ಬಿಜೆಪಿ ಖಜಾನೆ ತುಂಬಿದ್ದು, ದುಡ್ಡು ಕೊಟ್ಟು ಜನರನ್ನು ಕರೆತರುತ್ತದೆ: ಮಲ್ಲಿಕಾರ್ಜುನ ಖರ್ಗೆ

Date:

Advertisements
  • ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಖರ್ಗೆ
  • ಬಿಜೆಪಿ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದ ಕಾಂಗ್ರೆಸ್ ಅಧ್ಯಕ್ಷರು

ಬಿಜೆಪಿ ಖಜಾನೆ ತುಂಬಿದೆ. ದುಡ್ಡು ಕೊಟ್ಟು ಜನರನ್ನು ಕರೆಸಿ ಉದೋ ಉದೋ ಅನ್ನುತ್ತಾರೆ. ಬಿಜೆಪಿಯಿಂದ ಕರ್ನಾಟಕಕ್ಕೆ ಕೊಡುಗೆ ಏನು? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, “ಬಿಜೆಪಿಯಿಂದ ಕರ್ನಾಟಕಕ್ಕೆ ಕೊಡುಗೆ ಏನು? ಕರ್ನಾಟಕಕ್ಕೆ ಏನಾದರೂ ದೊಡ್ಡ ಕಾರ್ಖಾನೆ ಮಾಡಿಕೊಟ್ಟಿದ್ದೀರಾ? ದೊಡ್ಡ ಹೂಡಿಕೆ ಏನಾದರೂ ಮಾಡಿದ್ದೀರಾ?” ಎಂದು ಪ್ರಶ್ನಿಸಿದ್ದಾರೆ.

“ರಾಜ್ಯದಲ್ಲಿನ ಅಭಿವೃದ್ಧಿ ಮೈಸೂರು ಮಹಾರಾಜರ ಕಾಲದಲ್ಲಿ, ಜವಾಹರ್ ಲಾಲ್ ನೆಹರು ಕಾಲದಲ್ಲಿ ಆಗಿರುವುದು” ಎಂದಿದ್ದಾರೆ.

Advertisements

“ಪ್ರತಿಯೊಬ್ಬರಿಗೆ 10 ಕೆಜಿ ಸಣ್ಣ ಅಕ್ಕಿ ಕೊಡುತ್ತೇವೆ, 200 ಯೂನಿಟ್ ಉಚಿತ ವಿದ್ಯುತ್ ಕೊಡುತ್ತೇವೆ, ಉಚಿತ ಬಸ್ ಪಾಸ್ ಕೊಡುತ್ತೇವೆ, ಇದೆಲ್ಲಾ ನಮ್ಮ ಗ್ಯಾರಂಟಿ ಯೋಜನೆ. ನಾವು ಏನು ಹೇಳುತ್ತೇವೋ ಅದನ್ನು ಮಾಡುತ್ತೇವೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಐಟಿ ದಾಳಿ ನಡೆಯಲಿದೆ: ಲಕ್ಷ್ಮಿ ಹೆಬ್ಬಾಳ್ಕರ್

“ಈ ಚುನಾವಣೆ ಮಹತ್ವದ ಚುನಾವಣೆ, ನಾವೆಲ್ಲಾ ಒಗ್ಗಟ್ಟಾಗಿ, ಒಮ್ಮತದಿಂದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ. ನಾವು ಈ ಪ್ರಯತ್ನ ಮಾಡದೇ ಹೋದರೆ ಮುಂದಿನ ಪೀಳಿಗೆಗೆ ಅನ್ಯಾಯವಾಗಲಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

“ಮುಂದಿನ ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗ, ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಒದಗಿಸುವ, ರಾಜ್ಯವನ್ನು ಮತ್ತೆ ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಕೆಲಸ ಮಾಡಲಿದೆ” ಎಂದು ಭರವಸೆ ನೀಡಿದ್ದಾರೆ.

“ಕಾಂಗ್ರೆಸ್ ಏನು ಮಾಡಿದೆ ಎಂದು ಬಿಜೆಪಿಯವರು ಕೇಳುತ್ತಾರೆ, ಆದರೆ ನಾನು ಅವರನ್ನೇ ಕೇಳುತ್ತೇನೆ, ನೀವು ಏನು ಮಾಡಿದ್ದೀರಿ? 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದಿರಿ, ಆ ಉದ್ಯೋಗಗಳು ಎಲ್ಲಿವೆ? ಸರ್ಕಾರಿ ಹುದ್ದೆಗಳನ್ನು ಏಕೆ ಭರ್ತಿ ಮಾಡಿಲ್ಲ? ನಿರುದ್ಯೋಗ ಯಾಕೆ ತಾಂಡವವಾಡುತ್ತಿದೆ?” ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X