ಮೋದಿ ಮಾರ್ಗದರ್ಶನದಂತೆ ಸಿಲಿಂಡರ್‌ಗೆ ಪೂಜೆ ಮಾಡಿ ಮತದಾನ: ಡಿ ಕೆ ಶಿವಕುಮಾರ್

Date:

Advertisements

ಎಲ್ಲ ಬೂತ್ ಬಳಿ ಖಾಲಿ ಅಡುಗೆ ಅನಿಲ ಸಿಲಿಂಡರ್ ಇಟ್ಟು ಪೂಜೆ ಮಾಡಿ ಮತದಾನ ಮಾಡುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದ್ದೇನೆ. ಪ್ರಧಾನಿ ಅವರ ಮಾರ್ಗದರ್ಶನದಂತೆ ಈ ಸೂಚನೆ ನೀಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದರು.

ಕನಕಪುರದಲ್ಲಿ ಮತದಾನ ಮಾಡುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಕೆಂಕೇರಮ್ಮ ದೇವಿ ನಮ್ಮ ಮನೆ ದೇವರು. ನಾಮಪತ್ರ ಸಲ್ಲಿಕೆ ಮುನ್ನ ನಾವು ಇಲ್ಲಿ ಪೂಜೆ ಸಲ್ಲಿಸಿದ್ದೆವು. ಈಗ ಮತದಾನ ಮುನ್ನ ಪೂಜೆ ಸಲ್ಲಿಸುತ್ತಿದ್ದೇವೆ. ಇಲ್ಲಿಂದ ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ ನಂತರ ಮತದಾನ ಮಾಡುತ್ತಿದ್ದೇವೆ” ಎಂದರು.

“ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ನೆರವು ನೀಡಲು ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆ ಘೋಷಿಸಿದೆ. ಇಂದು ರಾಜ್ಯದಲ್ಲಿ ಬದಲಾವಣೆ ಮಾಡಿಕೊಳ್ಳುವ ದಿನ. ನಮ್ಮ ಭವಿಷ್ಯ ನಾವೇ ಬರೆದುಕೊಳ್ಳುವ ದಿನ. ನಮ್ಮ ಗ್ಯಾರಂಟಿ ಯೋಜನೆಗಳಿಗೆ ಮುದ್ರೆ ಒತ್ತುವ ದಿನ” ಎಂದರು.

Advertisements

“ನನ್ನ ಪುತ್ರ ಹಾಗೂ ಪುತ್ರಿ ಇಬ್ಬರೂ ಈ ಬಾರಿ ಮೊದಲ ಬಾರಿಗೆ ಮತದಾನ ಮಾಡುತ್ತಿದ್ದಾರೆ. ಹೊಸ ಮತದಾರರಿಗೆ ಮತದಾನದ ಹುಮ್ಮಸ್ಸು ಇರುತ್ತದೆ. ರಾಜ್ಯದ ಎಲ್ಲ ಯುವ ಮತದಾರರಿಗೆ ಶುಭ ಕೋರಿ, ರಾಜ್ಯಕ್ಕೆ ದೊಡ್ಡ ಬದಲಾವಣೆ ತರುವ ಜವಾಬ್ದಾರಿ ಇದ್ದು ಅದನ್ನು ಸಮರ್ಥವಾಗಿ ನಿಭಾಯಿಸುವಂತೆ ಸಲಹೆ ನೀಡುತ್ತೇನೆ. ಯುವ ಮತದಾರರು ಪ್ರಜ್ಞಾವಂತರಾಗಿದ್ದು, ಈ ದುರಾಡಳಿತವನ್ನು ಕೊನೆಗಾಣಿಸುತ್ತಾರೆ ಎಂದು ಭಾವಿಸಿದ್ದೇನೆ. ಈ ಯುವಕರಿಗೆ ಮತದಾನದ ಹಕ್ಕು ನೀಡಿದ್ದು ರಾಜೀವ್ ಗಾಂಧಿ ಅವರು. ಈ ಯುವ ಮತದಾರರು ಪ್ರಜಾಪ್ರಭುತ್ವದ ಆಚರಣೆ ಮಾಡಲಿ” ಎಂದು ತಿಳಿಸಿದರು.

ಸಚಿವ ಅಶೋಕ್ ನಿಮ್ಮ ವಿರುದ್ಧ ಸ್ಪರ್ಧೆ ಮಾಡಿದ್ದು, ಎಷ್ಟು ಅಂತರದಿಂದ ಗೆಲುವು ಸಾಧಿಸುತ್ತೀರಿ ಎಂದು ಕೇಳಿದಾಗ,”ಅಶೋಕ್ ಅವರು, ಮುಖ್ಯಮಂತ್ರಿಗಳು ಇಲ್ಲಿ ಬಂದು ಪ್ರಚಾರ ಮಾಡಿದ್ದಾರೆ. ಇದು ಗುಪ್ತ ಮತದಾನ, ಯಾರು ಗೆಲ್ಲುತ್ತಾರೆ ಎಂದು 13ರಂದು ನೋಡೋಣ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X