ಬೀದರ್ | ಕೆಲ ಕಚೇರಿಗಳನ್ನು ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಮನವಿ

Date:

Advertisements

ಕಲ್ಯಾಣ ಕರ್ನಾಟಕದ ಜನರಿಗೆ ಅನುಕೂಲವಾಗಲು ಕೆಲ ಕಚೇರಿಗಳನ್ನು ಕಲಬುರಗಿಗೆ ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಅನಂತರೆಡ್ಡಿ ಅವರ ನೇತೃತ್ವದಲ್ಲಿ ಇಂದು (ಡಿ.15) ಬೀದರ್ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ ಅತೀ ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕದ ಜನರ ಶ್ರೇಯೋ ಅಭಿವೃದ್ಧಿಗಾಗಿ 371(ಜೆ) ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಐತಿಹಾಸಿಕ ದಾಖಲೆಯಾಗಿದೆ. ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲವೆಂಬ ಗಾದೆ ಈ ಭಾಗದ ಜನರಿಗೆ ಅನ್ವಯವಾಗುತ್ತದೆ.

ಬೀದರದಿಂದ ಬೆಂಗಳೂರು 800-850 ಕಿ.ಮೀ. ದೂರವಿದು, ಅದೇ ರೀತಿಯಾಗಿ ಬೆಳಗಾವಿ ಸುವರ್ಣ ಸೌಧ ಸಹ 500-550 ಕಿ.ಮೀ. ಅಂತರದಲ್ಲಿದೆ. ಈ ಕಾರಣಕ್ಕಾಗಿ ದೊಡ್ಡ-‌ ದೊಡ್ಡ ರಾಜ್ಯಗಳನ್ನು ಚಿಕ್ಕದಾಗಿ ಮಾಡಿದರೆ ಅಭಿವೃದ್ಧಿಯಾಗುತ್ತದೆ ಎಂಬ ಕೂಗು ಕೇಳಿ ಬರುತ್ತಿದೆ.

Advertisements

ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಎಂಬ ತಾರತಮ್ಯವೇ ಬೇಡ. ಆದ್ದರಿಂದ, ಆಯಾ ಭಾಗದ ಜನರಿಗೆ ಅನುಕೂಲವಾಗುವಂತೆ ಕೆಲ ಕಚೇರಿಗಳು ಬೆಂಗಳೂರಿನಿಂದ ಆಯಾ ಭಾಗಕ್ಕೆ ಸ್ಥಳಾಂತರಿಸಿದರೆ, ಎಲ್ಲಾ ಭಾಗದ ಜನರು ಎಲ್ಲಾ ಕಡೆಯೂ ಸುತ್ತಲು ಮತ್ತು ಆ ಭಾಗದ ಜನಜೀವನ, ಸಂಸ್ಕೃತಿ, ಸಾಹಿತ್ಯ, ಊಟ, ಉಡುಗೆ ಅರಿಯಲು ಸಹ ಸಾಧ್ಯವಾಗುತ್ತದೆ.

ಹೀಗಾಗಿ, ಕಲ್ಯಾಣ ಕರ್ನಾಟಕದ ಕೇಂದ್ರ ಭಾಗವಾದ ಕಲಬುರಗಿಯಲ್ಲಿ ಕೆಲ ಕಚೇರಿಗಳನ್ನು ಸ್ಥಾಪಿಸಿ, ಈ ಭಾಗದ ಜನರು ಬೆಂಗಳೂರಿಗೆ ಹೋಗುವುದನ್ನು ತಪ್ಪಿಸಬೇಕೆಂದು ಮತ್ತು ಸರ್ಕಾರದ ಆಡಳಿತ ಜನರ ಅನುಕೂಲಕ್ಕೆ ಎಂಬ ಪ್ರಜಾಪ್ರಭುತ್ವದ ಆಶಯವನ್ನು ಸರ್ಕಾರ ಈಡೇರಿಸಬೇಕೆಂದು, ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಬಕ್ಕಪ್ಪಾ ನಾಗೋರಾ, ಡಾ. ಸಿ.ಆನಂದರಾವ, ರಮೇಶ್‌ ಬಿರಾದಾರ, ವಿಶ್ವನಾಥ ಉಪ್ಪೆ, ವಿದ್ಯಾಸಾಗರ, ಕೃಷ್ಣರೆಡ್ಡಿ ಸೇರಿದಂತೆ ಇತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X