ಬೊಮ್ಮಾಯಿಗೆ ಮುಂದಿನ 5 ವರ್ಷಗಳ ಕಾಲ ಮತ್ತೆ ಸಿಎಂ ಅವಕಾಶ: ಜೆ ಪಿ ನಡ್ಡಾ

Date:

Advertisements
  • ಬೊಮ್ಮಾಯಿ ಅವರಿಗೆ ಕಡಿಮೆ ಸಮಯ ಸಿಕ್ಕಿದೆ ಎಂದ ಸುದೀಪ್‌
  • ʼಬೊಮ್ಮಾಯಿ ಸರ್ಕಾರದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆʼ

ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ನಾಮಪತ್ರ ಕೇವಲ ಶಾಸಕ ಸ್ಥಾನಕ್ಕೆ ಮಾತ್ರವಲ್ಲ, ಮುಂದಿನ ಐದು ವರ್ಷಗಳ ಕಾಲ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹೇಳಿದರು.

ಬುಧವಾರ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.

“ಬೊಮ್ಮಾಯಿ ಅವರು ಬಡವರಿಗೆ 12 ಸಾವಿರ ಮನೆ ನಿರ್ಮಾಣ ಹಾಗೂ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಸುದೀಪ್ ಅವರು ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯ ಮೆಚ್ಚಿದ್ದಾರೆ. ಅಲ್ಲದೇ ಬೊಮ್ಮಾಯಿ ಅವರಿಗೆ ಕಡಿಮೆ ಸಮಯ ಸಿಕ್ಕಿದೆ ಇನ್ನಷ್ಟು ಸಮಯ ಬೇಕಿದೆ ಎಂದೂ ಸುದೀಪ್‌ ಬಯಕೆ ವ್ಯಕ್ತಪಡಿಸಿದ್ದಾರೆ” ಎಂದರು.

Advertisements

ಕಾಂಗ್ರೆಸ್ ಅಂದ್ರೆ ಕಮಿಷನ್, ಕರಪ್ಷನ್

ಕಾಂಗ್ರೆಸ್ ಅಂದ್ರೆ ಕರಪ್ಷನ್, ಕಮಿಷನ್, ಕ್ರಿಮಿನಲೈಸೇಷನ್. ಕಾಂಗ್ರೆಸ್ ನಾಯಕರು ನಾಯಕರಲ್ಲ. ಅವರು ಎಟಿಎಂ ಮಷಿನ್ ನಡೆಸೋ ಜನರು. ಎಟಿಎಂ ಅಂದರೆ ಆಟೋಮ್ಯಾಟಿಕ್ ಟ್ರಾನ್ಸಫರ್ ಆಫ್ ಮನಿ. ಕಾಂಗ್ರೆಸ್ ಅವರನ್ನು ಇಲ್ಲಿ ಕೂರಿಸಿದರೆ ಮೋದಿ ಅವರು ರಾಜ್ಯಕ್ಕೆ ಕಳಿಸಿದ ಹಣವನ್ನು ಇವರು ಡೆಲ್ಲಿ ಕಾಂಗ್ರೆಸ್‌ಗೆ ಕಳುಹಿಸುತ್ತಾರೆ. ಇಂತಹ ಸರ್ಕಾರ ನಿಮಗೆ ಬೇಕಾ? ಮೋದಿ ಕಳಿಸೋ ಹಣ ರಾಜ್ಯದ ಅಭಿವೃದ್ಧಿಗೆ ಸದ್ಬಳಕೆ ಆಗಬೇಕು ಅಂದರೆ ನೀವು ಬಿಜೆಪಿಗೆ ಮತ ಹಾಕಿ” ಎಂದು ಜೆ ಪಿ ನಡ್ಡಾ ಹೇಳಿದರು.

ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಚಲನಚಿತ್ರ ನಟ ಸುದೀಪ್, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಚಾಮರಾಜನಗರದಲ್ಲಿ ವಾಟಾಳ್‌ ಸ್ಪರ್ಧೆ; ಸೋಮಣ್ಣಗೆ ಮತ್ತೊಂದು ಸವಾಲು!

ರಾಜ್ಯದಲ್ಲಿ ಶಾಂತ ವಾತಾವರಣ ಇದೆ

“ಬಿಜೆಪಿ ಸರ್ಕಾರ ಪಿಎಫ್ಐ ಬ್ಯಾನ್ ಮಾಡಿದೆ. ಸಿದ್ದರಾಮಯ್ಯ ಪಿಎಫ್ಐ ಬ್ಯಾನ್ ಮಾಡಿದ್ದನ್ನು ಹಿಂಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ಪಿಎಫ್ಐ ಬ್ಯಾನ್ ಮುಂದುವರೆಯಬೇಕು ಅಂದರೆ ಕಮಲದ ಗುರುತಿಗೆ ಮತ ನೀಡಿ. ಬೊಮ್ಮಾಯಿ ಸರ್ಕಾರದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆ. ಇಂದು ರಾಜ್ಯದಲ್ಲಿನ ಅನೇಕ ಕ್ರಿಮಿನಲ್‌ಗಳು ಜೈಲಿನಲ್ಲಿದ್ದಾರೆ. ರಾಜ್ಯದಲ್ಲಿ ಶಾಂತಿ ಮತ್ತು ವಿಕಾಸಕ್ಕಾಗಿ ಕಮಲಕ್ಕೆ ಮತ ಹಾಕಬೇಕು. ಬೊಮ್ಮಾಯಿ ಅವರನ್ನು ನೀವು ಈಗಾಗಲೇ ಗೆಲ್ಲಿಸಿದ್ದೀರಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X