ದ್ವಿತೀಯ ಪಿಯು ಫಲಿತಾಂಶ | ಅನುತ್ತೀರ್ಣ ವಿದ್ಯಾರ್ಥಿ ಆತ್ಮಹತ್ಯೆ

Date:

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣಳಾದ ಕಾರಣದಿಂದಾಗಿ ಮನನೊಂದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಮೃತ ಯುವತಿಯನ್ನು ಜೆಎಸ್‌ಎಸ್ ಮಹಿಳಾ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಎಂದು ಗುರುತಿಸಲಾಗಿದೆ. ಆಕೆ ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ತಿಳಿದು ಬಂದಿದೆ. ಚಾಮರಾಜನಗರದ ಹಾಸ್ಟೆಲ್‌ನಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ.

ಮಾ.9ರಿಂದ ಆರಂಭಗೊಂಡ ಪರೀಕ್ಷೆಯ ಫಲಿತಾಂಶ ನಡೆದ ಪರೀಕ್ಷೆಗಳ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಯಿತು. ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಗ್ರಾಮದ ನಿವಾಸಿ ವಿಜಯಲಕ್ಷ್ಮಿ ಎನ್ನಲಾಗಿದೆ. ‘ಕಂಪ್ಯೂಟರ್ ಸೈನ್ಸ್’ ವಿದ್ಯಾರ್ಥಿನಿಯಾಗಿದ್ದ ವಿಜಯಲಕ್ಷ್ಮಿ, ಪರೀಕ್ಷೆ ಮುಗಿದ ನಂತರ ಸಿಇಟಿ ಸಿದ್ಧತೆ ಮಾಡಿಕೊಳ್ಳುವುದಕ್ಕಾಗಿ ಹಾಸ್ಟೆಲ್ ನಲ್ಲಿದ್ದಳು. ಶುಕ್ರವಾರ ಬೆಳಿಗ್ಗೆ ಫಲಿತಾಂಶ ನೋಡಿದ್ದಾರೆ. ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣಗೊಂಡಿರುವುದು ತಿಳಿಯುತ್ತಿದ್ದಂತೆಯೇ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗೊತ್ತಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ದ್ವಿತೀಯ ಪಿಯುಸಿ | ಫಲಿತಾಂಶ ಹೇಗೆ ಬರಲಿ ಸ್ವೀಕರಿಸುವ ಮನೋಭಾವವಿರಲಿ

ನೆನಪಿಡಿ: ಬದುಕಿನ ಪರೀಕ್ಷೆ ಗೆಲ್ಲುವುದು ಮುಖ್ಯ. ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ: ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ...

2024-25ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಶಾಲೆಗಳು ಆರಂಭ

2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು,...

ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...