ಮದುವೆ, ಧಾರ್ಮಿಕ ಕಾರ್ಯಕ್ರಮಗಳ ದುರ್ಬಳಕೆ ಬಗ್ಗೆ ಕ್ರಮ: ಜಿಲ್ಲಾ ಚುನಾವಣಾಧಿಕಾರಿ

Date:

  • ಬಿಬಿಎಂಪಿ ನೂತನ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸುತ್ತಿದೆ: ಜಿಲ್ಲಾ ಚುನಾವಣಾಧಿಕಾರಿ
  • ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮತದಾನ ಕೇಂದ್ರಗಳಲ್ಲಿ ಸರತಿ ಸಾಲು ಮತ್ತು ಪಾರ್ಕಿಂಗ್ ಸ್ಲಾಟ್ ಲಭ್ಯತೆ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇರುವ ಹಿನ್ನಲೆ, ರಾಜಕೀಯ ಪ್ರಚಾರಕ್ಕಾಗಿ ಮದುವೆ, ಸಾಂಸ್ಕೃತಿಕ/ಧಾರ್ಮಿಕ ಕಾರ್ಯಕ್ರಮಗಳನ್ನು ದುರ್ಬಳಕೆ ಮಾಡಿಕೊಳ್ಳದಂತೆ ಎಚ್ಚರಿಕೆ ವಹಿಸಲಾಗುವುದು ಹಾಗೂ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಮೇಲೆ ನಿಗಾ ಇಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚುನಾವಣಾ ನೀತಿ ಸಂಹಿತೆ ಇರುವುದರಿಂದ ಮದುವೆ ಮತ್ತು ಇತರೆ ಯಾವುದೇ ಸಮಾರಂಭಗಳು ನಡೆಯಲು ನಿರ್ಬಂಧವಿರುವುದಿಲ್ಲ. ಆದರೆ, ಈ ಸಮಾರಂಭಗಳನ್ನು ಪಕ್ಷಗಳು ರಾಜಕೀಯವಾಗಿ ಬಳಸಿಕೊಂಡರೆ, ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದರು.

“ಚುನಾವಣಾ ಆಯೋಗದ ಸಹಯೋಗದೊಂದಿಗೆ ಬಿಬಿಎಂಪಿಯು ನೂತನ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸುತ್ತಿದೆ. ಇದು ಒಂದು ವಾರದಲ್ಲಿ ಸಿದ್ಧವಾಗಲಿದೆ. ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಯಾದ ಒಂದು ವಾರದವರೆಗೆ ಪರೀಕ್ಷಾ ಉದ್ದೇಶಗಳಿಗೆ ಕಾರ್ಯನಿರ್ವಹಿಸುತ್ತದೆ. ನಂತರದ ದಿನಗಳಲ್ಲಿ ಇದು ಸಾರ್ವಜನಿಕರ ಬಳಕೆಗೆ ಸಿದ್ಧವಾಗಲಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆರೋಗ್ಯ ಮಾಹಿತಿಗಾಗಿ ಆನ್‌ಲೈನ್‌ನಲ್ಲಿ ಹೆಚ್ಚು ಹುಡುಕಾಟ ನಡೆಸುತ್ತಿರುವ ಯುವಕರು : ನಿಮ್ಹಾನ್ಸ್ ಅಧ್ಯಯನ

“ಈ ನೂತನ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮತದಾನ ಕೇಂದ್ರಗಳಲ್ಲಿ ಸರತಿ ಸಾಲು ಮತ್ತು ಪಾರ್ಕಿಂಗ್ ಸ್ಲಾಟ್ ಲಭ್ಯತೆಯನ್ನು ಪರಿಶೀಲಿಸಲು ಸಹಕಾರಿಯಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ...

ಬೆಂಗಳೂರು | ರಜಾ ದಿನಗಳಂದು ಬೆಸ್ಕಾಂ ಕ್ಯಾಶ್‌ ಕೌಂಟರ್‌ಗಳಲ್ಲಿ ಸೇವೆ

ವಿದ್ಯುತ್‌ ಬಿಲ್‌ ಪಾವತಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಬೆಂಗಳೂರು ವಿದ್ಯುತ್...

ಖ್ಯಾತ ನಿರ್ದೇಶಕ ಶ್ರೀಪಾದ ಭಟ್‌ಗೆ ‘ರಂಗ ಭೂಪತಿ’ ಪ್ರಶಸ್ತಿ

ಖ್ಯಾತ ನಾಟಕಕಾರ ದಿ. ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ...

ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ...