ಬಾಗೇಪಲ್ಲಿ ಕ್ಷೇತ್ರ | ಸಿಪಿಐಎಂ ಅಭ್ಯರ್ಥಿ ಅನಿಲ್ ಕುಮಾರ್ ಮನೆ ಮೇಲೆ ದಾಳಿ; ಹತ್ಯೆಗೆ ಸಂಚು ಆರೋಪ

Date:

  • ಬಿಜೆಪಿಯ 19 ಮಂದಿ ಗೂಂಡಾ ಕಾರ್ಯಕರ್ತರ ಬಂಧನ
  • ಬಂಧಿತರ ಬ್ಯಾಗ್‌ಗಳಲ್ಲಿ ಚಾಕು, ಮಾರಕಾಸ್ತ್ರಗಳು ಪತ್ತೆ

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಡಾ. ಅನಿಲ್‌ ಕುಮಾರ್‌ ಮನೆಗೆ ನುಗ್ಗಿ ರಾಜಕೀಯ ದುರುದ್ದೇಶದಿಂದ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬಾಗೇಪಲ್ಲಿ ಪೊಲೀಸ್‌ ಠಾಣೆ ಎದುರು ಸಿಪಿಐಎಂ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 19 ಮಂದಿ ಬಿಜೆಪಿ ಗೂಂಡಾ ಕಾರ್ಯಕರ್ತರನ್ನು ಪೋಲಿಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ದಾಳಿ ಮಾಡಲು ಬಂದಿದ್ದವರ ಬ್ಯಾಗುಗಳಲ್ಲಿ ಚಾಕು ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನಿಲ್‌ ಕುಮಾರ್‌ ಅವರು ಚುನಾವಣೆ ಪ್ರಚಾರ ಮುಗಿಸಿಕೊಂಡು ರಾತ್ರಿ ಬರುವಾಗ ಮನೆಗೆ ನುಗ್ಗಿ ದಾಳಿ ಮಾಡಲು ಪ್ರಯತ್ನಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು 19 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಿಪಿಐಎಂ ಪಕ್ಷದ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯದರ್ಶಿ ಎಂ ಪಿ ಮುನಿವೆಂಕಟಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ರಾತ್ರಿ 8 ಗಂಟೆ ಸಮಯದಲ್ಲಿ ನಮ್ಮ ಪಕ್ಷದ ಡಾ. ಅನಿಲ್‌ ಕುಮಾರ್‌ ಮತಯಾಚನೆ ಮುಗಿಸಿಕೊಂಡು ಮನೆಗೆ ಹಿಂತಿರುಗಿದಾಗ ಕ್ರಿಮಿನಲ್‌ ಗ್ಯಾಂಗ್‌ ದಾಳಿ ನಡೆಸಿದೆ.

ಅ ಗುಂಪು ಸಿಪಿಐಎಂ ಅಭ್ಯರ್ಥಿಯನ್ನು ಕೊಲೆ ಮಾಡಲು ಬಂದಿದ್ದೇವೆ ಎಂದು ಹೇಳುವುದು. ಜೊತೆಗೆ ಅಪಹರಣ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದರು.

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಐಎಂ ಪಕ್ಷದ ಅಭ್ಯರ್ಥಿಗೆ ದಿನೇದಿನೆ ಜನರ ಬೆಂಬಲ ಹೆಚ್ಚಾಗುತ್ತಿದೆ. ಇದನ್ನು ಸಹಿಕೊಳ್ಳಲಾಗದೆ ಅವರನ್ನು ಕೊಲೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಆರೋಪಿಗಳ ಬ್ಯಾಗ್‌ಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಹಾಗಾಗಿ ಈ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂದು ಆಗ್ರಹಿಸಿದರು.  

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಣಿಕಂಠ ರಾಠೋಡ ವಿರುದ್ಧ ನಾಳೆ ‘ಡಿಜಿ’ಗೆ ದೂರು; ಪ್ರಿಯಾಂಕ್‌ ಖರ್ಗೆ

ಈ ಗುಂಪಿನ ಹಿಂದೆ ಯಾರಿದ್ದಾರೆ ಎಂಬುದನ್ನು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಬಂಧಿತರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಬೇಕು. ಸಿಪಿಐಎಂ ಪಕ್ಷದ ಅಭ್ಯರ್ಥಿಗೆ ಸೂಕ್ತ ರಕ್ಷಣೆ ನೀಡಬೇಕು. ಜೊಗೆ ಶಾಂತಿಯುತವಾಗಿ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಈ ಕ್ಷೇತ್ರದ ಬಗ್ಗೆ ವಿಶೇಷ ಗಮನ ನೀಗಬೇಕು. ಯಾರೂ ದೌರ್ಜನ್ಯ  ನಡೆಸಲು ಅವಕಾಶ ನೀಡಬಾರದು. ಅಲ್ಲದೆ ಕ್ಷೇತ್ರದಲ್ಲಿ ಈ ರೀತಿ ಅನುಮಾನಸ್ಪದವಾಗಿ ಓಡಾಡುತ್ತಿರುವವರನ್ನು ವಶಕ್ಕೆ ಪಡೆಯಬೇಕು ಎಂದರು.

ಸಿಪಿಐಎಂ ಅಭ್ಯರ್ಥಿ ಮನೆ ಮೇಲೆ ನಡೆಸಿರುವ ದಾಳಿ ಇಡೀ ಕ್ಷೇತ್ರದ ಮತದಾರರಲ್ಲಿ ಭಯ ಹುಟ್ಟುವಂತೆ ಮಾಡಿದೆ. ಜನರ ನಡುವೆ ಮುಕ್ತವಾಗಿ ಬೆರೆತು ಪ್ರಚಾರ ಮಾಡುವ ವೇಳೆ ಪ್ರಾಣಕ್ಕೆ ಅಪತ್ತು ಉಂಟಾಗುವ ಸಾಧ್ಯತೆ ಇದ್ದು, ಚುನಾವಣಾ ಆಯೋಗ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...