ಸೋಲುವ ಭೀತಿಯಿಂದ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿದ ಬಿಜೆಪಿ: ಡಿ‌ ಕೆ ಶಿವಕುಮಾರ್

Date:

ಬಿಜೆಪಿ ಅವರಿಗೆ ಮಾಡಲು ಕೆಲಸ ಇಲ್ಲ. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಸಿದ್ದರಾಮಯ್ಯ ಅವರ ಹೆಸರಲ್ಲಿ ನನ್ನ ವಿರುದ್ಧ ನಕಲಿ ಪತ್ರ ಬರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳು ಈ ನಕಲಿ ಪತ್ರದ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದರು.

“ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಯಾಕೆ ಪತ್ರ ಬರೆಯುತ್ತಾರೆ? ಅವರು ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಮೊನ್ನೆಯಷ್ಟೇ ನಾವಿಬ್ಬರೂ ಸೇರಿ ಅಭಿಪ್ರಾಯ ಹಂಚಿಕೊಂಡಿದ್ದೇವೆ. ಈಗಲೂ ನಾವು ಮಾಡುತ್ತಿದ್ದೇವೆ. ಅವರಿಗೆ ಜನರ ಬಳಿ ಪ್ರಚಾರಕ್ಕೆ ಸಮಯ ಸಿಗುತ್ತಿಲ್ಲ. ಇನ್ನು ಈ ರೀತಿ ದೂರಲು ಎಲ್ಲಿ ಸಾಧ್ಯ? ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ” ಎಂದು ಕಿಡಿಕಾರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿಯಲ್ಲಿರುವ ಆಂತರಿಕ ಹುಳುಕು ಮುಚ್ಚಿಕೊಳ್ಳಲು ಈ ರೀತಿ ಪ್ರಯತ್ನ ಮಾಡುತ್ತಿದ್ದಾರೆ. ಮೋದಿ ಅವರು ಬಂದು ಬೀದಿ ಬೀದಿ ಅಲೆದಾಡಿದರು. ಮೋದಿ ಅವರು ಬಂದು ರೋಡ್ ಶೋ ಮಾಡಿದರು. ಅವರ ಜತೆ ಒಬ್ಬ ರಾಜ್ಯ ನಾಯಕನೂ ಇರಲಿಲ್ಲ. ಕನಿಷ್ಠ ಪಕ್ಷ ಆಯಾ ಕ್ಷೇತ್ರದ ಅಭ್ಯರ್ಥಿಯನ್ನಾದರೂ ಜತೆಯಲ್ಲಿ ಇಟ್ಟುಕೊಂಡು ರೋಡ್ ಶೋ ಮಾಡಬಾರದೇ?” ಎಂದರು.

ನೀವು ಸಿದ್ದರಾಮಯ್ಯ ಅವರು ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದೀರಾ ಎಂಬ ಪ್ರಶ್ನೆಗೆ, “ಚಾಮುಂಡಿ ತಾಯಿ ನಾಡಿನ ದೇವತೆ. ಎಲ್ಲರೂ ಸುಭಿಕ್ಷವಾಗಿರಲಿ ಎಂದು ನಾನು ಹಾಗೂ ಸಿದ್ದರಾಮಯ್ಯ ಅವರು ಚಾಮುಂಡಿ ದೇವತೆಯಲ್ಲಿ ಪ್ರಾರ್ಥನೆ ಮಾಡಿ ಆಶೀರ್ವಾದ ಪಡೆಯಲು ಹೋಗುತ್ತಿದ್ದೇವೆ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ...

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ...