ಕಾಂಗ್ರೆಸ್ ಕಟ್ಟಿಹಾಕಲು ಚುನಾವಣಾ ಕಾರ್ಯಕ್ಕೆ ಐಟಿ ಅಧಿಕಾರಿಗಳ ನೇಮಕ: ಸಿದ್ದರಾಮಯ್ಯ ಆರೋಪ

Date:

Advertisements
  • ನಿಷ್ಪಕ್ಷಪಾತ ಚುನಾವಣೆ ಮಾಡುವುದು ಆಯೋಗದ ಜವಾಬ್ದಾರಿ
  • ಬಿಜೆಪಿ ಸರ್ಕಾರ ಅಕ್ರಮ ನಡೆಸುವ ಸಾಧ್ಯತೆ ಹೆಚ್ಚಿದೆ ಸಿದ್ದರಾಮಯ್ಯ

ರಾಜ್ಯ ವಿಧಾನಸಭೆ ಚುನಾವಣಾ ಕಾರ್ಯಕ್ಕೆ ಐಟಿ ಅಧಿಕಾರಿಗಳನ್ನು ಬಿಜೆಪಿ ನಿಯೋಜನೆ ಮಾಡಿದೆ. ಇದು ಚುನಾವಣಾ ಅಕ್ರಮಕ್ಕೆ ಅವರು ಮಾಡಿಕೊಂಡಿರುವ ದಾರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಚುನಾವಣಾ ನೀತಿ ಸಂಹಿತೆ ಘೋಷಣೆ ಬೆನ್ನಲ್ಲೇ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ಖಚಿತ. ಆದರೆ ಇದನ್ನು ತಡೆಯಲು ಬಿಜೆಪಿ ತೆರೆಮರೆಯ ಪ್ರಯತ್ನ ಮಾಡುತ್ತಿದೆ.
ಇದಕ್ಕಾಗಿ ರಾಜ್ಯ ವಿಧಾನಸಭೆ ಚುನಾವಣಾ ಕಾರ್ಯಕ್ಕೆ 300ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ನೇಮಕ ಮಾಡಲಾಗಿದೆ. ಇದು ನಮ್ಮ ಪಕ್ಷವನ್ನು ಕಟ್ಟಿಹಾಕಲು ಮಾಡಿರುವ ತಂತ್ರ ಎಂದು ಕಿಡಿಕಾರಿದರು.

ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮ ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷ ಚುನಾವಣೆಗೆ ಸಿದ್ಧವಾಗಿದೆ. ನಿಷ್ಪಕ್ಷಪಾತ, ಸ್ವತಂತ್ರ ಚುನಾವಣೆ ಮಾಡುವುದು ಆಯೋಗದ ಜವಾಬ್ದಾರಿ. ಬಿಜೆಪಿ ಸಂಪೂರ್ಣ ಚುನಾವಣಾ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿದೆ. ದೇಶದಲ್ಲಿ ಆಪರೇಷನ್ ಕಮಲದಂತಹ ಜನವಿರೋಧಿ ಪದ್ಧತಿಯನ್ನು ಪಕ್ಷ ಬಳಕೆಗೆ ತಂದಿದೆ ಎಂದರು.

Advertisements

ಈಗ ಇದರದ್ದೇ ಭಾಗವಾಗಿ ಈ ಬಾರಿ ಪೊಲೀಸರು ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳನ್ನೇ ಬಳಸಿಕೊಂಡು ಅಕ್ರಮ ನಡೆಸುವ ಸಾಧ್ಯತೆ ಇದೆ ಎಂದು ವಿಪಕ್ಷ ನಾಯಕರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? : ನೀತಿ ಸಂಹಿತೆ ಬಿಸಿ: ಸರ್ಕಾರಿ ಕಾರು ವಾಪಾಸ್ ಕಳುಹಿಸಿದ ಸಿದ್ದರಾಮಯ್ಯ

ನಮ್ಮ ನಿರೀಕ್ಷೆಯಂತೆಯೇ ಇಂದು ಚುನಾವಣೆ ಘೋಷಣೆಯಾಗಿದೆ. ನಾವೂ ಕೂಡ ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ.ಏಪ್ರಿಲ್ 5ಕ್ಕೆ ರಾಹುಲ್ ಗಾಂಧಿ ರಾಜ್ಯಕ್ಕೆ ಬರುತ್ತಿದ್ದಾರೆ.ಅವರ ನೇತೃತ್ವದಲ್ಲಿ ನಾವು ಪಕ್ಷ ಕಟ್ಟುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಕಾಂಗ್ರೆಸ್‌ನವರು ಕೊಟ್ಟ ಭರವಸೆ ಈಡೇರಿಸದಿದ್ದರೇ ಒಂದು ಕ್ಷಣವೂ ಅಧಿಕಾರದಲ್ಲಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು. ನಾನು ರಾಜ್ಯ ಸುತ್ತಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದರು.

ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ ವಿಪಕ್ಷ ನಾಯಕರು,ಸಿಎಂ ಜನರಿಗೆ ಬರೀ ಸುಳ್ಳು ಭರವಸೆಗಳನ್ನು ನೀಡಿಕೊಂಡೇ ಅಧಿಕಾರ ಮುಗಿಸಿದರು. ಬಿಜೆಪಿ ಅವಧಿಯಲ್ಲಿ ಆಗಿದ್ದು ಅಭಿವೃದ್ದಿಯಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X