ಬೊಮ್ಮಾಯಿಗೆ ಮುಂದಿನ 5 ವರ್ಷಗಳ ಕಾಲ ಮತ್ತೆ ಸಿಎಂ ಅವಕಾಶ: ಜೆ ಪಿ ನಡ್ಡಾ

Date:

  • ಬೊಮ್ಮಾಯಿ ಅವರಿಗೆ ಕಡಿಮೆ ಸಮಯ ಸಿಕ್ಕಿದೆ ಎಂದ ಸುದೀಪ್‌
  • ʼಬೊಮ್ಮಾಯಿ ಸರ್ಕಾರದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆʼ

ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ನಾಮಪತ್ರ ಕೇವಲ ಶಾಸಕ ಸ್ಥಾನಕ್ಕೆ ಮಾತ್ರವಲ್ಲ, ಮುಂದಿನ ಐದು ವರ್ಷಗಳ ಕಾಲ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹೇಳಿದರು.

- Advertisement -

ಬುಧವಾರ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಬೊಮ್ಮಾಯಿ ಅವರು ಬಡವರಿಗೆ 12 ಸಾವಿರ ಮನೆ ನಿರ್ಮಾಣ ಹಾಗೂ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಸುದೀಪ್ ಅವರು ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯ ಮೆಚ್ಚಿದ್ದಾರೆ. ಅಲ್ಲದೇ ಬೊಮ್ಮಾಯಿ ಅವರಿಗೆ ಕಡಿಮೆ ಸಮಯ ಸಿಕ್ಕಿದೆ ಇನ್ನಷ್ಟು ಸಮಯ ಬೇಕಿದೆ ಎಂದೂ ಸುದೀಪ್‌ ಬಯಕೆ ವ್ಯಕ್ತಪಡಿಸಿದ್ದಾರೆ” ಎಂದರು.

ಕಾಂಗ್ರೆಸ್ ಅಂದ್ರೆ ಕಮಿಷನ್, ಕರಪ್ಷನ್

ಕಾಂಗ್ರೆಸ್ ಅಂದ್ರೆ ಕರಪ್ಷನ್, ಕಮಿಷನ್, ಕ್ರಿಮಿನಲೈಸೇಷನ್. ಕಾಂಗ್ರೆಸ್ ನಾಯಕರು ನಾಯಕರಲ್ಲ. ಅವರು ಎಟಿಎಂ ಮಷಿನ್ ನಡೆಸೋ ಜನರು. ಎಟಿಎಂ ಅಂದರೆ ಆಟೋಮ್ಯಾಟಿಕ್ ಟ್ರಾನ್ಸಫರ್ ಆಫ್ ಮನಿ. ಕಾಂಗ್ರೆಸ್ ಅವರನ್ನು ಇಲ್ಲಿ ಕೂರಿಸಿದರೆ ಮೋದಿ ಅವರು ರಾಜ್ಯಕ್ಕೆ ಕಳಿಸಿದ ಹಣವನ್ನು ಇವರು ಡೆಲ್ಲಿ ಕಾಂಗ್ರೆಸ್‌ಗೆ ಕಳುಹಿಸುತ್ತಾರೆ. ಇಂತಹ ಸರ್ಕಾರ ನಿಮಗೆ ಬೇಕಾ? ಮೋದಿ ಕಳಿಸೋ ಹಣ ರಾಜ್ಯದ ಅಭಿವೃದ್ಧಿಗೆ ಸದ್ಬಳಕೆ ಆಗಬೇಕು ಅಂದರೆ ನೀವು ಬಿಜೆಪಿಗೆ ಮತ ಹಾಕಿ” ಎಂದು ಜೆ ಪಿ ನಡ್ಡಾ ಹೇಳಿದರು.

ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಚಲನಚಿತ್ರ ನಟ ಸುದೀಪ್, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಚಾಮರಾಜನಗರದಲ್ಲಿ ವಾಟಾಳ್‌ ಸ್ಪರ್ಧೆ; ಸೋಮಣ್ಣಗೆ ಮತ್ತೊಂದು ಸವಾಲು!

ರಾಜ್ಯದಲ್ಲಿ ಶಾಂತ ವಾತಾವರಣ ಇದೆ

“ಬಿಜೆಪಿ ಸರ್ಕಾರ ಪಿಎಫ್ಐ ಬ್ಯಾನ್ ಮಾಡಿದೆ. ಸಿದ್ದರಾಮಯ್ಯ ಪಿಎಫ್ಐ ಬ್ಯಾನ್ ಮಾಡಿದ್ದನ್ನು ಹಿಂಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ಪಿಎಫ್ಐ ಬ್ಯಾನ್ ಮುಂದುವರೆಯಬೇಕು ಅಂದರೆ ಕಮಲದ ಗುರುತಿಗೆ ಮತ ನೀಡಿ. ಬೊಮ್ಮಾಯಿ ಸರ್ಕಾರದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆ. ಇಂದು ರಾಜ್ಯದಲ್ಲಿನ ಅನೇಕ ಕ್ರಿಮಿನಲ್‌ಗಳು ಜೈಲಿನಲ್ಲಿದ್ದಾರೆ. ರಾಜ್ಯದಲ್ಲಿ ಶಾಂತಿ ಮತ್ತು ವಿಕಾಸಕ್ಕಾಗಿ ಕಮಲಕ್ಕೆ ಮತ ಹಾಕಬೇಕು. ಬೊಮ್ಮಾಯಿ ಅವರನ್ನು ನೀವು ಈಗಾಗಲೇ ಗೆಲ್ಲಿಸಿದ್ದೀರಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...

ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಮದರಸಾಗಳ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...