

ಈ ಸಂದರ್ಭದಲ್ಲಿ ಪಂಚಾಯತ್‌ ರಾಜ ಇಲಾಖೆಯ, ಎಇಇ ವೆಂಕಟ ಶಿಂಧೆ, ಜೆಇ ಶಿವಕುಮಾರ ಪುರಾಣಿಕ ಸೇರಿದಂತೆ ತಾಂಡದ ನಿವಾಸಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X